ಅಕ್ರಮ ಮರಳು ದಂಧೆಗೆ ಬಿದ್ದಿಲ್ಲ ಪೂರ್ಣ ಕಡಿವಾಣ


Team Udayavani, Mar 7, 2019, 12:30 AM IST

0503kdlm5ph.jpg

ಕುಂದಾಪುರ: ಮರಳುಗಾರಿಕೆ ನಡೆಸಲು ಕುಂದಾಪುರ ತಾಲೂಕಿನಲ್ಲಿ ಯಾವುದೇ ಮರಳು ಅಡ್ಡೆ ಗುರುತಿಸಿಲ್ಲ. ಪರಿಣಾಮ ತಾಲೂಕಿನಲ್ಲಿ ಕಳೆದ 1 ವರ್ಷದಿಂದ ಮರಳಿನ ಕೊರತೆಯಿದ್ದು ವಿವಿಧೆಡೆ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. 

ಸೌಪರ್ಣಿಕಾ ನದಿ, ವಾರಾಹಿ ಸಹಿತ ವಿವಿಧ ನದಿ, ಹೊಳೆಗಳಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಮೊಳಹಳ್ಳಿ, ಕಂಡೂÉರು, ತ್ರಾಸಿಯ ಕಳವಿನಬಾಗಿಲು, ಹಡವು ಪಡುಕೋಣೆ, ಸಿದ್ದಾಪುರ, ಬೈಂದೂರಿನ ಬಡಾಕೆರೆ ಭಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಮೊವಾಡಿ, ಆನಗೋಡು, ಸಣ್ಣಕುಂಬ್ರಿ, ಮೆಕ್ಕೆಯಿಂದ ತ್ರಾಸಿ ಮೂಲಕ ಲಾರಿಗಳಲ್ಲಿ ಮರಳು ಸಾಗಿಸಲಾಗುತ್ತಿದೆ. ಅಕ್ರಮ ಮರಳುಗಾರಿಕೆ ನಿಷೇಧದೊಂದಿಗೆ ಸಕ್ರಮ ಮರಳುಗಾರಿಕೆಗೆ ಅವಕಾಶ ನೀಡಬೇಕೆಂಬ ಬೇಡಿಕೆ ಕೇಳಿಬರುತ್ತಿದೆ.

ರಾತ್ರಿ ಅಕ್ರಮ
ರಾತ್ರಿ 10 ಗಂಟೆಯಿಂದ ಮುಂಜಾವಿನ 5 ಗಂಟೆವರೆಗೆ ಮರಳುಗಾರಿಕೆ, ಸಾಗಾಟ ಇತ್ಯಾದಿ ನಡೆಯುತ್ತದೆ. ಇದಕ್ಕೆ ರಾಜಕೀಯ ವ್ಯಕ್ತಿಗಳ ಕೃಪಾಕಟಾಕ್ಷ ಇದೆ. ಆದ್ದರಿಂದ ಪೊಲೀಸರು ಹಾಗೂ ಇತರ ಇಲಾಖೆಗಳ ಅಧಿಕಾರಿಗಳ ಕೈ ಕಟ್ಟಿಹಾಕಿದಂತಾಗಿದೆ. ಅಕ್ರಮ ಸಾಗಾಟದ ಮರಳಿಗೆ ಲೋಡಿಗೆ 22 ಸಾವಿರ ರೂ.ವರೆಗೂ ಬಿಕರಿಯಾಗುತ್ತದೆ.
 
ಮಾಹಿತಿ, ದಾಳಿ
ತ್ರಾಸಿಯ ಅಕ್ರಮ ಮರಳುದಂಧೆ ಕುರಿತು ಸ್ಥಳೀಯರು ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಗ ಸ್ಥಳಕ್ಕೆ ಬಂದು ಪರಿಶೀಲಿಸಿ ಹೋಗಿದ್ದರು. ಆದರೆ ಹಗಲು ಹೊತ್ತಿನಲ್ಲಿ ಯಾವುದೇ ಕುರುಹು ಇಲ್ಲದಂತೆ, ರಾತ್ರಿ ವೇಳೆ ಕಾರ್ಯಾಚರಣೆ ನಡೆಸುವ ಕಾರಣ ಅಧಿಕಾರಿಗಳು ಹಗಲು ಬಂದರೆ ಬರಿಕೈಯಲ್ಲಿ ಹೋಗಬೇಕಾಗುತ್ತದೆ. ಜಿಲ್ಲೆಗೆ ನೂತನವಾಗಿ ಬಂದ ಎಸ್‌ಪಿಯವರು ಮರಳು ಅಡ್ಡೆಗೆ ಕಡಿವಾಣ ಹಾಕಲು ನಿರ್ಧರಿಸಿದಂತಿದೆ. ತಾಲೂಕಿನ ಮೊಳಹಳ್ಳಿ, ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ವಕ್ಕೇರಿ ಮೊದಲಾದೆಡೆ ದಾಳಿ ನಡೆಸಿದ್ದಾರೆ.

