“ಮಹಾತ್ಮ’ರ ಹೆಸರಲ್ಲಿದೆ ಮೈದಾನ, ಉದ್ಯಾನವನ


Team Udayavani, Aug 14, 2018, 6:00 AM IST

1308kdpp3.jpg

ಕುಂದಾಪುರ: ದೇಶ 72ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಈ ಸ್ವಾತಂತ್ರ್ಯಗೋಸ್ಕರ ಅದೆಷ್ಟೋ ಮಹನೀಯರು 90 ವರ್ಷಗಳ ಸುದೀರ್ಘ‌ ಹೋರಾಟವನ್ನೇ ನಡೆಸಿದ್ದಾರೆ. ಬ್ರಿಟಿಷರ ಲಾಠಿ ಬೂಟಿಗೆ ಬೆದರದೆ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಟ್ಟೆ ತೀರುವೇ ಎನ್ನುವ ಛಲ ತೊಟ್ಟ ಮಹಾನುಭಾವರ ತ್ಯಾಗ, ಬಲಿದಾನದಿಂದ ನಾವಿಂದು ಸರ್ವ ಸ್ವತಂತ್ರರಾಗಿದ್ದೇವೆ. 

ಕುಂದಾಪುರದಲ್ಲಿಯೂ ಮೈದಾನ, ಉದ್ಯಾನವನ, ರಸ್ತೆ, ಸರ್ಕಲ್‌ಗ‌ಳಿಗೆ ಅಂತಹ ಮಹಾತ್ಮರ ಹೆಸರುಗಳನ್ನು ನಾಮಕರಣ ಮಾಡುವ ಮೂಲಕ ಅವರ ಹೋರಾಟದ ಬದುಕಿಗೊಂದು ಗೌರವ ಕೊಡಲಾಗಿದೆ. 

ಗಾಂಧಿ ಪಾರ್ಕ್‌
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಹೆಸರಲ್ಲಿರುವ “ಗಾಂಧಿ ಪಾರ್ಕ್‌’ ನಗರದಲ್ಲಿರುವ ಏಕೈಕ ಉದ್ಯಾನವನ ವಾಗಿದೆ. ನಿತ್ಯ ನೂರಾರು ಮಂದಿ ಇಲ್ಲಿಗೆ ವಿಹಾರಕ್ಕೆ ಬರುತ್ತಾರೆ. ವಿಶ್ರಾಂತಿ ಪಡೆದು ಹೋಗುತ್ತಾರೆ. ಆದರೆ ವಿಶಾಲವಾದ ಜಾಗದಲ್ಲಿ, ಉತ್ತಮವಾದ ಪ್ರದೇಶದಲ್ಲಿ ಈ ಪಾರ್ಕ್‌ ಇದ್ದರೂ, ಸರಿಯಾದ ನಿರ್ವಹಣೆ ಯಿಲ್ಲದೆ ಸೊರಗಿದೆ. ಕುಡಿಯುವ ನೀರಿನ ಘಟಕವೂ ಸರಿಯಿಲ್ಲ. 

ಶಾಸ್ತ್ರಿ ಸರ್ಕಲ್‌
ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಪ್ರಧಾನಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ನೆನಪಿನಲ್ಲಿ ಕುಂದಾಪುರದಲ್ಲಿ ಶಾಸ್ತ್ರಿ ಸರ್ಕಲ್‌ ನಿರ್ಮಿಸಲಾಗಿದೆ. ಶಾಸ್ತ್ರಿ ಅವರ ಚಂದದ ಪ್ರತಿಮೆಯೂ ಇದೆ. ಪ್ರಯಾಣಿಕರಿಗೆ ಅಥವಾ ಪ್ರವಾಸಿಗರಿಗೆ ಕುಳಿತುಕೊಳ್ಳಲು ಕಲ್ಲಿನ ಬೆಂಚುಗಳಿವೆ. ಹೈಮಾಸ್ಟ್‌ ದೀಪ ಇದೆ. ವಿಶೇಷ ಸಮಾರಂಭಗಳಲ್ಲಿ, ರಾಷ್ಟ್ರೀಯ ಹಬ್ಬಗಳ ಸಂದರ್ಭ ಶಾಸ್ತ್ರಿ ಪ್ರತಿಮೆಗೆ ಹಾರ ಹಾಕಲಾಗುತ್ತದೆ. ಇಲ್ಲಿ ಕುಳಿತುಕೊಳ್ಳಲು ಬೆಂಚುಗಳಿವೆ. ಆದರೆ ನಿರ್ವಹಣೆಯಿಲ್ಲದ ಕಾರಣ ಕೂರಲಾಗದು. ವೃತ್ತ ಎಂದು ಹೆಸರಿದ್ದರೂ ವೃತ್ತ ಇಲ್ಲ, ಬೇಲಿಯಿಲ್ಲ. ಹುಲ್ಲು ಬೆಳೆದಲ್ಲಿ ಹಸುಗಳು ಬಂದು ಮೇಯುತ್ತಿರುತ್ತದೆ. 

