ಭೂಪರಿವರ್ತನೆ ಪ್ರಕ್ರಿಯೆ; ಆನ್‌ಲೈನ್‌ನಲ್ಲೂ ಮಧ್ಯವರ್ತಿಗಳದ್ದೇ ಆಟ


Team Udayavani, Nov 27, 2020, 6:12 AM IST

ಭೂಪರಿವರ್ತನೆ ಪ್ರಕ್ರಿಯೆ; ಆನ್‌ಲೈನ್‌ನಲ್ಲೂ ಮಧ್ಯವರ್ತಿಗಳದ್ದೇ ಆಟ

ಸಾಂದರ್ಭಿಕ ಚಿತ್ರ

ಉಡುಪಿ: ಭೂಪರಿವರ್ತನೆ ಪ್ರಕ್ರಿಯೆ; ಆನ್‌ಲೈನ್‌ನಲ್ಲೂ ಮಧ್ಯವರ್ತಿಗಳದ್ದೇ ಆಟರಾಜ್ಯಾದ್ಯಂತ ಭೂ ಪರಿವರ್ತನೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಜಾರಿಗೊಳಿಸಿದ್ದ ಆನ್‌ಲೈನ್‌ ವ್ಯವಸ್ಥೆ ಸಮರ್ಪಕವಾಗಿ ಜಾರಿಯಾಗದೆ ಕಗ್ಗಂಟಾಗಿಯೇ ಮುಂದುವರಿದಿದೆ. ಇದರಿಂದ ಜನ ಸಾಮಾನ್ಯರು ಭೂಪರಿ ವರ್ತನೆಗೆ ಹರಸಾಹಸ ಪಡುತ್ತಿದ್ದಾರೆ.

ಈ ಹಿಂದೆ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಪರಿವರ್ತಿಸಲು 25ಕ್ಕೂ ಅಧಿಕ ದಾಖಲೆಗಳನ್ನು ಸಲ್ಲಿಸ ಬೇಕಿತ್ತು. ಮಾತ್ರವಲ್ಲದೇ ಪ್ರತಿ ಹಂತ ದಲ್ಲೂ ಲಂಚ ನೀಡದಿದ್ದರೆ ಕಡತ ಮುಂದುವರಿಯುತ್ತಿರಲಿಲ್ಲ. ಇಂತಹ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕಳೆದ ವರ್ಷ ಭೂ ಪರಿವರ್ತನೆಗೆ ಆನ್‌ಲೈನ್‌ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಇಲ್ಲಿಯೂ ದಲ್ಲಾಳಿಗಳು ಕಮಿಷನ್‌ ಗಿಟ್ಟಿಸಿಕೊಳ್ಳುತ್ತಿದ್ದಾರೆ.

ಆದೇಶ ಏನು ಹೇಳುತ್ತದೆ?
ಲ್ಯಾಂಡ್‌ ರೆಕಾರ್ಡ್ಸ್‌ (landrecords.karnataka.gov.in) ವೆಬ್‌ಸೈಟ್‌ನಲ್ಲಿ ಲಾಗ್‌ ಇನ್‌ ಐಡಿ ಸೃಷ್ಟಿಸಿ ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿ ಚಾಲ್ತಿ ವರ್ಷದ ಪಹಣಿ ಪತ್ರಿಕೆ, ಭೂಮಿಯ ಹಕ್ಕು ವರ್ಗಾವಣೆ ದಾಖಲೆ ಪತ್ರ ಅಪ್‌ಲೋಡ್‌ ಮಾಡಬೇಕು. ಇನ್ನು ಸರ್ವೇ ಸಂಖ್ಯೆಯೊಂದರಲ್ಲಿ ಭಾಗಶಃ ಭೂ ಪರಿ ವರ್ತನೆಗೆ ಬಯಸಿದ್ದರೆ 11-ಇ ನಕ್ಷೆಯ ಪ್ರತಿ ಸಲ್ಲಿಸಬೇಕಾಗುತ್ತದೆ. ಮುಂದಿನ ಎಲ್ಲ ಪ್ರಕ್ರಿಯೆ ಆನ್‌ಲೈನ್‌ನಲ್ಲಿ ನಡೆಯುತ್ತದೆ. ಈ ಬಗ್ಗೆ ತಹಶೀಲ್ದಾರ್‌ ಕಚೇರಿ ಸೇರಿ ಸಂಬಂಧಿಸಿದ ಪ್ರಾಧಿ ಕಾರಗಳು 30 ದಿನದೊಳಗೆ ಆನ್‌ಲೈನ್‌ನಲ್ಲಿಯೇ ಅಭಿಪ್ರಾಯ ಹಾಗೂ ಆಕ್ಷೇಪಣೆ ಸಲ್ಲಿಸಬೇಕು. ಈ ಅವಧಿಯಲ್ಲಿ ಅಭಿಪ್ರಾಯ ನೀಡದಿದ್ದರೆ ಮುಂದಾಗುವ ಅನಾಹುತಕ್ಕೆ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ. ಒಟ್ಟಾರೆ ಅರ್ಜಿ ಸಲ್ಲಿಕೆಯಾದ 60 ದಿನದೊಳಗೆ ಭೂ ಪರಿವರ್ತನೆ ಪೂರ್ಣಗೊಳಿಸಬೇಕು ಎನ್ನುವುದು ಕಂದಾಯ ಇಲಾಖೆ ಆದೇಶ.

