ಮನೆಗಳಿಗೆ ತಿರುಗಿ ಹಾಡು ಹೇಳುವ ಕಿನ್ನರಿ ಜೋಗಿಗಳು 


Team Udayavani, Oct 6, 2018, 6:30 AM IST

0510kota1e.jpg

ಕೋಟ: ತಲೆಗೆ ರುಮಾಲು ಸುತ್ತಿ,ಬಣ್ಣದ ನಿಲುವಂಗಿ ತೊಟ್ಟು, ಕೊರಳಿಗೆ ಮಣಿ ಸರ ಧರಿಸಿ, ಹಣೆಗೆ ವಿಭೂತಿ-ಹೆಗಲಿಗೊಂದು ಜೋಳಿಗೆ, ಕೈಯಲ್ಲಿ ಕೋಲು ಕಿನ್ನರಿ ಹಿಡಿದು ಹಾಡುಗಳನ್ನ ಹಾಡುತ್ತ  ಮನೆಗೆ ಭೇಟಿಕೊಡುವ ಕಿನ್ನರಿ ಜೋಗಿ ಬಗ್ಗೆ ಎಲ್ಲರಿಗೂ ತಿಳಿದಿದೆ. ಇವರ ಈ ಆಚರಣೆಯ ಹಿಂದೆ ಒಂದಷ್ಟು ವಿಶೇಷತೆ ಇದ್ದು, ಕರಾವಳಿಗೂ ಇವರಿಗೂ ಅವಿನಾಭಾವ ನಂಟಿದೆ.ಕಿನ್ನರಿ ಬಾರಿಸುವುದರಿಂದ ಕಿನ್ನರಿ ಜೋಗಿ ಕಿನ್ನರಿ ಜೋಗಿಗಳಲ್ಲಿ  ಹೆಚ್ಚಿನವರು ಮಲೆನಾಡು, ಬಯಲುಸೀಮೆಯವರು. ಕಿನ್ನರಿ ಬಾರಿಸುವುದರಿಂದ ಇವರಿಗೆ ಈ ಹೆಸರು ಬಂತು ಎನ್ನುವ ಐತಿಹ್ಯವಿದೆ. 

ಇವರ ಕೈಯಲ್ಲಿರುವ ಸೋರೆ ಬುರುಡೆಯಿಂದ ಮಾಡಿದ ಸಂಗೀತವಿದ್ದು ಇದನ್ನು ಬಿದಿರಿನ ಕೋಲು, ಚೆಕ್ಕೆ, ಜೇನುಮೇಣ, ತಂತಿ ಬಳಸಿ ಇದನ್ನು ತಯಾರಿಸಲಾಗುತ್ತದೆ. ಇದರ ತಂತಿಯನ್ನು ಹೆಬ್ಬರಳಿಗೆ ಸಿಕ್ಕಿಸಿಕೊಂಡ ಗಗ್ಗರದಿಂದ ಮೀಟಿ, ಶ್ರುತಿಗೆ ಸರಿಹೊಂದುವಂತೆ ಹಾಡು ಹೇಳುತ್ತಾರೆ. 

ಹಿಂದೆ ಇವರು ವರ್ಷ 
ಪೂರ್ತಿ ಊರೂರು ತಿರುಗಿ ಅಲೆಮಾರಿಗಳಂತೆ ಜೀವನ ನಡೆಸುತ್ತಿದ್ದರು. ಆದರೆ ಇದೀಗ ವರ್ಷದಲ್ಲಿ ಒಂದೆರಡು ತಿಂಗಳು ಮಳೆಗಾಲದಲ್ಲಿ ಮಾತ್ರ ಕಾಣಸಿಗುತ್ತಾರೆ. ಮಿಕ್ಕುಳಿದ ದಿನದಲ್ಲಿ ಊರಿನಲ್ಲಿ ಬೇರೆ-ಬೇರೆ ಕೆಲಸ ನಿರ್ವಹಿಸುತ್ತಾರೆ.

ಮಹಾಭಾರತದ ಸನ್ನಿವೇಶಗಳ ವರ್ಣನೆ
ಪಾಂಡವರ ವಂಶಸ್ಥರು ಎಂದು ಕರೆದು ಕೊಳ್ಳುವ ಇವರು ಮಹಾಭಾರತದ  ವನವಾಸ, ಜೂಜಾಟ, ವಸ್ತ್ರಾಪಹರಣ ಸನ್ನಿವೇಶಗಳನ್ನು ಹಾಡಿನ ರೂಪದಲ್ಲಿ ಕಟ್ಟಿಕೊಡುತ್ತಾರೆ. ಇವರಲ್ಲಿ  ಕೆಲವರು ಮಹಾಭಾರತದ ಹತ್ತು- ಹದಿಮೂರು ಪರ್ವ ಗಳನ್ನು ಬಾಯಿಪಾಠ ಮಾಡಿ ಹಾಡುವ ಗಟ್ಟಿಗರಿದ್ದಾರೆ.

