ಗುಣಮಟ್ಟದ ಹಾಲು ಪೂರೈಸುವುದೇ ಧ್ಯೇಯವಾಗಿರಿಸಿದ ಸಂಸ್ಥೆ

ಕೆದೂರು ಹಾಲು ಉತ್ಪಾದಕರ ಸಹಕಾರಿ ಸಂಘ

Team Udayavani, Feb 27, 2020, 5:19 AM IST

2502TKE2

ಗ್ರಾಮೀಣ ಹಾಲು ಉತ್ಪಾದಕರ ಅಭಿವೃದ್ಧಿ, ಗುಣಮಟ್ಟದ ಹಾಲು ನೀಡಬೇಕೆನ್ನುವ ಆಕಾಂಕ್ಷೆಯೊಂದಿಗೆ ಹುಟ್ಟಿಕೊಂಡ ಕೆದೂರು ಹಾಲು ಉತ್ಪಾದಕರ ಸಂಘ ಇತರ ಸಂಘಗಳಿಗೆ ಮಾದರಿಯಾಗಿ ನಿಂತಿದೆ.

ಕೆದೂರು: ಗ್ರಾಮೀಣ ಭಾಗದ ಹೈನುಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಿಂದ ಆರಂಭಗೊಂಡ ಕೆದೂರು ಹಾಲು ಉತ್ಪಾದಕರ ಸಹಕಾರ ಸಂಘ ಗುಣಮಟ್ಟದ ಹಾಲು ಉತ್ಪಾದನೆಯಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿದೆ. ಈ ಸಂಘಕ್ಕೀಗ 32 ವರ್ಷ.

1988 ರಲ್ಲಿ ಆರಂಭ
ಸುತ್ತಮುತ್ತಲಿನ ಶಾನಾಡಿ,ಹೊಸಮಠ, ಚಾರುಕೊಟ್ಟಿಗೆ ಗ್ರಾಮೀಣ ಭಾಗದ ಹೈನುಗಾರರು ಹಾಲು ಮಾರಾಟಕ್ಕೆ ದೂರ ಕ್ರಮಿಸಬೇಕಾದ ಅನಿವಾರ್ಯ ಒಂದೆಡೆ ಯಾದರೆ ಮತ್ತೂಂದೆಡೆ ಗ್ರಾಮದಲ್ಲಿ ಹಾಲು ಉತ್ಪಾದಕರಿಂದ ಖಾಸಗಿ ಸಂಸ್ಥೆಯೊಂದು ಹಾಲು ಸಂಗ್ರಹಿಸುತ್ತಿತ್ತು. ಇದರಿಂದ ಗ್ರಾಮೀಣ ಹೈನುಗಾರರ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕದ್ದರಿಂದ ಕೆದೂರು ಸೀತಾರಾಮ ಶೆಟ್ಟಿ, ಸ್ಥಾಪಕ ಅಧ್ಯಕ್ಷ ಕಾಳಪ್ಪ ಶೆಟ್ಟಿ ಅವರು ಸಮಾನ ಮನಸ್ಕರೊಂದಿಗೆ ಸೇರಿಕೊಂಡು 1988 ಎ.23ರಂದು ಸಂಘ ಸ್ಥಾಪನೆ ಮಾಡಿದರು. ಈ ವೇಳೆ ಸದಸ್ಯರ ಬಲ 32 ಆಗಿತ್ತು. ಅಂದು ಸುಮಾರು 60 ಲೀ. ಸಂಗ್ರಹವಾಗುತ್ತಿತ್ತು.

ಸರ್ವ ವ್ಯವಸ್ಥೆ
1998ರಲ್ಲಿ ಸ್ವಂತ ಕಟ್ಟಡವನ್ನು ಸಂಘ ನಿರ್ಮಾಣ ಮಾಡಿತ್ತು. 2013 ರಲ್ಲಿ ಸುಮಾರು 5 ಸಾವಿರ ಲೀ. ಸಾಮರ್ಥ್ಯದ ಶೀತಲೀಕರಣ ಸ್ಥಾಪಿಸಲಾಗಿದೆ.

