ಸಮಾಜ ಸೇವೆಯಲ್ಲಿರುವ ಗೌರವ ರಾಜಕೀಯದಲ್ಲಿಲ್ಲ


Team Udayavani, Apr 7, 2018, 6:00 AM IST

2.jpg

ಯು.ಆರ್‌. ಸಭಾಪತಿ ಜತೆ 1990ರಿಂದ ರಾಜಕೀಯ ರಂಗದಲ್ಲಿ ಗುರುತಿಸಿಕೊಂಡು, ನಗರಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ ನಿತ್ಯಾನಂದ ಒಳಕಾಡು 1999ರಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಸೋಲು ಕಂಡವರು. “ಉಡುಪಿ ಜಿಲ್ಲಾ ನಾಗರಿಕ ಸಮಿತಿ’ ಹೆಸರಿನಲ್ಲಿ ಸಮಾಜಸೇವೆ ನಿರತರಾಗಿರುವ ಇವರು ತಮ್ಮದೇ ಆದ 2 ಆ್ಯಂಬುಲೆನ್ಸ್‌ಗಳನ್ನು ಹೊಂದಿದ್ದು ಉಡುಪಿ ಪರಿಸರದ ಎಲ್ಲೇ ಅಪಘಾತಗಳಾಗಲಿ, ಸಹಜ ಸಾವು ಸಂಭವಿಸಲಿ ನೆರವಿಗೆ ಧಾವಿಸುತ್ತಾರೆ. ದಿನದ 24 ತಾಸೂ ಈ ಸೇವೆ ಉಚಿತವಾಗಿ ಲಭ್ಯ. ತಮ್ಮ ರಾಜಕೀಯ, ಸಾಮಾಜಿಕ ಕ್ಷೇತ್ರಗಳ ಅನುಭವವನ್ನು “ಮಾತಿನ ಮತ’ದಲ್ಲಿ ಹೀಗೆ ಹಂಚಿಕೊಂಡಿದ್ದಾರೆ.

ಪಕ್ಷೇತರರಾಗಿ ಸ್ಪರ್ಧಿಸಿದ್ದು ಯಾಕೆ?
ನಾನು ಹಿಂದಿನಿಂದಲೂ ಯು.ಆರ್‌. ಸಭಾಪತಿ ಅವರ ಬೆಂಬಲಿಗ, ಅವರು ಯಾವ ಪಕ್ಷಕ್ಕೆ ಹೋದರೂ ಅವರನ್ನು ಬೆಂಬಲಿಸುತ್ತಿದ್ದೆ. ಮಧ್ಯೆ ಕೆಲವೊಂದು ವಿಚಾರದಲ್ಲಿ ಅವರೊಂದಿಗೆ ಉಂಟಾದ ಮನಸ್ತಾಪದಿಂದ ಮತ್ತು ನನ್ನ ಹಿತೈಷಿಗಳ ಒತ್ತಾಯಕ್ಕೆ ಮಣಿದು ಅವರ ವಿರುದ್ಧವೇ ನಾನು ಪಕ್ಷೇತರನಾಗಿ ಸ್ಪರ್ಧಿಸಬೇಕಾಯಿತು.

ನಗರಸಭಾ ಸದಸ್ಯರಾಗಿ ನಿಮ್ಮ ಸೇವೆ?
ಜಿಲ್ಲಾ ನಾಗರಿಕ ಸಮಿತಿಯ ನೇತೃತ್ವದಲ್ಲಿ ಕಳೆದ ಅವಧಿಯಲ್ಲಿ ನಾನು ಪಕ್ಷೇತರ ಅಭ್ಯರ್ಥಿಯಾಗಿ 31ನೇ ಬೈಲೂರು ವಾರ್ಡ್‌ಗೆ ನಗರಸಭಾ ಸದಸ್ಯನಾಗಿದ್ದೆ. ಆಗ ನನಗೆ ನನ್ನ ಬೈಲೂರು ವಾರ್ಡ್‌ ಬಿಟ್ಟರೆ ಬೇರೆ ವಾರ್ಡ್‌ನ ಜನರ ಕಷ್ಟ ಸುಖಕ್ಕೆ ಸ್ಪಂದಿಸುವ ಅವಕಾಶ ಇರಲಿಲ್ಲ. ಆದರೂ ನಾನು ಎಲ್ಲ ವಾರ್ಡ್‌ಗಳಿಗೆ ಹೋಗಿ ಕೆಲಸ ಮಾಡುತ್ತಿದ್ದೆ. ನನಗೆ ಎಲ್ಲ ಜಾತಿ, ಮತ, ಪಕ್ಷದವರು ಬೇಕು. ಹೆಣ ತೆಗೆದುಕೊಂಡು ಹೋಗುವಾಗ ಅವ ಕಾಂಗ್ರೆಸ್‌, ಇವ ಬಿಜೆಪಿ ಎಂದು ನೋಡಲಿಕ್ಕೆ ಆಗುತ್ತದಾ?

ಕೇಂದ್ರ, ರಾಜ್ಯ ಸರಕಾರದ ಕುರಿತು ಅಭಿಪ್ರಾಯ?
ಕೇಂದ್ರ ಸರಕಾರದ ಜಿಎಸ್‌ಟಿಯಿಂದ ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊಡೆತ ಉಂಟಾಗಿದೆ. ಸಾಕಷ್ಟು  ಮಂದಿ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಕೇಂದ್ರ ಯಾವುದೇ ಉದ್ಯೋಗವನ್ನು ಸೃಷ್ಟಿ ಮಾಡಿಲ್ಲ. ರಾಜ್ಯ ಸರಕಾರವೂ ಕೂಡ ಹಲವಾರು ಭಾಗ್ಯಗಳನ್ನು ನೀಡಿದೆಯಾದರೂ ಯುವಕರಿಗೆ ಉದ್ಯೋಗ ಭಾಗ್ಯವನ್ನು ಕೊಟ್ಟಿಲ್ಲ.

ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸಿದ್ದೀರಾ?
ಸಮಾಜಸೇವೆಗೆ ಇರುವಷ್ಟು ಗೌರವ ರಾಜಕೀಯದಲ್ಲಿ ಇಲ್ಲ. ರಾಜಕೀಯದಲ್ಲಿ ಜನರು ಎದು ರಿನಲ್ಲಿ ಚೆನ್ನಾಗಿ ಮಾತನಾಡುತ್ತಾರೆ. ತಮ್ಮ ಕೆಲಸ ಆಗದಿದ್ದರೆ ಜನಪ್ರತಿನಿಧಿಯ ಜತೆಗೆ ಆತನ ಅಪ್ಪ ಆಮ್ಮನನ್ನೂ ಸೇರಿಸಿ ಬೈಯುತ್ತಾರೆ. ಸಮಾಜಸೇವೆಯಲ್ಲಿ ಸಿಗುವಷ್ಟು ತೃಪ್ತಿ ಎಲ್ಲೂ ಸಿಗದು. ಹಾಗಾಗಿ ಸಮಾಜಸೇವೆಯೇ ನನ್ನ ಮೊದಲ ಆದ್ಯತೆ.

ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.