ಕಾರ್ಮಿಕರು
ಎಲ್ಲೆಡೆ ಮರಳುಗಾರಿಕೆಗೆ ಸ್ಥಳೀಯರ ಬದಲು ಬಿಹಾರ ಮೂಲದ ಕಾರ್ಮಿಕರನ್ನು ಬಳಸಲಾಗುತ್ತದೆ. ಇವರಿಗೆ ಕಡಿಮೆ ವೇತನ ಸಾಕಾಗುತ್ತದೆ, ರಾತ್ರಿ ಕಾರ್ಯಾಚರಣೆಗೆ ನೆರವಾಗುತ್ತಾರೆ, ಮಾಹಿತಿ ಸೋರಿಕೆ ಮಾಡುವುದಿಲ್ಲ ಎನ್ನುವ ವಿಶ್ವಾಸ ದಂಧೆ
ಕೋರರದ್ದು. ಈ ಹಿಂದೆ ಕಂಡೂÉರಿನಲ್ಲಿ ಉಡುಪಿ ಜಿಲ್ಲಾಧಿಕಾರಿ ಹಾಗೂ ಕುಂದಾಪುರ ಎಸಿಯವರು ಮರಳು ಅಡ್ಡೆಗೆ ದಾಳಿ ನಡೆಸಿದಾಗ ಅಧಿಕಾರಿಗಳ ಮೇಲೆ ಹಲ್ಲೆಗೈದದ್ದು ಇಂಥದ್ದೇ ಬಿಹಾರ ಕಾರ್ಮಿಕರು. ಬಹುತೇಕ ಕಡೆ ಸಾಂಪ್ರದಾಯಿಕ ಮರಳುಗಾರಿಕೆ ಮಾಡಲಾಗುತ್ತಿದೆ. ಸಾಗಾಟ ವಾಹನದ ಸದ್ದು ಮಾತ್ರ ಜನರಿಗೆ ಕೇಳುತ್ತದೆ. ರಾತ್ರಿವೇಳೆ ಚೆಕ್‌ಪಾಯಿಂಟ್‌ಗಳನ್ನು ನಿರ್ಮಿಸಿಕೊಂಡಿದ್ದು ದಾಳಿ ನಡೆಸಲು ಬರುವ ಅಧಿಕಾರಿಗಳ ಚಲನವಲನದ ಮಾಹಿತಿ ಕೂಡಲೇ ರವಾನಿಸುವ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಹಾಗಾಗಿ ಸ್ಥಳೀಯರೂ ಓಡಾಡಲು ಅಂಜುವ ವಾತಾವರಣ ಇದೆ.
 
ನದಿಯಲ್ಲಿ  ಆಳಟನ್‌ಗಟ್ಟಲೆ ಮರಳು ತೆಗೆದ ಪರಿಣಾಮ ನದಿಯಲ್ಲಿ ಆಳ ಉಂಟಾಗಿದೆ. ಇದರಿಂದಾಗಿ ಸ್ಥಳೀಯರಿಗೆ ನದಿಯಿಂದ ಮರುವಾಯಿ (ಮಳಿ) ಸಂಗ್ರಹ ಕೂಡ ಸಾಧ್ಯವಿಲ್ಲ. ಹಿಂದೆ ನೂರಾರು ಮಂದಿ ಮಹಿಳೆಯರು ಮರುವಾಯಿ ಸಂಗ್ರಹಿಸಿ ಮಾರಾಟ ಮಾಡಿ ಜೀವನೋಪಾಯ ನಡೆಸುತ್ತಿದ್ದರು. ಈಗ ಅದಕ್ಕೂ ಕಲ್ಲು ಬಿದ್ದಿದೆ. 
 