ದಲ್ಲಾಳಿಗಳದ್ದೇ ಕೈ
ರಿಯಲ್‌ ಎಸ್ಟೇಟ್‌ ಕಂಪೆನಿಗಳನ್ನು ಹೊರತು ಪಡಿಸಿದರೆ ಸಾಮಾನ್ಯ ಭೂಮಾಲಕರಿಗೆ ಈ ಆನ್‌ಲೈನ್‌ ವ್ಯವಸ್ಥೆ ಬಗ್ಗೆ ತಿಳುವಳಿಕೆ ಇಲ್ಲ. ಹಾಗಾಗಿ ಇಂಥವರಿಗೆ ನೆರವು ನೀಡಲು ಮಧ್ಯವರ್ತಿಗಳು ಸಂಪರ್ಕಿಸುತ್ತಾರೆ. ಅವರು ನಿಗದಿಪಡಿಸಿದ್ದೇ ಅಂತಿಮ ದರ. ಹಣದಾಸೆಗೆ ಬೀಳುವ ಮಧ್ಯವರ್ತಿಗಳು ಇದರ ಮುಂದಿನ ಪ್ರಕ್ರಿಯೆಗೆ ಕಂದಾಯ ಇಲಾಖೆ ಕೇಸ್‌ ವರ್ಕರ್‌ಗಳು ಹಾಗೂ ಇನ್ನಿತರ ಸಿಬಂದಿಗೆ ಹಣ ನೀಡುವಂತೆ ರೈತರಿಗೆ ಸೂಚಿಸುತ್ತಾರೆ. ಈ ರೀತಿ ಭೂಮಾಲಕರು ಹಾಗೂ ಕಂದಾಯ ಅಧಿಕಾರಿಗಳ ನಡುವೆ ದಲ್ಲಾಳಿಗಳು ಕೊಂಡಿಯಂತೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಅರ್ಜಿ ಸಲ್ಲಿಕೆಯಲ್ಲೂ ಲೋಪ
ಸರ್ವೇ ನಂಬರ್‌ ಒಂದರ ಭಾಗಶಃ ಭೂ ಪರಿವರ್ತನೆ ಆಗಬೇಕಿದ್ದರೆ 11-ಇ ನಕ್ಷೆ ಕಡ್ಡಾಯ. ನಿರ್ದಿಷ್ಟ ಸರ್ವೇ ನಂಬರ್‌ನ ಪೂರ್ತಿ ಜಾಗ ಪರಿವರ್ತನೆಗೆ ಈ ನಕ್ಷೆ ಕೊಡಬೇಕಾಗಿಲ್ಲ. ಆದರೆ ಅರ್ಜಿ ಸಲ್ಲಿಸುವವರು ಭಾಗಶಃ ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿದ್ದರೂ 11-ಇ ನಕ್ಷೆ ಅಪ್‌ಲೋಡ್‌ ಮಾಡಿಸುತ್ತಿಲ್ಲ. ಇದರಿಂದ ಅರ್ಜಿ ತಿರಸ್ಕೃತವಾಗುತ್ತಿದೆ. ಆನ್‌ಲೈನ್‌ನಲ್ಲಿ ಸುಲಭವಾಗಿ ಭೂ ಪರಿವರ್ತನೆ ಆಗುತ್ತದೆ ಎಂದು ಭಾವಿಸಿ ಪೂರಕ ದಾಖಲೆಗಳನ್ನು ಒದಗಿಸದೆ ಅರ್ಜಿ ಸಲ್ಲಿಸುವವರೂ ಇದ್ದಾರೆ ಎನ್ನುತ್ತಾರೆ ಅಧಿಕಾರಿಗಳು.

ಮಧ್ಯವರ್ತಿಗಳ ಸಂಪರ್ಕ ಬೇಡ
ಸಾರ್ವಜನಿಕರ ಕೆಲಸಗಳನ್ನು ಸುಲಭಗೊಳಿಸುವ ಉದ್ದೇಶದಿಂದ ಸರಕಾರ ಭೂಪರಿವರ್ತನೆಗೆ ಆನ್‌ಲೈನ್‌ ಸೌಲಭ್ಯ ಕಲ್ಪಿಸಿದೆ. ಸೇವಾಸಿಂಧು ಕೇಂದ್ರಗಳಲ್ಲಿಯೂ ಇದನ್ನು ಮಾಡಬಹುದು. ಯಾರು ಕೂಡ ಮಧ್ಯವರ್ತಿಗಳನ್ನು ಸಂಪರ್ಕಿಸುವ ಅಗತ್ಯವಿಲ್ಲ. ಅರ್ಜಿ ಸಲ್ಲಿಕೆ ಸಂದರ್ಭ ಪೂರಕ ದಾಖಲೆಗಳನ್ನೆಲ್ಲ ಒದಗಿಸಿದರಾಯಿತು. ಭೂಪರಿವರ್ತನೆಗೆ ದುಬಾರಿ ಶುಲ್ಕ ಕೇಳಿದರೆ ನೇರವಾಗಿ ನನ್ನನ್ನು ಅಥವಾ ಸ್ಥಳೀಯ ತಹಶೀಲ್ದಾರ್‌ಗಳನ್ನು ಸಂಪರ್ಕಿಸಬಹುದು. ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. – ಜಿ. ಜಗದೀಶ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.