ಕೃಷಿ ಉಳಿಯಬೇಕು ಎನ್ನುವುದೇ ಮುಖ್ಯ ಉದ್ದೇಶ

ಪಾಳು ಬಿದ್ದ ಭೂಮಿಯನ್ನು ಗೇಣಿಗೆ ಪಡೆದು ಕೃಷಿ ಮಾಡುವ ಬಿ. ನಾರಾಯಣದಾಸ್‌

Team Udayavani, Dec 23, 2019, 4:55 AM IST

wd-36

ಹೆಸರು: ಬಿ. ನಾರಾಯಣದಾಸ್‌
ಏನೇನು ಕೃಷಿ: ಭತ್ತ, ಬಾಳೆ, ತೆಂಗು, ಅಡಿಕೆ, ತರಕಾರಿ.
ಎಷ್ಟು ವರ್ಷ: 51
ಕೃಷಿ ಪ್ರದೇಶ: 13 ಎಕ್ರೆ

ನಾವು ಅದೆಷ್ಟು ಆಧುನಿಕಗೊಂಡರೂ ಉಣ್ಣುವ ಅನ್ನವನ್ನು ಸೃಷ್ಟಿಸಲಾರೆವು; ಅದನ್ನು ಬಿತ್ತಿ ಬೆಳೆದೇ ಆಗಬೇಕು. ಇದೇ ಹಿನ್ನೆಲೆಯಲ್ಲಿ ಉದಯವಾಣಿಯು ಕಿಸಾನ್‌ ದಿನಾಚರಣೆಯ ಸಂದರ್ಭ ರೈತರ ಸಾಧನೆಯ ಚಿತ್ರಣ ನೀಡುವ “ಕೃಷಿ ಕಥನ’ವನ್ನು ಆರಂಭಿಸಿದೆ. ಈ ಹೊಸ ಸರಣಿಯು ಇನ್ನಷ್ಟು ಮಂದಿಗೆ ಪ್ರೇರಣೆಯಾಗಲೆಂದು ಸರಕಾರದಿಂದ ಪ್ರಶಸ್ತಿ ಪುರಸ್ಕಾರಗಳಿಂದ ಗುರುತಿಸಲ್ಪಟ್ಟ ರೈತರನ್ನು ಪರಿಚಯಿಸುವ ಪ್ರಯತ್ನ.

ಉಡುಪಿ: ಆಧುನಿಕ ಭರಾಟೆಯಲ್ಲಿ ನಶಿಸಿ ಹೋಗುತ್ತಿರುವ ಕೃಷಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಪಾಳು ಬಿದ್ದ ಭೂಮಿಯನ್ನು ಗೇಣಿಗೆ ಪಡೆದು, ಒಟ್ಟು 13 ಎಕ್ರೆ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ಬಿ. ನಾರಾಯಣದಾಸ್‌ ಅವರು ಕೃಷಿ ಇಲಾಖೆಯಿಂದ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

76 ಬಡಗಬೆಟ್ಟು ನಿವಾಸಿ ಬಿ. ನಾರಾಯಣದಾಸ್‌ ಅವರು 38 ವರ್ಷಗಳಿಂದ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ತೆಂಗು, ಭತ್ತ, ಬಾಳೆ, ಅಡಿಕೆ, ಮಾವು ಸಹಿತ ವಿವಿಧ ಬಗೆಯ ಮಿಶ್ರ ಬೆಳೆ ತೆಗೆಯುತ್ತಿದ್ದಾರೆ. ಊರಿನಲ್ಲಿ ಪಾಳು ಬಿದ್ದಿರುವ ಹೊಲದಲ್ಲಿ ಮಾಲಕರ ಅನುಮತಿ ಪಡೆದು ಬೇಸಾಯ ಮಾಡುವ ಇವರಿಗೆ ಕೃಷಿಯಲ್ಲಿ ಲಾಭ-ನಷ್ಟದ ಲೆಕ್ಕಾಚಾರ ಇಲ್ಲ. ಕೃಷಿ ಉಳಿಯಬೇಕು ಎನ್ನುವುದೇ ಮುಖ್ಯ ಉದ್ದೇಶವಾಗಿದೆ.

ಯಾಂತ್ರೀಕೃತ ಕೃಷಿಗೆ ಒತ್ತು
ನಾರಾಯಣ ಅವರಿಗೆ ಕೃಷಿಗೆ ಒಮ್ಮೆ ಕೂಲಿ ಕಾರ್ಮಿಕರ ಕೊರತೆ ಎದುರಾಗಿತ್ತು. ಈ ಸಮಸ್ಯೆಯಿಂದ ಹೊರ ಬರಲು ಯಾಂತ್ರೀಕೃತ ಕೃಷಿ ಪದ್ಧತಿ ಆಳವಡಿಸಿಕೊಂಡರು. ಇಂದು ಅವರು ಯಂತ್ರಗಳಿಂದ ಮಾಡಲಾಗದ ಬೆರಳೆಣಿಕೆಯ ಕೆಲಸಗಳನ್ನು ಮಾತ್ರ ಕಾರ್ಮಿಕರ ಮೂಲಕ ಮಾಡಿಸುತ್ತಿದ್ದಾರೆ. ನಗರದಲ್ಲಿ ಮೊದಲ ಬಾರಿಗೆ ಚಾಪೆ ನೇಜಿಯನ್ನು ಆಳವಡಿಸಿಕೊಂಡ ಕೀರ್ತಿ ನಾರಾಯಣ ಅವರಿಗೆ ಸಲ್ಲುತ್ತದೆ.

