ಜೆಡಿಎಸ್‌ಗೆ ಎದುರಾದ ಅಗ್ನಿಪರೀಕ್ಷೆ


Team Udayavani, Mar 15, 2019, 12:30 AM IST

jds.jpg

ಉಡುಪಿ: ಕಾಂಗ್ರೆಸ್‌-ಜೆಡಿಎಸ್‌ ಟಿಕೆಟ್‌ ಹಗ್ಗಜಗ್ಗಾಟದಲ್ಲಿ ಉಡುಪಿ  -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ದಕ್ಕಿದೆ. ಇಲ್ಲಿ ಜೆಡಿಎಸ್‌ ದುರ್ಬಲವಾಗಿದ್ದರೂ ಇಂದಿರಾ ಗಾಂಧಿ ಗೆದ್ದು ಪ್ರಧಾನಿಯಾದ ಕ್ಷೇತ್ರವನ್ನು  ಕಾಂಗ್ರೆಸ್‌ ಬಿಟ್ಟುಕೊಟ್ಟದ್ದು ಮತ್ತು ಜೆಡಿಎಸ್‌ ಪಡೆದುಕೊಂಡದ್ದು ಎರಡೂ ಅಚ್ಚರಿ. 

ಲೋಕಸಭಾ ಚುನಾವಣೆ: ಪಡೆದ ಮತ
2014ರ ಲೋಕಸಭಾ ಚುನಾವಣೆಯಲ್ಲಿ ಚಲಾವಣೆ ಯಾದ 10,34,108 ಮತಗಳಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆಗೆ 5,81,168, ಕಾಂಗ್ರೆಸ್‌ನ ಜಯಪ್ರಕಾಶ್‌ ಹೆಗ್ಡೆಯವರಿಗೆ 3,99,525, ಜೆಡಿಎಸ್‌ನ ವಿ. ಧನಂಜಯ ಕುಮಾರರಿಗೆ 14,895 ಮತಗಳು ದೊರಕಿದ್ದವು. ಆಗ ಪೈಪೋಟಿ ಇದ್ದದ್ದು ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ. ಜೆಡಿಎಸ್‌ ಆರಂಕಿಯನ್ನೂ ತಲುಪಿ ರಲಿಲ್ಲ. ಹಾಗೆ ನೋಡಿದರೆ 2012 ರ ಲೋಕಸಭಾ ಉಪ ಚುನಾವಣೆಯಲ್ಲೇ ಒಟ್ಟು ಚಲಾಯಿತ ಮತಗಳ 8, 52, 824 ಮತಗಳ ಪೈಕಿ ಜೆಡಿಎಸ್‌ ಅಭ್ಯರ್ಥಿ ಭೋಜೇಗೌಡರು 72, 080 ಮತಗಳನ್ನು ಪಡೆದಿದ್ದರು. ಆಗ ಕಾಂಗ್ರೆಸ್‌ನ ಜಯಪ್ರಕಾಶ್‌ ಹೆಗ್ಡೆ 3,98,723 ಪಡೆದು ಆಯ್ಕೆಯಾಗಿದ್ದರು. ಬಿಜೆಪಿಯ ವಿ. ಸುನಿಲ್‌ಕುಮಾರ್‌ 3,52,999 ಮತ ಪಡೆದಿದ್ದರು. 2009ರ ಚುನಾವಣೆಯಲ್ಲೂ ಬಿಜೆಪಿಯ ಸದಾನಂದ ಗೌಡರು 4,01,441 ಗಳಿಸಿ ಗೆದ್ದಿದ್ದರೆ, ಕಾಂಗ್ರೆಸ್‌ನ ಜಯಪ್ರಕಾಶ್‌ ಹೆಗ್ಡೆಯವರು 3,74,423 ಮತ ಗಳಿಸಿದ್ದರು. ಆಗ ಜೆಡಿಎಸ್‌ ಸ್ಪರ್ಧಿಸಿ ರಲಿಲ್ಲ. ಅಂದರೆ ಕಾಂಗ್ರೆಸ್‌ ನಿರ್ದಿಷ್ಟ ಸಂಖ್ಯೆಯ ಮತದಾರರ ಬೆಂಬಲವಿದ್ದರೆ, ಲಕ್ಷ ಮತ ಗಳಿಸಲೂ ಜೆಡಿಎಸ್‌ ಪ್ರಯಾಸ ಪಟ್ಟಿರುವುದು ಸ್ಪಷ್ಟ. 

ಈ ಮಧ್ಯೆ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾದ ಡಾ| ಆರತಿ ಕೃಷ್ಣರಿಗೆ ಜೆಡಿಎಸ್‌ ಅಧ್ಯಕ್ಷ ಎಚ್‌.ಡಿ. ದೇವೇಗೌಡರು ಬುಧವಾರ ರಾತ್ರಿ ದೂರವಾಣಿ ಕರೆ ಮಾಡಿ ಸ್ಪರ್ಧೆಗೆ ಆಹ್ವಾನಿಸಿದ್ದಾರೆನ್ನಲಾಗಿದೆ. ಆದರೆ ಆರತಿಯವರು ದಿಲ್ಲಿಗೆ ತೆರಳಿ ಕಾಂಗ್ರೆಸ್‌ನಿಂದ ಟಿಕೆಟ್‌ ಗೆ ಪ್ರಯತ್ನಿಸುತ್ತಾರೆನ್ನಲಾಗಿದೆ.  ಆರತಿಯವರ ತಂದೆ ಬೇಗಾನೆ ರಾಮಯ್ಯನವರಿಗೂ ದೇವೇಗೌಡರಿಗೂಉತ್ತಮ ಸಂಬಂ ಧವಿದೆ. ಹೀಗಾಗಿ ಆರತಿಯವರು ಕಾಂಗ್ರೆಸ್‌ನಿಂದ ಸ್ಪರ್ಧಿಸಲು ದೇವೇಗೌಡರ ಸಹಕಾರ ಯಾಚಿಸಿದ್ದರು. 

