ಸಮಸ್ಯೆ ಪರಿಹರಿಸುವ ಏಕೈಕ ತಾಣ ದೇಗುಲ: ಅದಮಾರು ಶ್ರೀ


Team Udayavani, Mar 22, 2019, 1:00 AM IST

samasye-pariharisuva.jpg

ಉಡುಪಿ: ಒಂದೆಡೆ ದೇಗುಲಗಳು ಜೀರ್ಣೋದ್ಧಾರಗೊಳ್ಳುತ್ತಿದ್ದರೆ, ಇನ್ನೊಂದೆಡೆ ಕೆಲವರು ದೇವರು, ದೇಗುಲ ಮೂಢನಂಬಿಕೆ ಎಂದು ಬೊಬ್ಬಿಡುತ್ತಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಸಮಸ್ಯೆ ಎದುರಾದಾಗ ಪರಿಹಾರ
ದೊರಕುವ ಏಕೈಕ ತಾಣವೇ ದೇಗುಲ.

ದೇವರು, ದೇಗುಲಗಳು ಗಾಢ ನಂಬಿಕೆಯೇ ಹೊರತು ಮೂಢ ನಂಬಿಕೆಯಲ್ಲ ಎಂದು ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ನುಡಿದರು.

ಕನ್ನರ್ಪಾಡಿ ಶ್ರೀ ಜಯದುರ್ಗಾ ಪರಮೇಶ್ವರೀ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಚಾಲನೆ, ವಿಜ್ಞಾಪನ ಪತ್ರ ಬಿಡುಗಡೆ, ದಾರು ಮುಹೂರ್ತ ಮತ್ತು ಶಿಲಾ ಮುಹೂರ್ತ ಕಾರ್ಯಕ್ರಮ ದಲ್ಲಿ ಶ್ರೀಪಾದರು ಕಾಮಗಾರಿಗೆ ಚಾಲನೆ ನೀಡಿ ಆಶೀರ್ವಚನ ನೀಡಿದರು.

ಕೊಡುವ ಕೈಗಳಾಗಲಿ
ಬೆಂಗಳೂರು ಬ್ರಹ್ಮರ್ಷಿ ಆನಂದ ಸಿದ್ಧಪೀಠದ ಡಾ| ಮಹರ್ಷಿ ಆನಂದ ಗುರೂಜಿ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ, ಇನ್ನೊಬ್ಬರಿಗೆ ಕೊಡುವ ಕೈಗಳು ನಮ್ಮದಾಗಬೇಕು. ಬೇಡುವ ಕೈಗಳು ನಮ್ಮದಾಗ ಬಾರದು. ದೇಗುಲ ಜೀರ್ಣೋದ್ಧಾರಕ್ಕೆ ದೇಣಿಗೆ ನೀಡಿದಾಗ ದೇವರು ಕಷ್ಟ ನೀಗಿಸುತ್ತಾನೆ ಎಂದರು.

ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಟಿ. ಸುಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಡಾ| ಆನಂದ ಗುರೂಜಿ ದಾನಿಗಳಿಗೆ ವಿಜ್ಞಾಪನ ಪತ್ರ ವಿತರಿಸಿದರು.

