ಉದ್ಯೋಗ ವಿನಿಮಯ ಕೇಂದ್ರಕ್ಕೆ ಬರುವವರ ಸಂಖ್ಯೆ ಕುಸಿತ !


Team Udayavani, Jul 25, 2019, 5:50 AM IST

udyoga-vinimaya

ಉಡುಪಿ: ಜಿಲ್ಲೆಯ ನಿರುದ್ಯೋಗಿಗಳ ಪಾಲಿಗೆ ಮರಳುಗಾಡಿನ ‘ಓಯಸಿಸ್‌’ ನಂತಿದ್ದ ಉದ್ಯೋಗ ವಿನಿಮಯ ಕೇಂದ್ರಕ್ಕೆ ನೌಕರಿಯ ಕನಸು ಹೊತ್ತು ಬರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಹಾಗಂತ ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆ ಕಡಿಮೆಯಾಗಿಲ್ಲ. ಪ್ರತಿವರ್ಷ ಉದ್ಯೋಗ ನಿಮಿತ್ತ ಸಾವಿರಾರು ಯುವಜನತೆ ಬೇರೆಕಡೆ ವಲಸೆ ಹೋಗುತ್ತಿದ್ದಾರೆ.

15 ವರ್ಷಗಳ ಹಿಂದೆ ಸರಕಾರದ ಗ್ರೂಪ್‌ ಡಿ’ ನೌಕರಿ, ಆರೋಗ್ಯ ಇಲಾಖೆ, ಕೆಎಸ್‌ ಆರ್‌ಟಿಸಿಯ ಕೆಳ ಹಂತದ ಸಿಬಂದಿಯನ್ನು ಉದ್ಯೋಗ ವಿನಿಮಯ ಕೇಂದ್ರದ ಮೂಲಕವೇ ನೇಮಕ ಮಾಡಿಕೊಳ್ಳಲಾಗುತ್ತಿತ್ತು. ಆಗ ದಿನಕ್ಕೆ 500ಕ್ಕೂ ಹೆಚ್ಚು ಜನ ಬಂದು ನೌಕರಿಗಾಗಿ ಹೆಸರು ನೋಂದಾಯಿಸಿಕೊಳ್ಳುತ್ತಿದ್ದರು. ಆಗ ಜನರನ್ನು ನಿಯಂತ್ರಿಸುವುದೇ ಕಷ್ಟವಾಗುತ್ತಿತ್ತು. ಕಾಲ ಕ್ರಮೇಣ ಆಯಾ ಇಲಾಖೆಯೇ ನೇಮಕಾತಿ ಜವಾಬ್ದಾರಿ ವಹಿಸಿ ಕೊಂಡಿದ್ದರಿಂದ ಕೇಂದ್ರದ ಬಳಿ ಇರುವ ಉದ್ಯೋಗಾ ವಕಾಶಗಳು ಕಡಿಮೆಯಾಗಿದೆ.

ಇಂದು ಸರಕಾರಿ ಹಾಗೂ ಬ್ಯಾಂಕ್‌ ಉದ್ಯೋಗಗಳಿಗೆ ಯುವಜನರು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕಾಗಿದೆ. ಇದೀಗ ಸರಕಾರಿ ಉದ್ಯೋಗ ಸಿಗದೆ ಇರುವುದರಿಂದ ಹಾಗೂ ಹೆಚ್ಚುತ್ತಿರುವ ಖಾಸಗಿ ವಿನಿಮಯ ಕೇಂದ್ರದಿಂದ ಉದ್ಯೋಗ ಕೇಂದ್ರಕ್ಕೆ ಅರ್ಜಿ ಹಾಕುವವರ ಸಂಖ್ಯೆ ತೀವ್ರವಾಗಿ ಕ್ಷೀಣಿಸುತ್ತಿದೆ.

ನೋಂದಾವಣೆ ಕುಸಿತ

ಒಂದು ಕಾಲದಲ್ಲಿ ವರ್ಷಕ್ಕೆ 10,000 ರಿಂದ 20,000 ಜನರು ನೋಂದಾಯಿಸಿಕೊಳ್ಳುವ ಕೇಂದ್ರದಲ್ಲಿ ಈಗ ಕೇವಲ 5,414 ಮಂದಿ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೋಂದಾಯಿಸಿಕೊಂಡಿದ್ದಾರೆ. ತಿಂಗಳಿಗೆ ಸರಾಸರಿ 80 ಜನರು ಕೇಂದ್ರದಲ್ಲಿ ನೋಂದಾಯಿಸಿ ಕೊಳ್ಳುತ್ತಿದ್ದಾರೆ.

