ಕೃಷಿಯಲ್ಲಿ ಹೊಸ-ಹೊಸ ಆವಿಷ್ಕಾರವೇ ಇವರ ಕಾಯಕ


Team Udayavani, Mar 18, 2017, 5:34 PM IST

0603kota3e.jpg

ಕೋಟ : ಕೃಷಿಯಿಂದ ನಷ್ಟವೇ ಜಾಸ್ತಿ ಎನ್ನುವ ಕಾರಣ ನೀಡಿ ಅನೇಕ ಮಂದಿ ಕೃಷಿಯಿಂದ ವಿಮುಖರಾಗುತ್ತಾರೆ. ಇದರ  ಜತೆಗೆ ಒಂದಷ್ಟು ಮಂದಿ ಅದರಲ್ಲೇ ಹೊಸತನವನ್ನು ಹುಡುಕುತ್ತ ಆವಿಷ್ಕಾರಗಳನ್ನು ಮಾಡಿ ಯಶಸ್ವಿಯಾಗಿ ಕೃಷಿಯಲ್ಲೇ ಖುಷಿಪಡುತ್ತಿರುತ್ತಾರೆ. ಇಂಥವರ ಸಾಲಿನಲ್ಲಿ ಗುರುತಿಸ ಬಹುದಾದ ಪ್ರಗತಿಪರ ಕೃಷಿಕರೇ ಕೋಟದ ಪಾರಂಪಳ್ಳಿಯ ರವೀಂದ್ರ  ಐತಾಳ. ಇವರು ಕೃಷಿಯಲ್ಲಿ ಸದಾ ಹೊಸತನವನ್ನು ಹುಡುಕುವ ತುಡಿತ ಹೊಂದಿರುವವರು ಹಾಗೂ ಕೃಷಿಯನ್ನು  ಲಾಭದಾಯಕವಾಗಿಸಿಕೊಳ್ಳಲು ಹೊಸ-ಹೊಸ ಆವಿಷ್ಕಾರಗಳಲ್ಲಿ ತೊಡಗಿರುವವರು.

ಪ್ರತಿ ವರ್ಷ ಹೊಸ ತಳಿಗಳ ಪರಿಚಯ ಬೇರೆ-ಬೇರೆ ಜಿಲ್ಲೆಗಳ ಸಮೃದ್ಧವಾದ ಇಳುವರಿ ನೀಡುವ ಭತ್ತದ ತಳಿಗಳ ಕುರಿತು ಕೃಷಿ ಪರಿಣತರಿಂದ ಮಾಹಿತಿ ಪಡೆದು ಹಾಗೂ ಬೇರೆ-ಬೇರೆ ಕಡೆ ನಡೆಯುವ  ಕೃಷಿ ಮೇಳಗಳಿಗೆ ತೆರಳಿ ಅಲ್ಲಿನ ಹೊಸತನವನ್ನು ಅಧ್ಯಯನ ಮಾಡಿ, ಹೊಸ ತಳಿಯನ್ನು ತನ್ನೂರಿಗೆ ತಂದು ಪ್ರಯೋಗ ರೀತಿಯಲ್ಲಿ ಬೆಳೆ ಬೆಳೆಯುತ್ತಾರೆ ಹಾಗೂ ಇದರಿಂದ ಉತ್ತಮ ಫಲಿತಾಂಶ ಕೂಡ ಪಡೆದಿದ್ದಾರೆ. ಈ ಬಾರಿ ಒಂದು ಎಕ್ರೆ ಜಮೀನಿನಲ್ಲಿ ತೀರ್ಥಳ್ಳಿ ಕರಿದಡಿ, ಬಿಳಿ ಸೋನಾ ಮಸೂರಿ ಮುಂತಾದ ಹೊಸ ತಳಿಗಳನ್ನು ನಾಟಿ ಮಾಡಿ ಯಶಸ್ವಿಯಾಗಿದ್ದಾರೆ.