ವಾಣಿಜ್ಯ ಬೆಳೆ
ಭತ್ತದ ಕೃಷಿಯೊಂದಿಗೆ ಅಲಸಂಡೆ, ಹರಿವೆ, ಬಸಳೆ, ಗುಳ್ಳ, ಸುವರ್ಣಗಡ್ಡೆ, ಸೋರೆಕಾಯಿ, ಹೀರೆಕಾಯಿ, ಬೆಂಡೆಕಾಯಿ, ತೊಂಡೆಕಾಯಿ, ಸೌತೆಕಾಯಿ, ಇತರೆ ವಾಣಿಜ್ಯ ಬೆಳೆಗಳನ್ನು ಹಟ್ಟಿಗೊಬ್ಬರ ಬಳಸಿಯೇ ಬೆಳೆಸುವುದರಿಂದ ಮನೆಯ ಪ್ರದೇಶದಲ್ಲಿಯೇ ಖಾಯಂ ಗ್ರಾಹಕರು ಖರೀದಿದಾರರಾಗಿರುತ್ತಾರೆ. ಇನ್ನುಳಿದ ತರಕಾರಿಗಳಿಗೆ ಉಡುಪಿ -ಮಂಗಳೂರು ಪೇಟೆಯ ಅಂಗಡಿಗಳೇ ಮಾರುಕಟ್ಟೆಯಾಗಿದೆ.

ಮಾದರಿ ಕೃಷಿಕ
ನಾರಾಯಣ ಅವರು ಬಿ.ಕಾಂ. ಪದವೀಧರರು. ಶಿಕ್ಷಣ ಮುಗಿಸಿದ ಕೂಡಲೇ ಹಲವು ಉದ್ಯೋಗಗಳು ಇವರನ್ನು ಅರಸಿ ಬಂದಿದ್ದವು. ಆದರೆ ಇವರು ಅದರತ್ತ ಮುಖಮಾಡದೆ ಕೃಷಿಯಲ್ಲಿ ಜೀವನ ರೂಪಿಸಿಕೊಂಡು ಯುವ ಜನರಿಗೆ ಮಾದರಿಯಾಗಿದ್ದಾರೆ. 5 ಎಕ್ರೆ ಭೂಮಿಯಲ್ಲಿ ವಾರ್ಷಿಕ ಸುಮಾರು 150 ಕ್ವಿಂಟಾಲ್‌ ಭತ್ತದ ಬೆಳೆ ತೆಗೆಯುತ್ತಾರೆ. ಕೃಷಿ ಚಟುವಟಿಕೆಗೆ ಪತ್ನಿ ವೀಣಾ ಅವರ ಜತೆಗೆ ಮಕ್ಕಳು ಸಹ ಕೈ ಜೋಡಿಸಿದ್ದಾರೆ. ಕೃಷಿಯೊಂದಿಗೆ ಹೈನುಗಾರಿಕೆಯಲ್ಲೂ ಸಾಧನೆ ತೋರಿದ್ದಾರೆ.

ಕೃಷಿಯಲ್ಲಿ ಲೆಕ್ಕಾಚಾರವಿಲ್ಲ!
ಕೃಷಿಯಲ್ಲಿ ಲಾಭ ನಷ್ಟದ ಲೆಕ್ಕಾಚಾರವಿಲ್ಲ. ಖಾಲಿ ಇರುವ ಹೊಲದಲ್ಲಿ ಬೇಸಾಯ ಮಾಡಿ ಕೃಷಿ ಉಳಿಸಬೇಕು ಎನ್ನುವ ಆಶಯವಿದೆ. ಕಾರ್ಮಿಕರ ಕೊರತೆ ಇಂದು ಕೃಷಿಗೆ ಬಹುದೊಡ್ಡ ಸವಾಲು. ಸಮಸ್ಯೆಯಿಂದ ಹೊರ ಬರಲು ಕೃಷಿಗೆ ಸಂಬಂಧಿಸಿದ ಉಳುಮೆ, ಬಿತ್ತನೆ ಮುಂತಾದ ಕೆಲಸಗಳನ್ನು ಯಂತ್ರದ ಮೂಲಕ ಮಾಡಲಾಗುತ್ತದೆ. ಇದರಿಂದ ಖರ್ಚು ಕಡಿಮೆ ಹಾಗೂ ಇತರರಿಗಾಗಿ ಕಾಯಬೇಕಾದ ಪರಿಸ್ಥಿತಿ ಇಲ್ಲ. ಅಗತ್ಯವಿದ್ದರೆ ಮಾತ್ರ ಕಾರ್ಮಿಕರನ್ನು ಕೃಷಿ ಕೆಲಸಕ್ಕೆ ಬಳಸಲಾಗುತ್ತದೆ. ಪ್ರಯೋಗಾತ್ಮಕ ಮನೋಭಾವದಿಂದ ಬೇರೆ-ಬೇರೆ ಬೆಳೆ ಬೆಳೆದರೆ ಲಾಭ ಗಳಿಸಬಹುದಾಗಿದೆ. ವ್ಯವಸ್ಥಿತವಾಗಿ ಬೇಸಾಯದಲ್ಲಿ ತೊಡಗಿದರೆ ಲಕ್ಷಾಂತರ ರೂ. ಲಾಭ ಗಳಿಸಲು ಸಾಧ್ಯವಿದೆ.
-ಬಿ. ನಾರಾಯಣದಾಸ್‌, ಕೃಷಿಕ

ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.