ಬೆಳಗಿತು ಬಾರಕೂರಿನ ಕತ್ತಲೆ ಬಸದಿ


Team Udayavani, Sep 27, 2017, 11:19 AM IST

27-Maniapl–2.jpg

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದು ಅವುಗಳ ಅಭಿವೃದ್ಧಿಗೆ ಸರಕಾರದೊಂದಿಗೆ ಖಾಸಗಿ ಸಹಭಾಗಿತ್ವವೂ ಅಗತ್ಯ ಎಂದು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅನುರಾಧಾ ಅವರು ಹೇಳಿದರು.

ಅವರು ಮಂಗಳವಾರ ಪ್ರವಾಸೋದ್ಯಮ ದಿನಾಚರಣೆಯ ಪೂರ್ವಭಾವಿಯಾಗಿ ಬಾರಕೂರಿನ ಕತ್ತಲೆ ಬಸದಿಯಲ್ಲಿ ಜರಗಿದ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪರಂಪರೆಯ ಬಗ್ಗೆ ಗೌರವ ಇರಬೇಕು. ಇತಿಹಾಸದ ಕುರಿತು ಅಭಿಮಾನವಿರಬೇಕು. ಇವೆರಡೂ ಬೇಕಾದಲ್ಲಿ ಅಧ್ಯಯನ ಸಮರ್ಪಕವಾಗಿರಬೇಕು ಎಂದರು.

‘ಗೊತ್ತಿಲ್ಲ’ ನಿಧನ !
ಭವ್ಯ ಭಾರತ ಪರಂಪರೆಯಲ್ಲಿ ಅನೇಕ ಪಾರಂಪರಿಕ ಕಟ್ಟಡಗಳಿವೆ. ಪ್ರತಿ ಊರು ಅಪೂರ್ವ ಇತಿಹಾಸ ಹೊಂದಿದೆ. ಅನೇಕ ಕೋಟೆ, ದೇವಸ್ಥಾನಗಳನ್ನು ಹೊಂದಿದ್ದರೂ ಊರಿನವರಿಗೆ ಮಾತ್ರ ಅದರ ಇತಿಹಾಸ ಗೊತ್ತೇ ಇರುವುದಿಲ್ಲ. ಏನು ಕೇಳಿದರೂ ಗೊತ್ತಿಲ್ಲವೆಂದು ಉತ್ತರ ನೀಡಿದರೆ ಮುಂದೆ ಒಂದು ‘ಗೊತ್ತಿಲ್ಲ’ ನಿಧನರಾದರು ಎಂದು ಹೇಳಬೇಕಾಗುತ್ತದೆ ಎಂದು ಭಾರತೀಯ ಪುರಾತತ್ವ ಇಲಾಖೆಯ ಅಧೀಕ್ಷಕರಾದ ಮೂತೇಶ್ವರಿ ಅವರು ಹೇಳಿದರು.

ನೈಜ ದರ್ಶನ
ಬಾರಕೂರಿನ ಕತ್ತಲೆ ಬಸದಿಯ ನೈಜ ದರ್ಶನವಾಗಿದೆ. ಅತಿ ಶೀಘ್ರದಲ್ಲಿಯೇ ಇದಕ್ಕೆ ಕಾಯಕಲ್ಪ ಒದಗಿಸಲು ಇಲಾಖೆ ಕ್ರಮ ತೆಗೆದುಕೊಳ್ಳಲಿದೆ. ಬಾರಕೂರು ಮಾತ್ರವಲ್ಲ ಉಡುಪಿ ಜಿಲ್ಲೆಯ ಇತರ ಪಾರಂಪರಿಕ ತಾಣಗಳನ್ನು ಪ್ರವಾಸಿ ಕೇಂದ್ರ ಗಳನ್ನಾಗಿ ಮಾರ್ಪಡಿಸಲು ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದವರು ತಿಳಿಸಿದರು.

ಸೆ. 27: ಆ್ಯಪ್‌ ಆರಂಭ
ಉಡುಪಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಅನಿತಾ, ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಆ್ಯಪ್‌ ಒಂದನ್ನು ರಚಿಸಲಾಗಿದ್ದು ಅದು ಸೆ. 27ರಂದು ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದರು.

ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಡಿಸೆಂಬರ್‌ನಲ್ಲಿ ಮೂರು ದಿನಗಳ ವಿಶೇಷ ಕಾರ್ಯಕ್ರಮ ಯೋಜಿಸಲಾಗಿದೆ ಎಂದರು.

ಜೆಟ್‌ಏರ್‌ವೇಸ್‌ನ ಮಾರಾಟ ವಿಭಾಗದ ಏರಿಯಾ ಸೇಲ್ಸ್‌ ಮ್ಯಾನೇಜರ್‌ ಕೆ. ಗಂಗಾಧರ ಹೆಗ್ಡೆ ಮಾತನಾಡಿ, ಪ್ರವಾಸಿತಾಣಗಳ ವೀಕ್ಷಣೆಗೆ ಜೆಟ್‌ ಏರ್‌ವೇಸ್‌ ಪ್ರಯಾಣ ಮಾಡುವವರಿಗೆ ಶೇ. 10ರಷ್ಟು ರಿಯಾಯಿತಿ ಇದೆ. ಈ ಬಗ್ಗೆ ಜೆಟ್‌ಏರ್‌ವೇಸ್‌ ವೆಬ್‌ಸೈಟ್‌ನಿಂದ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದರು.

ಬಾರಕೂರು ಪಂಚಾಯತ್‌ ಉಪಾಧ್ಯಕ್ಷ ಶಾಂತಾರಾಮ್‌ ಶೆಟ್ಟಿ, ಮಣಿಪಾಲದ ಮಣಿಪಾಲ ಗ್ರಾಜುಯೇಟ್‌ ಸ್ಕೂಲ್‌ ಆಫ್ ಹೊಟೇಲ್‌ ಮ್ಯಾನೇಜ್‌ಮೆಂಟಿನ ಪ್ರಾಂಶುಪಾಲರಾದ ಡಾ| ಪರ್ವತವರ್ಧಿನಿ ಮತ್ತಿತರರು ಉಪಸ್ಥಿತರಿದ್ದರು.ಅಪ್ನಾ ಹಾಲಿಡೇಸ್‌ನ ಸಿಇಒ ನಾಗರಾಜ್‌ ಹೆಬ್ಟಾರ್‌ ಸ್ವಾಗತಿಸಿ ವಂದಿಸಿದರು.

ಟಾಪ್ ನ್ಯೂಸ್

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.