ಕಟ್ಟುಕಟ್ಟಲೆ ಸೇವೆ
ವರ್ಷಕ್ಕೊಮ್ಮೆ ಬೇರೆ-ಬೇರೆ ಊರಿಗೆ ತೆರಳಿ ಹಾಡು ಹಾಡಿ ಹಣ, ಧವಸ ಧಾನ್ಯಗಳನ್ನು ಸಂಗ್ರಹಿಸಿ ಕುಲದೇವ ಭೆ„ರವ ಸ್ವಾಮಿ ಮತ್ತು ಗುರು ಪೀಠಕ್ಕೆ ಕಾಣಿಕೆ ಸಲ್ಲಿಸಿ ಊರಿಗೆ ತೆರಳಬೇಕು ಎನ್ನುವುದು ಇವರಲ್ಲಿ ತಲೆತಲಾಂತರದಿಂದ ಬಂದ ಸಂಪ್ರದಾಯವಾಗಿದ್ದು ಇದನ್ನು ಪಾಲಿಸದಿದ್ದರೆ ದೇವರ ಕೋಪಕ್ಕೆ ತುತ್ತಾಗಬೇಕು ಎನ್ನುವ ಭಯವಿದೆ. ಮಕ್ಕಳು ವಿದ್ಯಾವಂತರಾಗಿರುವುದರಿಂದ ಕೆಲವರು ಆರ್ಥಿಕವಾಗಿಯೂ ಸದೃಢರಾಗಿದ್ದಾರೆ. ಆದರೆ ಧಾರ್ಮಿಕ ನಂಬಿಕೆ ಗಟ್ಟಿಯಾಗಿರುವುದರಿಂದ ಮನೆಯಲ್ಲೊಬ್ಬರು ಅಥವಾ ಕುಟುಂಬದಲ್ಲೊಬ್ಬರು  ವರ್ಷದಲ್ಲಿ ಒಂದು ತಿಂಗಳು ಊರೂರು ತಿರುಗಾಟ ನಡೆಸುತ್ತಾರೆ. 

ಕರಾವಳಿಯ ಜತೆ ವಿಶೇಷ ನಂಟು
ಕಿನ್ನರಿ ಜೋಗಿಗಳಿಗೆ ಕರಾವಳಿಯ ವಿಶೇಷ ನಂಟಿದೆ.  ಇವರ  ಗುರು ಪೀಠವಿರುವುದು ಕರಾವಳಿಯಲ್ಲಿ ಹಾಗೂ  ಕೃಷ್ಣ ಜನ್ಮಾಷ್ಠಮಿಯಿಂದ  ನವರಾತ್ರಿ ಕೊನೆಯ ತನಕ  ಮಂಗಳೂರಿನಿಂದ ಭಟ್ಕಳ ತನಕ ಇವರು ತಿರುಗಾಟ ನಡೆಸುತ್ತಾರೆ. ಕರಾವಳಿಗರ ಆತಿಥ್ಯ ಇವರಿಗೆ ಅಚ್ಚುಮೆಚ್ಚು.  ಹೀಗಾಗಿ ಇವರ  ಬಹುತೇಕ ತಿರುಗಾಟ ಕರಾವಳಿಗೆ ಸೀಮಿತಗೊಂಡಿದೆ.

ಕುಲದೇವರಿಗೆ ಕಾಣಿಕೆ
ನಾನು ಸುಮಾರು 40ವರ್ಷದಿಂದ ಈ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದೇನೆ. ವರ್ಷದಲ್ಲಿ ಒಂದು ಬಾರಿ ನಾವು  ಇದನ್ನು ಕಡ್ಡಾಯವಾಗಿ ಆಚರಣೆ ಮಾಡಬೇಕು. ಹಿಂದೆ ನಮ್ಮೂರಿನಲ್ಲಿ ಸುಮಾರು 500ಮಂದಿ ಈ ಆಚರಣೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಆದರೆ ಇದೀಗ 50 ಮಂದಿ ಕಾಣಸಿಗುತ್ತಾರೆ. ಹಾಡು ಹೇಳಿ ಮನೆಯವರು ಕೊಟ್ಟ ಹಣವನ್ನು ಸ್ವೀಕರಿಸಿ ಒಳ್ಳೆದಾಗಲಿ ಎಂದು ಹರಸಿ ಕುಲದೇವರಿಗೆ ಕಾಣಿಕೆ ಸಲ್ಲಿಸುತ್ತೇವೆ.
– ಸಿದ್ದಪ್ಪ  ದಾವಣಗೆರೆ, 
ಕಿನ್ನರಿ ಜೋಗಿ

– ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.