ಗಾಂಧಿ ಮೈದಾನ
ಗಾಂಧಿ ಪಾರ್ಕ್‌ ಪಕ್ಕದಲ್ಲೇ ಗಾಂಧಿ ಮೈದಾನವಿದ್ದು, ತಾಲೂಕು ಮೈದಾನವಾಗಿದೆ. ಪ್ರತಿ ವರ್ಷ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವ ದಿನಾಚರಣೆ ನಡೆಯುತ್ತದೆ. ಬೇರೆ – ಬೇರೆ ಕ್ರೀಡಾಕೂಟ ನಡೆಯುತ್ತವೆ. 
ನೆಹರೂ ಮೈದಾನ ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರ್‌ಲಾಲ್‌ ನೆಹರೂ ಅವರ ಹೆಸರಲ್ಲಿರುವ ನೆಹರೂ ಮೈದಾನ ಕೇವಲ ಹೆಸರಿಗಷ್ಟೇ ಮೈದಾನವಾಗಿದೆ. ಇಲ್ಲಿ ಯಾವುದೇ ಕ್ರೀಡಾಕೂಟಗಳು ನಡೆಯುತ್ತಿಲ್ಲ. ಶಾಲಾ ಮಕ್ಕಳಿಗೆ ಆಟ ವಾಡಲೂ ಅವಕಾಶವಿಲ್ಲ. ಆಗೊಮ್ಮೆ- ಈಗೊಮ್ಮೆ ಯಕ್ಷಗಾನ ವಷ್ಟೇ ನಡೆಯು ತ್ತದೆ. ಇದು ವಲಸೆ ಕಾರ್ಮಿಕರ ಅಡ್ಡವಾಗಿ ಮಾರ್ಪಾಡಾಗಿದೆ. ಇದು ಕೂಡ ಸಮರ್ಪಕವಾದ ನಿರ್ವಹಣೆಯಿಲ್ಲದೆ ನಿಷ್ಪಯೋಜಕವಾಗಿದೆ. 

ಸ್ವಾತಂತ್ರ್ಯ ಹೋರಾಟಗಾರರು ಹೆಸರಲ್ಲಿ ರಸ್ತೆ ಕುಂದಾಪುರ ಪುರಸಭೆ ವ್ಯಾಪ್ತಿ ಯಲ್ಲಿಯೂ ಸ್ವಾತಂತ್ರ್ಯ ಹೋರಾಟ ಗಾರರ ಸ್ಮರಣೆ ನಡೆದಿದೆ. ಟಿ.ಟಿ. ರಸ್ತೆ (ತಾತ್ಯಾ ಟೋಪಿ ರಸ್ತೆ), ಜೆಎಲ್‌ಬಿ ರಸ್ತೆ (ಝಾನ್ಸಿ ರಾಣಿ ಲಕ್ಷ್ಮೀಬಾಯಿ ರಸ್ತೆ), ಶಾಂತಿ ನಿಕೇತನ ಪಕ್ಕ ಭಗತ್‌ ಸಿಂಗ್‌ ರಸ್ತೆ, ಬೋರ್ಡ್‌ ಹೈಸ್ಕೂಲ್‌ ಪಕ್ಕ ಚಂದ್ರಶೇಖರ ಆಝಾದ್‌ ರಸ್ತೆ, ಮಂಗಲ್‌ಪಾಂಡೆ ರಸ್ತೆ ಹೀಗೆ ರಸ್ತೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರು ಇಡಲಾಗಿದೆ. ಆದರೆ ಆ ರಸ್ತೆಗಳಿಗೆ ಪೂರ್ಣ ಹೆಸರಿನಿಂದ ಕರೆಯದೇ ಅರ್ಧ ಹೆಸರಿನಿಂದ ಕರೆಯುವ ಮೂಲಕ ಅನೇಕ ಮಹಾನ್‌ ಸ್ವಾತಂತ್ರ್ಯ ಹೋರಾಟಗಾರರಿಗೆ ಅಗೌರವ ಉಂಟು ಮಾಡಲಾಗುತ್ತಿದೆ. 

ಭಾರತೀಯ ಸ್ವಾತಂತ್ರ್ಯ ಹೋರಾಟದ ಅಮರ ಕಥೆಗಳನ್ನು ಬಲ್ಲ ಈ ತಲೆಮಾರಿನ ಯುವಜನತೆ ಈ ಸಂತಸದ ಶುಭ ಘಳಿಗೆಗೆ ಕಾರಣರಾದ ವೀರ ಯೋಧರನ್ನು ಸ್ಮರಿಸುವುದು ಆದ್ಯ ಕರ್ತವ್ಯ ಕೂಡ. ಆದರೆ ಅವರ ಹೆಸರಲ್ಲಿ ಉದ್ಯಾನವನ, ಮೈದಾನ, ರಸ್ತೆಗಳನ್ನು ನಿರ್ಮಿಸಿ, ಅದನ್ನು ಸರಿಯಾಗಿ ನಿರ್ವಹಿಸದಿದ್ದರೆ ಮಾತ್ರ ಅವರಿಗೆ ಅಗೌರವ ತೋರಿದಂತೆ ಸರಿ. 

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.