ನಶಿಸುತ್ತಿರುವ ಜನಪದ ಕಲೆಗಳ ಉಳಿವಿಗೆ ಸರಕಾರ ಪಣ

ರಾಜ್ಯವ್ಯಾಪಿ ಕನ್ನಡ ಸಂಸ್ಕೃತಿ-ಮೂಲ ಸಂಸ್ಕೃತಿ ಅಭಿಯಾನ

Team Udayavani, Jan 4, 2023, 6:35 AM IST

ನಶಿಸುತ್ತಿರುವ ಜನಪದ ಕಲೆಗಳ ಉಳಿವಿಗೆ ಸರಕಾರ ಪಣ

ಕಾರ್ಕಳ: ರಾಜ್ಯದ ಅಪರೂಪದ, ಬೆಳಕಿಗೆ ಬಾರದಿರುವ, ನಶಿಸುತ್ತಿರುವ ಕಲೆಗಳಿಗೆ ಪ್ರೋತ್ಸಾಹ ಕೊಡುವ ಹಾಗೂ ಕಲೆಗಳಿಗೆ ಆಧುನಿಕ ಸ್ಪರ್ಶ ನೀಡಿ ಯುವ ಸಮೂಹವನ್ನು ಆಕರ್ಷಿಸುವ ನಿಟ್ಟಿನಲ್ಲಿ 2 ತಿಂಗಳ ಕಾಲ “ಕನ್ನಡ ಸಂಸ್ಕೃತಿ-ಮೂಲ ಸಂಸ್ಕೃತಿ’ ಹೆಸರಿನ ವಿನೂತನ ಅಭಿಯಾನವನ್ನು ರಾಜ್ಯವ್ಯಾಪಿ ನಡೆಸಲು ಸರಕಾರ ನಿರ್ಧರಿಸಿದೆ.

ಅಭಿಯಾನವನ್ನು ಆರಂಭಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸರಕಾರಕ್ಕೆ ಪ್ರಸ್ತಾವನೆ ಹೋಗಿದೆ. ಸರಕಾರದಿಂದ ಒಪ್ಪಿಗೆ ದೊರೆತ ಕೂಡಲೇ ಚಾಲನೆ ಸಿಗಲಿದೆ. ಜನವರಿಯಲ್ಲೇ ಆರಂಭಿಸುವ ಚಿಂತನೆ ಇದೆ.

ಯಾವೆಲ್ಲ ಕಲಾಪ್ರಕಾರಗಳಿವೆ
ಲಾವಣಿ ಹಾಡು, ಗರತಿ ಹಾಡು, ಕೋಲಾಟದ ಪದಗಳು, ನಲ್ಲಹರಕೆಗಳು, ದೇವರಗುಡ್ಡದ ಪದಗಳು, ಯಕ್ಷಗಾನ ಬಯಲಾಟ, ತೊಗಲು ಗೊಂಬೆಯಾಟ, ಹುಲಿವೇಷ, ಸುಗ್ಗಿಯ ಕುಣಿತ, ತಾಳವಾದ್ಯ, ಬೀಸು ಕಂಸಾಳೆ, ಕಮಸಾಲಿ, ಉಮ್ಮತಲ್‌, ಪೂಜಾ ಕುಣಿತ, ಕೃಷ್ಣ ಪಾರಿಜಾತ, ಜಗ್ಗಲಿಕೆ ಕುಣಿತ, ಚೌಡಿಕೆ ಮೇಳ, ಸೋಮನ ಕುಣಿತ, ಗೊರವರ ಕುಣಿತ, ವೀರಗಾಸೆ, ಯಕ್ಷಗಾನ, ಭೂತಾರಾಧನೆ, ನಾಗಮಂಡಲ ಸೇರಿದಂತೆ 60ಕ್ಕೂ ಅಧಿಕ ಕಲಾ ಪ್ರಕಾರಗಳು ಕಾಣಬರುತ್ತಿದ್ದು, ಇನ್ನು ಅನೇಕ ಕಲಾಪ್ರಕಾರಗಳು ಸಮಾಜದ ಮುಖ್ಯವಾಹಿನಿಗೆ, ಬಾರದೆ ತೆರೆಮರೆಯಲ್ಲೆ ಇವೆ.