ಸೇಲ್ಸ್ ಮ್ಯಾನ್‌ಳಿಗೆ ಹೆಚ್ಚಿನ ಬೇಡಿಕೆ

ಕೇಂದ್ರದಲ್ಲಿ ನೊಂದಾಯಿಸಿಕೊಂಡವರಲ್ಲಿ ಮಾರ್ಕೆಟಿಂಗ್‌ ಕ್ಷೇತ್ರದಲ್ಲಿ ಆಸಕ್ತಿ ಇರುವವರಿಗೆ ಬಹು ಬೇಗನೆ ನೌಕರಿ ಸಿಗುತ್ತಿದೆ. ಸೇಲ್ಸ್ ಮ್ಯಾನ್‌ ಹುದ್ದೆಗೆ ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಂದ ಬೇಡಿಕೆಯಿದೆ. ಪಿಯುಸಿ ಮುಗಿಸಿದ ಯುವಕರನ್ನು ಸಹ ಹಲವು ಕಂಪೆನಿಗಳು ನೇಮಿಸಿಕೊಳ್ಳುತ್ತಿವೆ. ಊರಿನಲ್ಲಿಯೇ 10ರಿಂದ 14 ಸಾವಿರದ ವರೆಗೆ ಮಾಸಿಕ ವೇತನ ನೀಡುತ್ತಾರೆ ಎಂದು ಉದ್ಯೋಗ ವಿನಿಮಯ ಕೇಂದ್ರದ ಟ್ರೈನರ್‌ ಜಗನ್‌ ಹೇಳುತ್ತಾರೆ.

ಪ್ರತಿಯೊಬ್ಬರು ಕಾರ್ಡ್‌ ಮಾಡಿಸಿಕೊಳ್ಳಿ

ಸ್ಪರ್ಧಾತ್ಮಕ ಪರೀಕ್ಷೆ ಪಾಸಾಗಿ ಸರಕಾರಿ ಉದ್ಯೋಗ (ಪಿಡಿಒ) ಬಯಸುವವರು ಉದ್ಯೋಗ ವಿನಿಮಯ ಕೇಂದ್ರದ ಕಾರ್ಡ್‌ ಹೊಂದಿರುವುದು ಕಡ್ಡಾಯವಾಗಿದೆ.

ಹಣದ ಬೇಡಿಕೆಯಿಲ್ಲ

ಸರಕಾರಿ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಯಾವುದೇ ಶುಲ್ಕವನ್ನು ತೆರಬೇಕಾಗಿಲ್ಲ. ಮೂರು ವರ್ಷಕ್ಕೊಮ್ಮೆ ನವೀಕರಣ ಮಾಡಿದರೆ ಸಾಕು. ಆದರೆ ಖಾಸಗಿ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಪ್ರತಿಯೊಂದಕ್ಕೂ ಶುಲ್ಕ ಪಾವತಿಸಬೇಕು. ಇನ್ನೂ ಕೆಲಸ ಸಿಕ್ಕಿದ ಬಳಿಕ ಮೊದಲ ಸಂಬಳದಲ್ಲಿ ಶೇ. 30ರಷ್ಟು ಹಣ ನೀಡಬೇಕು.

1959ರ ಕಾಯ್ಡೆ ಅನ್ವಯ ಜಿಲ್ಲೆಯ ಖಾಸಗಿ ಸಂಸ್ಥೆಗಳು ಪ್ರತಿ 3 ತಿಂಗಳಿಗೊಮ್ಮೆ ಉದ್ಯೋಗಾವಕಾಶ ಕಲ್ಪಿಸದ ಹಾಗೂ ಖಾಲಿಯಿರುವ ಹುದ್ದೆಗಳ ಕುರಿತು ಮಾಹಿತಿ ನೀಡುತ್ತದೆ. ಅಂತಯೇ ಖಾಲಿ ಹುದ್ದೆಗಳಿಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೊಂದಾಯಿಸಿಕೊಂಡ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕಳುಹಿಸಲಾಗುತ್ತದೆ.

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.