ಪ್ರಶಂಸೆಗೆ ಪಾತ್ರವಾದ ಪೌರಕಾರ್ಮಿಕರ ಸ್ವಚ್ಛತೆ ಕಾರ್ಯ


Team Udayavani, Jan 18, 2020, 10:59 PM IST

meg-22

ಉಡುಪಿ: ಅದಮಾರು ಪರ್ಯಾಯ ಅಂಗವಾಗಿ ಶನಿವಾರ ನಡೆದ ಅದ್ದೂರಿ ಮೆರವಣಿಗೆಯಲ್ಲಿ ನಗರಸಭೆ ಸ್ವಚ್ಛತೆಗೆ ನೀಡಿದ ಪ್ರಾಮುಖ್ಯ ಪ್ರವಾಸಿಗರ ಮೆಚ್ಚುಗೆ ಪಡೆಯಿತು.

ಮೆರವಣಿಗೆ ಹೋಗುತ್ತಿದ್ದಂತೆ ರಸ್ತೆಯೂ ಸ್ವಚ್ಛ
ಶನಿವಾರ ಮುಂಜಾನೆ 2ಗಂಟೆಗೆ ಜೋಡುಕಟ್ಟೆಯಿಂದ ಆರಂಭವಾಗಿದ್ದ ಮೆರವಣಿಗೆಯು ಮುಂದೆ ಸಾಗುತ್ತಿದ್ದರೆ, ಹಿಂದೆಯೇ ಪೌರ ಕಾರ್ಮಿಕರು ರಸ್ತೆಯನ್ನು ಸ್ವಚ್ಛಗೊಳಿಸಿದರು. ಉಡುಪಿ ನಗರ ಪ್ರಮುಖ ಬೀದಿ ತೆಂಕಪೇಟೆ, ಸಿಟಿ ಹಾಗೂ ಸರ್ವೀಸ್‌ ಬಸ್‌ ನಿಲ್ದಾಣ, ಅಜ್ಜರಕಾಡು ರಸ್ತೆ, ಕಲ್ಸಂಕ ಅಡ್ಡ ರಸ್ತೆಯನ್ನು ಕ್ಷಣ ಮಾತ್ರದಲ್ಲಿ ಪೌರ ಕಾರ್ಮಿಕರು ಸ್ವಚ್ಛಗೊಳಿಸಿದರು.

ರಾತ್ರಿ 12ರಿಂದಲೇ ಕೆಲಸ
ರಾತ್ರಿ 12 ಗಂಟೆಯ ಸುಮಾರಿಗೆ ನಗರದ ವಿವಿಧ ಕಡೆಯಲ್ಲಿ ಹಮ್ಮಿಕೊಂಡ ಸಾಂಸ್ಕೃತಿಕ ಕಾರ್ಯಕ್ರಮ ಮುಗಿಯುತ್ತಿದಂತೆ ಸ್ಥಳವನ್ನು ಶುಚಿಗೊಳಿಸಲು ಶಿಸ್ತಿನ ಸಿಪಾಯಿಗಳಂತೆ ನಿಂತಿರುವ ದೃಶ್ಯಗಳು ಕಂಡು ಬಂದಿತು.

80 ಮಂದಿಯ ತಂಡ
ಸುಮಾರು 80 ಜನರ ಪೌರಕಾರ್ಮಿಕರ ತಂಡ ಹಾಗೂ ಪಿಪಿಸಿ ಕಾಲೇಜಿನ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಪರ್ಯಾಯ ಜೋಡುಕಟ್ಟೆಯಿಂದ ಕೃಷ್ಣಮಠದವರೆಗೆ ರಸ್ತೆಯನ್ನು ಸ್ವಚ್ಛಗೊಳಿಸಿದರು. ಸಂಗ್ರಹಿಸಿದ್ದ ತ್ಯಾಜ್ಯವನ್ನು ಎರಡು ಟೆಂಪೋಗಳ ಮೂಲಕ ತ್ಯಾಜ್ಯ ಸಂಗ್ರಹಣ ಘಟಕಕ್ಕೆ ತೆಗೆದುಕೊಂಡು ಹೋಗಲಾಗಿದೆ.

