ಸರ್ವಜನೋತ್ಸವ ಸಮ್ಮೇಳನದ ಕಚೇರಿ ಉದ್ಘಾಟನೆ
Team Udayavani, Mar 7, 2019, 1:00 AM IST
ಉಡುಪಿ: ಸಂಕುಚಿತ ಭಾವನೆಬಿಟ್ಟು ಸಮಾನತೆ, ಸಹಬಾಳ್ವೆಯಿಂದ ಬದುಕಿದಾಗ ಮಾತ್ರ ದೇಶದಲ್ಲಿ ಏಕತೆ ಮೂಡಲು ಸಾಧ್ಯ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ತಿಳಿಸಿದರು.
ಜಿಲ್ಲಾ ಸಹಬಾಳ್ವೆ ಸಂಸ್ಥೆಯ ವತಿಯಿಂದ ನಡೆಯಲಿರುವ ಸರ್ವ ಜನೋತ್ಸವ ಸಮ್ಮೇಳನದ ಕಚೇರಿಯನ್ನು ಬುಧವಾರ ಸಿತಾರಾ ಕಾಂಪ್ಲೆಕ್ಸ್ ಉದ್ಘಾಟಿಸಿದರು.
ಸರ್ವ ಧರ್ಮದ ಸಂಕೇತವಾಗಿ ಜಿಲ್ಲೆ ಗುರುತಿಸಿಕೊಂಡಿದೆ. ಯಾವುದೇ ಒಂದು ಪ್ರದೇಶ ಅಭಿವೃದ್ಧಿಯಾಗಬೇಕಾದರೆ ಸಹಬಾಳ್ವೆಯಿಂದ ಮಾತ್ರ ಸಾಧ್ಯ. ಜಾತ್ಯತೀತರೆಲ್ಲ ಒಂದಾಗಿ ಮಾ. 17ರಂದು ನಗರದಲ್ಲಿ ಸರ್ವ ಜನೋತ್ಸವ ಸಮ್ಮೇಳನವನ್ನು ಏರ್ಪಡಿಸಲಾಗಿದೆ ಎಂದರು.
ಮಾಜಿ ಶಾಸಕ ಗೋಪಾಲ ಭಂಡಾರಿ ಮಾತನಾಡಿದರು. ಜಿಲ್ಲಾ ಸಹಬಾಳ್ವೆ ಸಂಘಟನೆ ಅಧ್ಯಕ್ಷ ಅಮೃತ್ ಶೆಣೈ ಮಾತನಾಡಿ ಮಾ. 17ರಂದು ಉಡುಪಿ ರೋಯಲ್ ಗಾರ್ಡನ್ನಲ್ಲಿ ಸರ್ವಜನೋತ್ಸವ ಸಮ್ಮೇಳನ ಏರ್ಪಡಿಸಲಾಗಿದೆ. ಸಚಿವ ಡಿ.ಕೆ. ಶಿವಕುಮಾರ್, ಜೆಡಿಎಸ್ನ ವೈ.ಎಸ್.ವಿ. ದತ್ತ, ವಿಚಾರವಾದಿ ದಿನೇಶ್ ಅಮೀನ್ ಮಟ್ಟು ಭಾಗವಹಿಸಲಿದ್ದಾರೆ ಎಂದರು.
ಜೆಡಿಎಸ್ ಜಿಲ್ಲಾಧ್ಯಕ್ಷ ವಿ. ಯೋಗೀಶ್ ಶೆಟ್ಟಿ, ಚಿಂತಕ ಜಿ.ರಾಜಶೇಖರ್ ಮಾತನಾಡಿದರು. ಫಾ| ವಿಲಿಯಂ ಮಾರ್ಟಿಸ್, ಜಿಲ್ಲಾ ಮುಸ್ಲಿಂ ಒಕ್ಕೂಟ ಕಾರ್ಯದರ್ಶಿ ಮಹಮ್ಮದ್ ಮೌಲಾ, ಬಡಗಬೆಟ್ಟು ಕ್ರೆ.ಕೋ.ಆ. ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಜಯಕರ್ ಶೆಟ್ಟಿ ಇಂದ್ರಾಳಿ, ಕರವೇ ಜಿಲ್ಲಾಧ್ಯಕ್ಷ ಅನ್ಸರ್ ಅಹಮ್ಮದ್, ಮುಖಂಡರಾದ ಜಿ.ಎ. ಬಾವ, ರೋಶನಿ, ಗಣೇಶ್ ನೆರ್ಗಿ, ಭಾಸ್ಕರ್ ರಾವ್ ಕಿದಿಯೂರು, ಯತೀಶ್ ಉಪಸ್ಥಿತರಿದ್ದರು. ಕಾಂಗ್ರೆಸ್ ನಾಯಕಿ ವೆರೋನಿಕಾ ಕರ್ನೇಲಿಯೋ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!