ಕಾನೂನಾತ್ಮಕವಾಗಿ ತೆಗೆಯಲು ಬಿಡಲಿ
ಮರಳು ಇಲ್ಲದೇ ಕಟ್ಟಡ, ಮನೆ ಸೇರಿದಂತೆ ಸರಕಾರಿ ಯೋಜನೆಗಳು ನನೆಗುದಿಗೆ ಬಿದ್ದಿವೆ. ಕಾರ್ಮಿಕರಿಗೂ ಕೆಲಸ ಇಲ್ಲ.  ಸಮುದ್ರ ತಡೆಗೋಡೆ ನಿರ್ಮಾಣ ಸಂದರ್ಭ ಸಂಗ್ರಹಿಸಿದ ಮರಳನ್ನು ಕೋಡಿಯಲ್ಲಿ ಸಂಗ್ರಹಿಸಲಾಗಿದ್ದು ಅದನ್ನು ಸರಕಾರಿ ದರದಲ್ಲಿ ಕೊಡುವಂತೆ ಈ ಹಿಂದೆ ಆದೇಶಿಸಲಾಗಿತ್ತು. ಮರಳುಗಾರಿಕೆಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಈಗ ಕೊಡಲಾಗುತ್ತಿಲ್ಲ. ಆದರೆ ಕುಂದಾಪುರಕ್ಕೆ ಅಧಿಕೃತ ಮರಳುದಿಬ್ಬ ಇಲ್ಲದ ಕಾರಣ ಸಮಸ್ಯೆ ಮುಂದುವರಿದಿದೆ. 

ಮರಳು ದೊರೆಯುವಂತಾಗಲು ಪ್ರಯತ್ನಿಸುತ್ತೇವೆ
ಈ ಭಾಗದಲ್ಲಿ ಸಾಕಷ್ಟು ಮರಳಿದೆ. ಆದರೆ ಕಾನೂನು ರೀತ್ಯಾ ತೆಗೆಯಲು ಪ್ರಕ್ರಿಯೆಗಳು ನಡೆಯಬೇಕಿದೆ. ಈ ಕುರಿತು ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು. ಜನರಿಗೆ ಮರಳು ದೊರೆಯದಿದ್ದರೆ ಎಂಸ್ಯಾಂಡ್‌ ಬಳಸಬಹುದು. ಆದರೆ ಇಲ್ಲಿ ಎಂಸ್ಯಾಂಡ್‌ ಘಟಕ ಇಲ್ಲದಿದ್ದ ಕಾರಣ ಪ್ರಾಕೃತಿಕ ಮರಳು ಅನಿವಾರ್ಯ. ಸಾಮಾನ್ಯ ಜನರಿಗೆ ಮರಳು ದೊರೆಯುವಂತೆ ಮಾಡಲಾಗುವುದು. ಅಕ್ರಮಗಳಿಗೆ ಕಡಿವಾಣ ಹಾಕಲಾಗುವುದು. ಈ ಭಾಗಕ್ಕೆ ಮರಳು ದೊರೆಯುವಂತೆ ಮಾಡಲು ಅಗತ್ಯವುಳ್ಳ ಶಿಫಾರಸು ಮಾಡಲಾಗುವುದು.
– ಮಧುಕೇಶ್ವರ್‌
ಸಹಾಯಕ ಕಮಿಷನರ್‌, ಕುಂದಾಪುರ

ಕಡಿವಾಣ ಹಾಕಲಾಗುತ್ತಿದೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ಬಂದಾಗ ದಾಳಿ ನಡೆಸಿದ್ದೇವೆ. ಇದು ಮುಂದುವರಿಯುತ್ತದೆ. ಅಕ್ರಮಗಳಿಗೆ ಕಡಿವಾಣ ಹಾಕಲು ಇಲಾಖೆ ಬದ್ಧವಿದೆ. 
– ಬಿ.ಪಿ. ದಿನೇಶ್‌ ಕುಮಾರ್‌
ಡಿವೈಎಸ್‌ಪಿ, ಕುಂದಾಪುರ ಉಪವಿಭಾಗ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.