ರೋಗಿಗಳಿದ್ದ ಆ್ಯಂಬುಲೆನ್ಸನ್ನು ಮರಳಿ ಕಳಿಸಿದ ಪೊಲೀಸರು

ಹೆಜಮಾಡಿ ಚೆಕ್‌ಪೋಸ್ಟ್‌ನಲ್ಲಿ ಗೊಂದಲ

Team Udayavani, May 7, 2020, 6:25 AM IST

ರೋಗಿಗಳಿದ್ದ ಆ್ಯಂಬುಲೆನ್ಸನ್ನು ಮರಳಿ ಕಳಿಸಿದ ಪೊಲೀಸರು

ಸಾಂದರ್ಭಿಕ ಚಿತ್ರ.

ಉಡುಪಿ/ ಪಡುಬಿದ್ರಿ: ಮಂಗಳೂರು ಕಡೆಯಿಂದ ಬಂದಿದ್ದ ಆ್ಯಂಬುಲೆನ್ಸ್‌ನಲ್ಲಿದ್ದ ನಾಲ್ವರು ಶಂಕಿತ ರೋಗಿಗಳನ್ನು ಸಂಶಯಾಸ್ಪದ ರೀತಿಯಲ್ಲಿ ಇನ್ನೊಂದು ಆ್ಯಂಬುಲೆನ್ಸ್‌ಗೆ ವರ್ಗಾಯಿಸಿ ಉಡುಪಿಯತ್ತ ಸಾಗಹಾಕಲು ಯತ್ನಿಸಿದ ಘಟನೆ ಹೆಜಮಾಡಿ ಚೆಕ್‌ಪೋಸ್ಟ್‌ನಲ್ಲಿ ಮೇ 5ರ ರಾತ್ರಿ ನಡೆದಿದೆ.

ಮಂಗಳೂರು ಕಡೆಯಿಂದ ಬಂದ ಆ್ಯಂಬುಲೆನ್ಸ್‌ ಚಾಲಕ ಚೆಕ್‌ಪೋಸ್ಟ್‌ ನಲ್ಲಿ ವಾಹನ ಸಂಖ್ಯೆ ನೋಂದಾಯಿಸಿ ಉಡುಪಿಗೆಂದು ದಾಖಲಿಸಿದ್ದ, ಎಲ್ಲ ಔಪಚಾರಿಕ ಕ್ರಮಗಳನ್ನು ಮುಗಿಸಿ ಮುಂದಕ್ಕೆ ಬಿಡಲಾಗಿತ್ತು. ಉಡುಪಿಯತ್ತ ಹೆದ್ದಾರಿಯಲ್ಲಿ ಸುಮಾರು 100 ಮೀಟರ್‌ ಸಾಗಿದ ಬಳಿಕ ಅದಾ
ಗಲೇ ಉಡುಪಿಯ ಕೋವಿಡ್ -19 ಆಸ್ಪತ್ರೆಯಿಂದ ಬಂದು ನಿಂತಿದ್ದ ಆ್ಯಂಬುಲೆನ್ಸ್‌ಗೆ ರೋಗಿಗಳನ್ನು ವರ್ಗಾಯಿಸಲಾಯಿತು. ಇದನ್ನು ಕಂಡು ಚೆಕ್ ಪೋಸ್ಟ್‌ ಸಿಬಂದಿ ಅರುಣ್‌ ಕುಮಾರ್‌ ಪ್ರಶ್ನಿಸಿದ್ದರು ಎನ್ನಲಾಗಿದೆ. ಆಗ ಆ್ಯಂಬುಲೆನ್ಸ್‌ ಸಿಬಂದಿ ಅವರ ಗುರುತುಪತ್ರ ತೋರಿಸುವಂತೆ ಸೂಚಿಸಿದ್ದರು. ಈ ವೇಳೆ ಮಾತಿನ ಚಕಮಕಿ ನಡೆದಿದೆ.ಅನಂತರ ಚೆಕ್‌ಪೋಸ್ಟ್‌ ಸಿಬಂದಿ ಜಿಲ್ಲಾಧಿಕಾರಿಗಳ ಆದೇಶ ಪತ್ರ ನೀಡುವಂತೆ ಸೂಚಿಸಿದರು ಎನ್ನಲಾಗಿದೆ.

ಈ ವೇಳೆ ಪಡುಬಿದ್ರಿ ಪಿಎಸ್‌ಐ ಸುಬ್ಬಣ್ಣ ಅವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು, ಆ್ಯಂಬುಲೆನ್ಸ್‌ನವರ ಬಳಿ ಯಾವುದೇ ಅಧಿಕೃತ ಅನುಮತಿ ಪತ್ರಗಳು ಇಲ್ಲವೆಂಬ ಕಾರಣಕ್ಕೆರೋಗಿಗಳನ್ನು ಮೊದಲಿನ ಆ್ಯಂಬುಲೆನ್ಸ್‌ಗೆ ವರ್ಗಾಯಿಸಿ ಮಂಗಳೂರಿನತ್ತ ಮರಳುವಂತೆ ಸೂಚಿಸಿದರು.ಮೂಲತಃ ಉಡುಪಿ ಜಿಲ್ಲೆಯವರಾಗಿದ್ದ ರೋಗಿಗಳು ಮಂಗಳೂರಿನಲ್ಲಿ ಕ್ವಾರಂಟೈನ್‌ ಅವಧಿ ಮುಕ್ತಾಯಗೊಳಿಸಿ ಕ್ವಾರಂಟೈನ್‌ಗಾಗಿ ಉಡುಪಿ ಜಿಲ್ಲೆಯ ಉದ್ಯಾವರದ ಆಸ್ಪತ್ರೆಗೆ ತೆರಳುತ್ತಿದ್ದರು ಎನ್ನಲಾಗಿದೆ. ತುರ್ತು ಸೇವೆಗಳಿದ್ದರೆ ಮಾತ್ರ ಮಂಗಳೂರಿನ ಆ್ಯಂಬುಲೆನ್ಸ್‌ ಉಡುಪಿಗೆ ಬರುತ್ತದೆ. ಆದರೆ ಇದು ಕ್ವಾರಂಟೈನ್‌ ಮುಗಿದಿದ್ದ ಕಾರಣ ಇನ್ನೊಂದು ಆ್ಯಂಬುಲೆನ್ಸ್‌ಗೆ ಶಿಫ್ಟ್ ಮಾಡಲಾಗುತ್ತಿತ್ತು. ಎಲ್ಲ ವೈದ್ಯಕೀಯ ದಾಖಲೆಗಳೂ ಇದ್ದವು. ಆದರೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ಕಾರಣ ಅವರನ್ನು ಸ್ಥಳಾಂತರ ಮಾಡಲಾಗಲಿಲ್ಲ ಎನ್ನುತ್ತಾರೆ ಆ್ಯಂಬುಲೆನ್ಸ್‌ ಚಾಲಕರು.

 

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.