ಜೀವನದಲ್ಲಿ ಯಶಸ್ಸಿಗೆ ಕಠಿನ ಶ್ರಮ ಮಾತ್ರ ದಾರಿ: ಬಿಷಪ್‌


Team Udayavani, Jun 11, 2019, 6:00 AM IST

1006KDLM9PH

ಕುಂದಾಪುರ: ವಿದ್ಯಾರ್ಥಿಗಳು ತಾವು ಏನಾಗಬೇಕೆಂಬ ಸ್ಪಷ್ಟ ಗುರಿ ಹೊಂದಿರಬೇಕು. ಜೀವನದಲ್ಲಿ ಯಶಸ್ಸು ಗಳಿಸಲು ಕಠಿನ ಶ್ರಮ ಬಿಟ್ಟರೆ ಬೇರೆ ದಾರಿಯಿಲ್ಲ. ಅಸಾಧ್ಯ ಮತ್ತು ಅನುತ್ತೀರ್ಣ ಎಂಬ ಪದಗಳು ನಿಮ್ಮ ಶಬ್ದ ಕೋಶದಲ್ಲಿ ಇರಬಾರದು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ| ಜೆರಾಲ್ಡ್‌ ಐಸಾಕ್‌ ಲೋಬೊ ಅವರು ಹೇಳಿದರು.

ಇಲ್ಲಿನ ಸಂತ ಮೇರಿಸ್‌ ಪಿ.ಯು. ಕಾಲೇಜಿನ ಪ್ರಾರಂಭೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೀವನದಲ್ಲಿ ಪ್ರಯತ್ನ ಪಡುತ್ತಲೇ ಇರಬೇಕು. ಥಾಮಸ್‌ ಆಲ್ವಾ ಎಡಿಸನ್‌ ಹಲವಾರು ಬಾರಿ ಪ್ರಯೋಗಗಳಲ್ಲಿ ಸಫಲನಾಗದಿದ್ದರೂ, ಛಲದಿಂದ ಪ್ರಯತ್ನ ಪಡುತ್ತಾ ಕೊನೆಗೆ ಯಶಸ್ಸನ್ನು ಪಡೆದು ಜಗತ್ತಿಗೆ ಬೆಳಕು ನೀಡಿದ. ಅವರಂತೆ ನಿಮ್ಮ ಪ್ರಯತ್ನ ಸಾಗಲಿ ಎಂದರು.

ವೈದ್ಯೆ ಡಾ| ರೆನ್ನಿ ವಿಲ್ಸನ್‌, ಪ್ರಪಂಚದಲ್ಲಿ ಯಶಸ್ಸು ಪಡೆದವರ ಬಗ್ಗೆ ತಿಳಿದುಕೊಂಡರೆ, ಅವರುಗಳು ಕಷ್ಟ ಪಟ್ಟು ಪರಿಶ್ರಮ ಪಟ್ಟು ಯಶಸ್ಸು ಗಳಿಸಿದ್ದಾರೆ. ನೀವು ಏನಾಗಬೇಕೆಂದು ಮೊದಲು ಕನಸು ಕಾಣಬೇಕು. ಅದನ್ನು ಸಾಕಾರಗೊಳಿಸಲು ಕಠಿನ ಪರಿಶ್ರಮ ಪಡಿ. ಆಗ ನಿಮಗೆ ಯಶಸ್ಸು ದೊರಕುತ್ತದೆ ಎಂದರು.

ಕಾಲೇಜಿನ ಜಂಟಿ ಕಾರ್ಯದರ್ಶಿ ಫಾ| ಸ್ಟ್ಯಾನಿ ತಾವ್ರೊ, ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳು, ಕಾಲೇಜಿನ ಶಿಸ್ತನ್ನು ರೂಢಿಸಿಕೊಳ್ಳಬೇಕು ಎಂದರು.

ಧರ್ಮಾಧ್ಯಕ್ಷರು ಕಾಲೇಜಿನ ಮ್ಯಾಗಜಿನ್‌ ಬ್ಲೊಸಮ್‌ನ್ನು ಉದ್ಘಾಟನೆ ಮಾಡಿದರು.

ದ್ವಿತಿಯ ಪಿ.ಯು.ಸಿ. ಪ್ರಥಮ ಪಿ.ಯು.ಸಿ. ಮತ್ತು ಎಸೆಸೆಲ್ಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದವರನ್ನು ಗೌರವಿಸಲಾಯಿತು. ವರ್ಗಾವಣೆಗೊಂಡ ರೋಜರಿ ಚರ್ಚ್‌ನ ಧರ್ಮಗುರು ಫಾ| ರೋಯ್‌ ಲೋಬೊ ಅವರಿಗೆ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು.

ಪ್ರಾಂಶುಪಾಲ ಫಾ| ಪ್ರವೀಣ್‌ ಅಮೃತ್‌ ಮಾರ್ಟಿಸ್‌ ಕಾಲೇಜಿನ ಬಗ್ಗೆ, ಕಾಲೇಜಿನ ನೀತಿ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಿದರು.

ಸಹಾಯಕ ಧರ್ಮಗುರು ಫಾ| ವಿಜಯ್‌ ಡಿ’ಸೋಜಾ, ವಿದ್ಯಾರ್ಥಿಗಳ ಪೋಷಕರ ಪ್ರತಿನಿಧಿಯಾಗಿ ವೇಲಾ ಬ್ರಗಾಂಜಾ, ದೇವದಾಸ್‌ ವಿ.ಜೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಉಪ ಪ್ರಾಂಶುಪಾಲೆ ಮಂಜುಳಾ ನಾಯರ್‌ ಸ್ವಾಗತಿಸಿದರು. ಪ್ರಾಧ್ಯಾಪಕಿಯರಾದ ಅಸ್ಮಿತಾ ಕೊರೆಯಾ, ಸ್ವಾತಿ, ನಿಶಾ ಸುವಾರಿಸ್‌ ಮತ್ತು ವಿದ್ಯಾರ್ಥಿನಿ ಮೇಲಿಟಾ ಡಿಸೋಜಾ ನಿರ್ವಹಿಸಿದರು. ಮೇಲಿÅಯಾ ಕ್ರಾಸ್ತಾ ವಂದಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.