ವಾಸ್ತುತಜ್ಞ ಸುಬ್ರಹ್ಮಣ್ಯ ಭಟ್‌ ಗುಂಡಿಬೈಲು, ದತ್ತಿ ಇಲಾಖೆಯ ಪ್ರಭಾರ ಸಹಾಯಕ ಆಯುಕ್ತ ಪ್ರವೀಣ್‌ ಬಿ. ನಾಯ್ಕ, ಅರ್ಚಕರಾದ ಹರಿದಾಸ ಭಟ್‌, ಶ್ರೀನಿವಾಸ ಭಟ್‌, ಕಿನ್ನಿಮೂಲ್ಕಿ ಶ್ರೀ ವೀರಭದ್ರ ದೇಗುಲದ ಪ್ರಭಾಶಂಕರ ಪದ್ಮಶಾಲಿ, ಪುತ್ತೂರು ಶ್ರೀ ಭಗವತಿ ದುರ್ಗಾಪರಮೇಶ್ವರೀ ದೇಗುಲದ ರಾಮ ಭಟ್‌, ಬೈಲೂರು ಶ್ರೀ ಮಹಿಷ ಮರ್ದಿನೀ ದೇಗುಲದ ರಮೇಶ ಶೆಟ್ಟಿ, ಉದ್ಯಾವರ ಶಂಭುಕಲ್ಲು ದೇಗುಲದ ರಾಘವೇಂದ್ರ ಮಯ್ಯ, ಬನ್ನಂಜೆ ಮಹಾಲಿಂಗೇಶ್ವರ ದೇಗುಲದ ಮಾಧವ ಪೂಜಾರಿ, ಕೊಡವೂರು ಶಂಕರ ನಾರಾಯಣ ದೇಗುಲದ ಪ್ರಕಾಶ ಜಿ. 
ಕೊಡವೂರು, ನಿಟ್ಟೂರು ಸೋಮನಾಥೇಶ್ವರ ದೇಗುಲದ ಕರಂಬಳ್ಳಿ ಶಿವರಾಮ ಶೆಟ್ಟಿ, ಕನ್ನರ್ಪಾಡಿ ಬ್ರಾಹ್ಮಣ ಸಭಾ ಅಧ್ಯಕ್ಷ ಸತೀಶ್‌ ರಾವ್‌, ವ್ಯವಸ್ಥಾಪನ ಸಮಿತಿಯ ನಿರುಪಮಾ ಪಿ. ಶೆಟ್ಟಿ, ಕೃಷ್ಣ ಶೆಟ್ಟಿ, ಆನಂದ ಗುರೂಜಿ ಅವರ ಪತ್ನಿ ಉಪಸ್ಥಿತರಿದ್ದರು. ಆಡಳಿತ ಮೊಕ್ತೇಸರ ಕೆ. ಕೃಷ್ಣಮೂರ್ತಿ ಆಚಾರ್ಯ ಪ್ರಸ್ತಾವನೆಗೈದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್‌. ಮುರಳೀಧರ ಬಲ್ಲಾಳ್‌ ಸ್ವಾಗತಿಸಿ ಪ್ರ.ಕಾರ್ಯದರ್ಶಿ ಸಂಜೀವ ಎ. ವಂದಿಸಿದರು. ಮುರಳೀಧರ ರಾವ್‌ ವೈ., ಭಾಸ್ಕರ ಸುವರ್ಣ ನಿರೂಪಿಸಿದರು.

ಆಸ್ಪತ್ರೆ-ದೇಗುಲ, ವೈದ್ಯ-ದೇವರು
ಪರಿಹರಿಸಲಾಗದ ಸಮಸ್ಯೆಗಳಿಗೆ ಪರಿಹಾರ ದೊರಕುವುದು ದೇಗುಲವೆಂಬ ಆಸ್ಪತ್ರೆಯಲ್ಲಿ ಮಾತ್ರ. ದೇಹಕ್ಕೆ ಔಷಧವನ್ನು ವೈದ್ಯರು ಕೊಟ್ಟರೆ ಮನೋ ರೋಗಕ್ಕೆ (ಮನಃಶಾಂತಿ) ಔಷಧ ಕೊಡುವವನು ದೇವರು ಮಾತ್ರ. ಆದ್ದರಿಂದಲೇ “ವೈದ್ಯೋ ನಾರಾಯಣೋ ಹರಿಃ’ ಎನ್ನಲಾಗಿದೆ. ಆಸ್ಪತ್ರೆ ದೇಗುಲವಾದರೆ, ಅಲ್ಲಿರುವ ವೈದ್ಯ ದೇವರು, ಭಕ್ತನೆಂಬ ರೋಗಿಗೆ ಔಷಧವನ್ನು ದೇವರು ಕರುಣಿಸುತ್ತಿದ್ದಾನೆ. ದೇವರಿಗೆ ನಮ್ಮೆರಡು ಕೈಗಳಿಂದ ಕೊಟ್ಟರೆ ದೇವರು ನಮಗೆ ಸಾವಿರದ (ಸಾವು+ಇರದ) ಕೈಗಳಿಂದ ಕೊಡುತ್ತಾನೆ. ನಾವು ಕೊಟ್ಟಿದ್ದಕ್ಕಿಂತ ನಮಗೆ ದೇವರು ಸಾವಿರ ಪಟ್ಟು ಹೆಚ್ಚು ಕೊಡುತ್ತಾನೆ ಎಂದು ಅದಮಾರು ಶ್ರೀಗಳು ನುಡಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.