ಗರಿಷ್ಠ ಅನುದಾನ, ಕ್ಷೇತ್ರದ ಸಮಗ್ರ ಅಭಿವೃದ್ಧಿ : ಪ್ರಮೋದ್‌ ಮಧ್ವರಾಜ್‌


Team Udayavani, Apr 18, 2017, 12:38 PM IST

18-REPORT-10.jpg

ಮಲ್ಪೆ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಯೋಜನೆಗಳಿಗೆ, ವಿವಿಧ ಕಾರ್ಯಕ್ರಮಗಳಿಗೆ ಗರಿಷ್ಠ ಅನುದಾನವನ್ನು ತರಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಶ್ರಮಿಸಲಾಗಿದ್ದು ಮುಂದೆಯೂ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ನಡೆಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಮೀನುಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಸೋಮವಾರ ಅಂಬಲಪಾಡಿ ಪ್ರಗತಿಸೌಧದಲ್ಲಿ ನಡೆದ ನಗರಸಭಾ ವ್ಯಾಪ್ತಿಯ ಅಂಬಲಪಾಡಿ ವಾರ್ಡ್‌ಮಟ್ಟದ ಜನಸಂಪರ್ಕ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಬಿಪಿಎಲ್‌: ಮಾನದಂಡ ಬದಲು ಬಿಪಿಎಲ್‌ ಕಾರ್ಡ್‌ನಲ್ಲಿ ಸರಕಾರದಿಂದ ಅನೇಕ ಸವಲತ್ತುಗಳು ಪಡೆಯ ಬಹುದಾಗಿದ್ದು ಈಗಾಗಲೇ 12,000 ಕುಟುಂಬಗಳಿಗೆ ಕಾರ್ಡ್‌ ನೀಡಲಾಗಿದೆ. ತಿಂಗಳಿಗೆ 450 ರೂ. ಕರೆಂಟ್‌ ಬಿಲ್‌ ಬಂದವರಿಗೆ ಮಾತ್ರ ಬಿಪಿಎಲ್‌ ಕಾರ್ಡ್‌ ನೀಡಲಾಗುತ್ತಿತ್ತು. ಇದೀಗ 850 ರೂ. ಕರೆಂಟ್‌ ಬಿಲ್‌ ಬರುವವರೂ ಬಿಪಿಎÇ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಮೋದ್‌ ತಿಳಿಸಿದರು.

ಸಹಾಯಧನ ವಿತರಣೆ
ರಾಷ್ಟ್ರೀಯ ಕುಟುಂಬ ಸಹಾಯಧನ ಯೋಜನೆ ಯಡಿ ತಲಾ 20,000 ರೂ.ಗಳಂತೆ 12 ಮಂದಿಗೆ ಚೆಕ್‌ ವಿತರಿಸಲಾಯಿತು. ಕ್ರೀಡಾ ಇಲಾಖೆಯ ವತಿಯಿಂದ 12 ವಸತಿ ಶಾಲೆಗಳಿಗೆ 2 ಲಕ್ಷ ರೂ. ಮೌಲ್ಯದ ಕ್ರೀಡಾ ಸಲಕರಣೆಗಳನ್ನು ಹಾಗೂ ಮೀನುಗಾರರಿಗೆ ಹೊಸ ಬೋಟ್‌ ನಿರ್ಮಿಸಲು ಸಾಧ್ಯತಾ ಪತ್ರವನ್ನು ವಿತರಿಸಲಾಯಿತು. ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ನಗರಸಭಾ ಸದಸ್ಯರಾದ ವಸಂತಿ ಶೆಟ್ಟಿ ಬ್ರಹ್ಮಾವರ, ರಮೇಶ್‌ ಕಾಂಚನ್‌, ಜನಾರ್ದನ ಭಂಡಾರ್‌ಕರ್‌, ಗಣೇಶ್‌ ನೆರ್ಗಿ, ಹಸನ್‌ ಸಾಹೇಬ್‌, ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ, ಡಿವೈಎಸ್ಪಿ ಕುಮಾರಸ್ವಾಮಿ, ಕಂದಾಯ ಅಧಿಕಾರಿ ಸುಧಾಕರ ಶೆಟ್ಟಿ, ಚಂದ್ರ ಪೂಜಾರಿ, ಅಂಬಲಪಾಡಿ ಗ್ರಾಮ ಲೆಕ್ಕಾಧಿಕಾರಿ ಕುಪ್ಪಯ್ಯ ಹಾಗೂ ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ನಗರಸಭಾ ಆಯುಕ್ತ ಡಿ. ಮಂಜುನಾಥಯ್ಯ ಸ್ವಾಗತಿಸಿ ಪ್ರಸ್ತಾವನೆಗೈದರು. ಸುಧಾಕರ್‌ ನಿರೂಪಿಸಿ, ವಂದಿಸಿದರು.

ಶೀಂಬ್ರದಲ್ಲಿ  ಅಣೆಕಟ್ಟು
ಕುಡ್ಸೆಂಪ್‌ ಯೋಜನೆಯಡಿ ಕುಡಿಯುವ ನೀರಿನ ಯೋಜನೆಗೆ 320 ಕೋಟಿ ರೂ. ಮಂಜೂರಾಗಿದ್ದು ಆ ಕೆಲಸ ಕೂಡ ಮುಂದೆ ನಡೆಯಲಿದೆ. ಎಪ್ರಿಲ್‌, ಮೇಯಲ್ಲಿ ನೀರಿನ ಅಭಾವವನ್ನು ಪರಿಹರಿಸಲು ಪೆರಂಪಳ್ಳಿ ಶೀಂಬ್ರದಲ್ಲಿ ಅಣೆಕಟ್ಟು ಕಟ್ಟಲು 102 ಕೋಟಿ ರೂ. ಅನುದಾನ ನೀಡಲಾಗಿದೆ ಎಂದ ಅವರು ದಿನದ 24 ಗಂಟೆ ವಿದ್ಯುತ್‌ ಒದಗಿಸುವ ರಾಜ್ಯದ ಏಕೈಕ ವಿಧಾನಸಭಾ ಕ್ಷೇತ್ರ ಉಡುಪಿ ಎಂದರು.

ಹೊಸ ಮನೆ ನಿರ್ಮಾಣಕ್ಕೆ ನೆರವು
ಸರಕಾರದ ವತಿಯಿಂದ ನಗರಸಭೆಯ ಮೂಲಕ ಪರಿಶಿಷ್ಟ ಜಾತಿ/ಪಂಗಡದ ಮಂದಿಗೆ ಹೊಸಮನೆ ಕಟ್ಟಲು 3 ಲಕ್ಷ ರೂ. ಮತ್ತು ಇತರ ಹಿಂದುಳಿದ ಸಮಾಜದವರಿಗೆ 2 ಲಕ್ಷ ರೂ. ನೀಡುವ ಯೋಜನೆಯನ್ನು ರೂಪಿಸಲಾಗಿದ್ದು ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಚಿವರು ಹೇಳಿದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.