ಕಾರ್ಯಕ್ರಮಗಳು
ಸಂಘವು 2016-17ರಲ್ಲಿ ಜಾನುವಾರು ಪ್ರದರ್ಶನವನ್ನು ಆಯೋಜಿಸಿದ್ದು, ಮಿಶ್ರತಳಿ ಕರುಗಳ ಪ್ರದರ್ಶನ, 50ಕ್ಕೂ ಅಧಿಕ ಗೊಬ್ಬರ ಅನಿಲ ಸ್ಥಾವರ ಘಟಕ ನಿರ್ಮಾಣಕ್ಕೆ ಪ್ರೋತ್ಸಾಹ, ಅಜೋಲಾ ಹಾಗೂ ವಿದ್ಯಾರ್ಥಿ ವೇತನ, ಸದಸ್ಯರಿಗೆ ವಿವಿಧ ಸೌಲಭ್ಯಗಳ ವಿತರಣೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಚುನಾವಣೆಯೇ ಆಗಿಲ್ಲ!
ಸಂಘ ಆರಂಭಗೊಂಡು 32 ವರ್ಷಗಳೇ ಕಳೆದರೂ ಕೂಡಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗಾಗಿ ಚುನಾವಣೆಗಳು ನಡೆಸದೆ ಪರಿಸರದ ಪ್ರಜ್ಞಾವಂತ ಹೈನುಗಾರರು ಬೆಂಬಲದಿಂದಾಗಿ ಸಂಘದ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡುತ್ತಿರುವುದೇ ಇತಿಹಾಸ.

ಇಂದಿನ ಸ್ಥಿತಿಗತಿ
ಪ್ರಸ್ತುತ ಸುಮಾರು 288 ಸದಸ್ಯರನ್ನು ಒಳಗೊಂಡಿದ್ದು , ಹಾಲು ಉತ್ಪಾದಕ ಸದಸ್ಯರು 180 ಮಂದಿ ಇದ್ದಾರೆ. ನಿತ್ಯ 1600 ಲೀ. ಹಾಲು ಸಂಗ್ರಹವಾಗುತ್ತಿದೆ. ಬಿಸಿನೀರಿನಿಂದ ಹಾಲಿನ ಪಾತ್ರೆ ತೊಳೆಯುವ ವ್ಯವಸ್ಥೆ , ಡ್ರೈನೇಜ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಪ್ರಶಸ್ತಿ
ಕೆದೂರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ 1994ರಲ್ಲಿ ಉತ್ತಮ ಸಂಘ ಪ್ರಶಸ್ತಿ ದೊರಕಿದೆ.

200 ಕ್ಕೂ ಅಧಿಕ ಗ್ರಾಮೀಣ ಹೈನುಗಾರರು ಸಂಘದಿಂದಾಗಿ ಸ್ವಾವಲಂಬಿ ಬದುಕು ಕಟ್ಟಿಕೊಂಡು ಯಶ ಕಂಡಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಸಂಘವನ್ನು ಮಾದರಿ ಸಂಘವನ್ನಾಗಿಸುವ ಗುರಿ ಹೊಂದಿದ್ದೇವೆ.
-ಸುರೇಂದ್ರ ಶೆಟ್ಟಿ, ಅಧ್ಯಕ್ಷರು

ಅಧ್ಯಕ್ಷರು:
ಕೆ. ಕಾಳಪ್ಪ ಶೆಟ್ಟಿ, ಎಸ್‌. ಮಹಾಬಲ ಶೆಟ್ಟಿ, ಶೇಷು ಯಾನೆ ಶೇಖರ್‌ ಶೆಟ್ಟಿ, ಜಿ.ಶೇಖರ್‌ ಶೆಟ್ಟಿ, ಕೆ.ಆನಂದ ಶೆಟ್ಟಿ, ಕೆ.ಕರುಣಾಕರ ಶೆಟ್ಟಿ, ಸುರೇಂದ್ರ ಶೆಟ್ಟಿ (ಹಾಲಿ)
ಕಾರ್ಯದರ್ಶಿಗಳು:
ಕುಶಲ ಶೆಟ್ಟಿ, ರೋಹಿಣಿ ಶೆಟ್ಟಿ, ಬೇಬಿ
ಕೆದೂರು (ಹಾಲಿ)

-  ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.