ಅಭಿಯಾನ ಹೇಗೆ?
ಅಭಿಯಾನದ ಯಶಸ್ಸಿಗೆ ಜಿಲ್ಲೆ, ವಿಭಾಗ ಮಟ್ಟದಲ್ಲಿ ಅಧಿಕಾರಿಗಳು, ವಿದ್ವಾಂಸರು, ಅನುಭವಿ ಕಲಾವಿದರನ್ನೊಳಗೊಂಡ ಸಮಿತಿ ರಚಿಸಲಾಗುತ್ತದೆ. ಆರಂಭದಲ್ಲಿ ಕಲಾ ಪ್ರಕಾರಗಳನ್ನು ಗುರುತಿಸಲಾಗುತ್ತದೆ. ಶಿಬಿರ, ತರಬೇತಿ ನೀಡಿ, ಪ್ರದರ್ಶನಗೊಳಿಸುವುದು. ಜಿಲ್ಲಾ ಮಟ್ಟ, ವಿಭಾಗ ಮಟ್ಟದಲ್ಲಿ ನಡೆಸಿ ರಾಜ್ಯಮಟ್ಟಕ್ಕೆ ವಿಸ್ತರಿಸಲಾಗುತ್ತದೆ.

ಸರಕಾರದ ಬಳಿ ಕಲೆಗಳ ಸಮಗ್ರ ದಾಖಲೆ ಇಲ್ಲ
ಊರು ಕೇರಿ, ಹಾದಿ ಬೀದಿ ಬದಲಾದಂತೆ ಒಂದು ಕಡೆಯಿಂದ ಇನ್ನೊಂದು ಕಡೆಗಿನ ಜನಜೀವನದಲ್ಲಿ ಭಾಷೆ. ಪರಂಪರೆ, ಕಲೆ, ಸಂಸ್ಕೃತಿಯಲ್ಲಿ ಸಾಕಷ್ಟು ಭಿನ್ನತೆ ಕಂಡುಬರುತ್ತದೆ. ಇಂದಿನ ಆಧುನಿಕ ಯುಗ, ಯಂತ್ರ, ತಂತ್ರಜ್ಞಾನ, ವಿಜ್ಞಾನ ಹೀಗೆ ಎಲ್ಲ ವಿಷಯಗಳಲ್ಲಿ ಪ್ರಗತಿ ಸಾಧಿಸುತ್ತಲೇ ಮೂಲ ಸಂಸ್ಕೃತಿಯನ್ನು ಅಳಿವಿನಂಚಿಗೆ ತಳ್ಳಿ ಮರೆತು ಬಿಡುತ್ತಿದ್ದೇವೆ ಎನ್ನುವ ದೂರುಗಳು ಜನಪದ ಕಲಾವಿದರಲ್ಲಿದೆ. ನಾಡಿನ ನೆಲ -ಜಲದಲ್ಲಿ ಈ ಜಾನಪದದ ಗ್ರಂಥವಿದ್ದು, ಈ ಬಗ್ಗೆ ಅಧ್ಯಯನ ಮಾದರಿಯಲ್ಲಾಗಲಿ, ಸಮಗ್ರ ಮಾಹಿತಿಯಲ್ಲಾಗಲಿ ಸರಕಾರದ ಬಳಿ ಇಲ್ಲ.

ನಶಿಸುತ್ತಿರುವ ಕಲೆಗಳನ್ನು ಪುನರುಜ್ಜೀವನಗೊಳಿಸುವ ಯತ್ನವಿದು. ಆಚಾರ-ಪದ್ಧತಿಗಳು ಪ್ರದೇಶದಿಂದ ಪ್ರದೇಶಕ್ಕೆ ವ್ಯತ್ಯಾಸವಾಗುತ್ತವೆ. ಹೊಸ ಯುವಕರು ಅನುಸರಿಸುತ್ತಿಲ್ಲ. ಅವರಿಗೆ ಗೊತ್ತಿಲ್ಲ. ಇವೆಲ್ಲವನ್ನೂ ತಿಳಿಸಲು ಅಭಿಯಾನ. ಪ್ರದೇಶವಾರು ಆಧುನಿಕತೆಗೆ ಸ್ಪರ್ಶ ಕೊಟ್ಟು ನಡೆಸಲು ತೀರ್ಮಾನಿಸಲಾಗಿದೆ.
– ವಿ. ಸುನಿಲ್‌ ಕುಮಾರ್‌, ಇಂಧನ, ಕನ್ನಡ, ಸಂಸ್ಕೃತಿ ಸಚಿವ

ನಿರ್ದಿಷ್ಟವಾಗಿ ಇಂತಿಷ್ಟೇ ಪ್ರಕಾರಗಳು ಇವೆ ಎಂದು ಹೇಳಲಾಗದು. ಸುಮಾರು 50ರಿಂದ 60 ಕಲೆಗಳು ಎಂದು ಗುರುತಿಸಲಾಗಿದೆ. ಜಿಲ್ಲೆಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದೇವೆ. ಪ್ರಸ್ತಾವಕ್ಕೆ ಅಂಕಿತ ಬಿದ್ದ ತತ್‌ಕ್ಷಣ ಚಾಲನೆ ನೀಡಲಿದ್ದೇವೆ. ದಿನ ಅಂತಿಮವಾಗಿಲ್ಲ.
– ಬಲವಂತ ಪಾಟೀಲ್‌, ಜಂಟಿ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.