ಎಲ್ಲ ಪಕ್ಷಗಳ ನೈತಿಕತೆ ಕುಸಿತ: ಪೇಜಾವರಶ್ರೀ ವಿಷಾದ


Team Udayavani, Nov 27, 2019, 6:16 PM IST

pejawar

ಉಡುಪಿ: ಮಹಾರಾಷ್ಟ್ರ ರಾಜ್ಯದಲ್ಲಿ ಆದ ಬೆಳವಣಿಗೆಯಿಂದ ಎಲ್ಲ ರಾಜಕೀಯ ಪಕ್ಷಗಳ ನೈತಿಕತೆ ಕುಸಿದಿದೆ ಎಂದು ಬೇಸರವಾಗುತ್ತಿದೆ ಎಂದು ಶ್ರೀಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದು ಪಕ್ಷಕ್ಕೆ ಬಹುಮತ ಬಾರದೆ ಇದ್ದಾಗ ಎಲ್ಲ ಪಕ್ಷಗಳೂ ಸೇರಿ ಸರಕಾರ ರಚಿಸಬಹುದು ಎಂದು ಹಿಂದೆಯೇ ಹೇಳಿದ್ದೆ. ಈಗ ನೈತಿಕತೆ ಇಲ್ಲದೆ ರಾಜಕೀಯ ಬೆಳವಣಿಗೆ ನಡೆಯುತ್ತಿರುವುದು ಬೇಸರ ತರುತ್ತದೆ ಎಂದರು.

ಶಿವಸೇನೆ, ಕಾಂಗ್ರೆಸ್‌, ಎನ್‌ಸಿಪಿ ಒಂದಾಗುವುದು, ಬಿಜೆಪಿ ಎನ್‌ಸಿಪಿ ಒಂದಾಗುವುದು ನೈತಿಕತೆ ಇಲ್ಲದಿರುವುದನ್ನು ಸೂಚಿಸುತ್ತದೆ. ಜನರೂ ಇದೇ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಕರ್ನಾಟಕದ ಕುರಿತು ಪ್ರಶ್ನೆ ಕೇಳಿದಾಗ ಬಹುಮತ ಬಾರದೆ ಇದ್ದಾಗ ಮತ್ತೆ ಚುನಾವಣೆ ನಡೆಸಬೇಕಾಗುತ್ತದೆ. ಸರ್ವಪಕ್ಷಗಳ ಸರಕಾರ ಆಗಬೇಕಾದರೆ ಕೆಲವರು ತ್ಯಾಗ ಮಾಡಬೇಕಾಗುತ್ತದೆ. ಒಂದಕ್ಕಿಂತ ಹೆಚ್ಚು ಪಕ್ಷಗಳು ಸೇರುವಾಗಲೂ ತ್ಯಾಗ ಮಾಡಬೇಕಾಗುತ್ತದೆ. ಉದಾರತೆ ಇದ್ದರೆ ಮಾತ್ರ ಇದು ಸಾಧ್ಯವಾಗುತ್ತದೆ. ಅಟಲ್‌ ಬಿಹಾರಿ ವಾಜಪೇಯಿಯವರು ಇರುವಾಗ ಹಲವು ಪಕ್ಷಗಳನ್ನು ಇರಿಸಿಕೊಂಡು ಸರಕಾರ ರಚಿಸಿದ್ದರಲ್ಲವೆ ಎಂದರು.

ಸರಕಾರದ ವಶದಲ್ಲಿದ್ದ ದೇವಸ್ಥಾನಗಳನ್ನು ಬಿಟ್ಟುಕೊಡಲು ಕೇಂದ್ರ ಸರಕಾರ ಕಾನೂನು ರಚಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ವಿಷಯ ತಿಳಿದು ಹೇಳಿಕೆ ಕೊಡುವುದಾಗಿ ತಿಳಿಸಿದರು.

ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲಿಮರ ಒಂದು ವರ್ಗ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಅಪೀಲು ಸಲ್ಲಿಸುವುದಿಲ್ಲವೆಂದು ತಿಳಿಸಿದೆ ಎಂದರು. ಮುಸ್ಲಿಮ್‌ ಕಾನೂನು ಮಂಡಳಿ ಅರ್ಜಿ ಸಲ್ಲಿಸುತ್ತದೆ ಎಂದು ಹೇಳಿದಾಗ ನ್ಯಾಯಾಲಯ ಈ ಅರ್ಜಿಯನ್ನು ಸ್ವೀಕರಿಸುತ್ತದೋ ಎಂದು ನೋಡಬೇಕು ಎಂದರು.

ಪುರಿ ಗೋವರ್ಧನ ಪೀಠದ ಶ್ರೀನಿಶ್ಚಲಾನಂದಸರಸ್ವತೀ ಸ್ವಾಮೀಜಿಯವರನ್ನು ನಾಲ್ಕೈದು ಬಾರಿ ಭೇಟಿಯಾಗಿದ್ದೆ. ಒಂದು ಬಾರಿ ಪುರಿಯಲ್ಲಿಯೂ ಭೇಟಿ ಮಾಡಿದ್ದೆ. ಅವರ ಒಂದು ಟ್ರಸ್ಟ್‌ನಲ್ಲಿ ನಾವು ಟ್ರಸ್ಟಿಗಳಾಗಿಯೂ ಇದ್ದೆವು ಎಂದು ಪೇಜಾವರ ಶ್ರೀಗಳು ತಿಳಿಸಿದರು.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.