ಟ್ಯಾಬ್ಲೋ -ಸ್ವಚ್ಛತೆ ಸಂದೇಶ
ಪರ್ಯಾಯ ಮೆರವಣಿಗೆಯಲ್ಲಿ ನಗರಸಭೆಯ ಸ್ವಚ್ಛ ನಗರ ಪರಿಕಲ್ಪನೆಯ ಟ್ಯಾಬ್ಲೋ ನೆರೆದಿದ್ದ ಜನರ ಗಮನಸೆಳೆಯಿತು.ಅದಕ್ಕೆ ತಕ್ಕಂತೆ ನಗರಸಭೆಯ ಪೌರ ಕಾರ್ಮಿಕರು ಸ್ವಚ್ಛತೆ ಕಾಪಾಡಿರುವುದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ವಿದ್ಯಾರ್ಥಿಗಳ ಸಹಕಾರ
ಪರ್ಯಾಯಕ್ಕೆ ಪೂರ್ಣಪ್ರಜ್ಞ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್‌ ಸ್ವಯಂಸೇವಕರು, ಗಾಂಧಿ ಆಸ್ಪತ್ರೆಯ ಸಿಬಂದಿ ಕೃಷ್ಣ ಮಠ ಸೇರಿದಂತೆ ವಿವಿಧ ಸ್ಥಳವನ್ನು ಸ್ವಚ್ಛಗೊಳಿಸಿದರು.

ಊಟದ ತಟ್ಟೆ ಎಸೆಯದಂತೆ ಎಚ್ಚರ
ಕಳೆದ ಎರಡು ದಿನಗಳಿಂದ ಮಠದ ಕಾರ್‌ ಪಾರ್ಕಿಂಗ್‌ ಸಮೀಪ ಭಕ್ತರಿಗೆ ವಿಶೇಷ ಭೋಜನ ವ್ಯವಸ್ಥೆ ಕಲ್ಪಿಸಲಾಯಿತು. ಮಧ್ಯಾಹ್ನ ಹಾಗೂ ರಾತ್ರಿ ಸಾವಿರಾರು ಜನರು ಊಟ ಸೇವಿಸಿದರೂ ಒಂದೇ ಒಂದು ತಟ್ಟೆ ಹೊರಗಡೆ ಕಾಣ ಸಿಗಲಿಲ್ಲ. ಊಟದ ತಟ್ಟೆಯನ್ನು ಹೊರಗಡೆ ಎಸೆಯದಂತೆ ಎಚ್ಚರ ವಹಿಸಲಾಗಿತ್ತು. ಪೌರ ಕಾರ್ಮಿಕರು, ಸ್ವಯಂಸೇವಕರು ಊಟದ ತಟ್ಟೆ ಸಂಗ್ರಹವಾಗುತ್ತಿದ್ದಂತೆ ಟೆಂಪೋಗಳ ಮೂಲಕ ತ್ಯಾಜ್ಯ ಸಂಗ್ರಹಣ ಘಟಕದಲ್ಲಿ ಡಂಪ್‌ ಮಾಡಿದರು.

ಇತರರಿಗೆ ಮಾದರಿ
ಮೆರವಣಿಗೆ ಹೋಗುತ್ತಿದಂತೆ ಪೌರ ಕಾರ್ಮಿಕರು, ವಿದ್ಯಾರ್ಥಿಗಳು, ಇತರೆ ಸ್ವಯಂ ಸೇವಕರು ರಸ್ತೆಗಳನ್ನು ಕ್ಷಣ ಮಾತ್ರದಲ್ಲಿ ಸ್ವಚ್ಛಗೊಳಿಸಿದ್ದಾರೆ. ನಗರಸಭೆ ಸ್ವಚ್ಛತೆಗೆ ಪ್ರಾಮುಖ್ಯ ನೀಡಿದೆ. ಈ ಕಾರ್ಯ ಇತರರಿಗೆ ಮಾದರಿಯಾಬೇಕು. ದರ್ಬಾರ್‌ ಸಭೆಯಲ್ಲಿ ಹಿರಿಯ ಪೌರಕಾರ್ಮಿಕರೊಬ್ಬರನ್ನು ಸಮ್ಮಾನಿಸುತ್ತಿರುವುದು ಶ್ಲಾಘನೀಯ.
-ಭರತ್‌ ಶೆಟ್ಟಿ, ಮಂಗಳೂರು

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.