ಕೃಷಿಯಿಂದ ವಿಮುಖವಾಗುವವರಿಗೆ
ಧೈರ್ಯ ತುಂಬುವ ಕಾರ್ಯ 

ಕಾರ್ಮಿಕರ ಸಮಸ್ಯೆಯಿಂದ ಕೃಷಿಯಿಂದ ವಿಮುಖವಾಗುವ ಆಲೋಚನೆಯಲ್ಲಿರುವ ರೈತರಿಗೆ ಧೈರ್ಯ ತುಂಬುವ ಇವರು, ಅಂತವರ ಜಮೀನಿಗೆ ತನ್ನದೇ ಕಾರ್ಮಿಕರು,  ಟಿಲ್ಲರ್‌  ಮುಂತಾದ ಸಲಕರಣೆಗಳನ್ನು  ತೆಗೆದುಕೊಂಡು ಹೋಗಿ ಅವರ ಶ್ರಮವಿಲ್ಲದಂತೆ  ಕಡಿಮೆ ಮೊತ್ತದಲ್ಲಿ ಪ್ರತಿ ವರ್ಷ ಅನೇಕ ರೈತರಿಗೆ  ನಾಟಿ, ಕಟಾವು ಮಾಡಿಕೊಡುತ್ತಾರೆ. ಈ  ಮೂಲಕ ಅವರಲ್ಲಿ ಕೃಷಿ ಮುಂದುವರಿಸಲು ದೈರ್ಯ ತುಂಬುತ್ತಾರೆ.ಒಟ್ಟಾರೆ ಕೃಷಿ ಲಾಭದಾಯಕವಲ್ಲ, ಕೃಷಿಯಿಂದ ಯಾವುದೇ ಪ್ರಯೋಜನ ವಿಲ್ಲ ಎನ್ನುವವರ ನಡುವೆ ಇಂತಹ ಪ್ರಗತಿಪರ ಕೃಷಿಕರು ಸಮಾಜದಲ್ಲಿ ಮಾದರಿಯಾಗಿ ಕಂಡುಬರುತ್ತಾರೆ. 

ಕೃಷಿ ಯಂತ್ರಗಳ ಆವಿಷ್ಕಾರ 
ಕೃಷಿ ಕಾರ್ಯವನ್ನು ಸರಳಗೊಳಿಸುವ ಸಲುವಾಗಿ ಇವರೇ ಸ್ವತಃ ಹೊಸ-ಹೊಸ ಯಂತ್ರಗಳ  ಆವಿಷ್ಕರಣೆಯಲ್ಲಿ ತೊಡಗುತ್ತಾರೆ. ಆದರಲ್ಲೂ ಇವರು ತಯಾರಿಸಿದ ಭತ್ತ ಬೇರ್ಪಡಿಸುವ ಯಂತ್ರ ಬಹಳ ಜನಪ್ರಿಯತೆ ಗಳಿಸಿದೆ ಹಾಗೂ ಕಳೆ ತೆಗೆಯಲು, ಔಷಧ ಸಿಂಪಡಿಸಲು ಹಲವಾರು ಯಂತ್ರಗಳನ್ನು ತಯಾರಿಸಿದ ಹೆಗ್ಗಳಿಕೆ ಇವರಿಗೆ  ಸಲ್ಲುತ್ತದೆ.

ಕೃಷಿಯಲ್ಲಿ ಕಷ್ಟಪಟ್ಟು ತೊಡಗಿಕೊಂಡರೆ ಖಂಡಿತ ಉತ್ತಮ ಫಲಿತಾಂಶ ಸಿಗುತ್ತದೆ ಹಾಗೂ ಕೃಷಿಯಲ್ಲಿ ಸಾಂಪ್ರದಾಯಿಕ ವಿಧಾನಕ್ಕೆ ಜೋತು ಬೀಳದೆ ಹೊಸ-ಹೊಸ ವಿಧಾನಗಳ ಕುರಿತು ಅವಲೋಕಿಸಬೇಕು ಹಾಗೂ ಒಂದಷ್ಟು ಆವಿಷ್ಕಾರಿ ಮನೋಭಾವನೆ ಅಗತ್ಯ.  ಕೆಲವು ಸಂದರ್ಭ ಪ್ರಾಣಿ, ಪಕ್ಷಿಗಳ ಹಾವಳಿಯಿಂದ ಕೃಷಿಯಲ್ಲಿ ನಷ್ಟವಾಗುವ ಸಂಭವವಿರುತ್ತದೆ. ಇವುಗಳ ಹತೋಟಿಗೆ ಸೂಕ್ತ ಕ್ರಮಕೈಗೊಳ್ಳುವ ಅಗತ್ಯವಿದೆ.
– ರವೀಂದ್ರ ಐತಾಳ,  ಪ್ರಗತಿಪರ ಕೃಷಿಕರು ಪಾರಂಪಳ್ಳಿ

– ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.