ಇದರ ನಡುವೆಯೇ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಮತ್ತೂಬ್ಬ ಟಿಕೆಟ್‌ ಆಕಾಂಕ್ಷಿ ಎಐಸಿಸಿ ಸದಸ್ಯ ಅಮೃತ್‌ ಶೆಣೈ, ಪಕ್ಷದ ಹೈಕಮಾಂಡ್‌ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವೆ. ಬಳಿಕ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿ ಪಕ್ಷೇತರ ನಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದಿದ್ದಾರೆ.  ಜೆಡಿಸ್‌ಗೆ ತಮಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಕ್ಷೇತ್ರವಾರು ಬಿಜೆಪಿಯು 3,55,518 ಮತ ಪಡೆದಿದ್ದರೆ, ಕಾಂಗ್ರೆಸ್‌ 2,33,586 ಗಳಿಸಿತ್ತು. ಜೆಡಿಎಸ್‌ಗೆ  6,589 ಮತಗಳು ಲಭಿಸಿತ್ತು. 

ಹಾಗೆಯೇ ಚಿಕ್ಕಮಗಳೂರು ಕ್ಷೇತ್ರವಾರು ಲೆಕ್ಕದ ಪ್ರಕಾರ ಬಿಜೆಪಿಗೆ  2,35,377 ಮತಗಳು ದಕ್ಕಿದ್ದರೆ, ಕಾಂಗ್ರೆಸ್‌ಗೆ 1,86,853 ಸಿಕ್ಕಿತ್ತು. ಜೆಡಿಎಸ್‌ ತುಸು ಸಮಾಧಾನಕಾರವೆಂಬ ಸಾಧನೆ ಪ್ರದರ್ಶಿಸಿ  84,753 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿತ್ತು. 

ಜೆಡಿಎಸ್‌ ಸಾಧನೆ
ಲೋಕಸಭಾ ಚುನಾವಣೆಯಲ್ಲಿ ಅತಿ ಕಡಿಮೆ ಮತ ಗಳಿಸಿದ್ದು ಮತ್ತು ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಐದಂಕಿ ಮುಟ್ಟದ ಜೆಡಿಎಸ್‌ ಅಭ್ಯರ್ಥಿಗಳು ಚಿಕ್ಕಮಗ ಳೂರು ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾಧಾನಕರ ಮತ ಪಡೆದದ್ದು ಗೋಚರಿಸುತ್ತದೆ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಗಳು ವೈಯಕ್ತಿಕ ವರ್ಚಸ್ಸಿನ ಆಧಾರದಲ್ಲಿ ಮತ ಗಳಿಸಿರಬಹುದು. 8 ವಿಧಾನಸಭಾ ಕ್ಷೇತ್ರಗಳ ಪೈಕಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಆದ ಕಾರಣ ಬಿಜೆಪಿ ಬಳಿಕ ಕಾಂಗ್ರೆಸ್‌ ಉತ್ತಮ ಸ್ಥಿತಿಯಲ್ಲಿದೆ. 

“ಎರಡೂ ಜಿಲ್ಲೆಗಳ ಕಾಂಗ್ರೆಸ್‌ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದರೆ ಸ್ಥಾನ ಕೈತಪ್ಪುವುದನ್ನು ತಡೆಯಬಹುದಿತ್ತು ಎನ್ನುತ್ತಾರೆ ಕೆಲವು ಕಾಂಗ್ರೆಸ್‌ ನಾಯಕರು.

ಟಯರ್‌ ಸುಟ್ಟು ಕಾಂಗ್ರೆಸ್‌ ಪ್ರತಿಭಟನೆ
ಉಡುಪಿ: ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದನ್ನು ವಿರೋಧಿಸಿ ಗುರುವಾರ ರಾತ್ರಿ ಜಿಲ್ಲಾ ಕಾಂಗ್ರೆಸ್‌ ಭವನದ ಎದುರು ಕಾಂಗ್ರೆಸ್‌ ಮತ್ತು ಯುವ ಕಾಂಗ್ರೆಸ್‌ ಕಾರ್ಯಕರ್ತರು ಟಯರ್‌ ಸುಟ್ಟು ಪ್ರತಿಭಟನೆ ನಡೆಸಿದರು. ನಾಯಕರಾದ ವಿಶ್ವಾಸ್‌ ಅಮೀನ್‌, ಯತೀಶ ಕರ್ಕೇರ, ಪ್ರಖ್ಯಾತ ಶೆಟ್ಟಿ, ಮಹಮ್ಮದ್‌ ಇಮ್ರಾನ್‌ ಪಾಲ್ಗೊಂಡಿದ್ದರು.

ಮೈಸೂರು- ಉಡುಪಿ ಅದಲು ಬದಲು?
ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಸ್ಪರ್ಧಿಸಿ ಮೈಸೂರನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಸಾಧ್ಯತೆ ಇದೆಯೆ? ಬುಧವಾರದ ಮಾತುಕತೆಯಲ್ಲಿ ಡಾ| ಜಿ. ಪರಮೇಶ್ವರ್‌ ಅವರ ತುಮಕೂರನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು ಸಿದ್ದರಾಮಯ್ಯನವರ ಮೈಸೂರನ್ನು ಉಳಿಸಿಕೊಳ್ಳಲಾಯಿತು. ಈಗ ಅದನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಬಗ್ಗೆ ಮಾತುಕತೆ ಸಾಧ್ಯತೆ ಇದೆ ಎನ್ನುತ್ತವೆ ಮೂಲಗಳು.

–  ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.