ಹೊಸ್ಮಾರು ಜಂಕ್ಷನ್‌ನಲ್ಲೆ ಇದೆ ಸಮಸ್ಯೆ ಹತ್ತಾರು!

ರಸ್ತೆ ಬದಿ ನಿಂತೇ ಬಸ್‌ ಕಾಯಬೇಕು; ಶೌಚಾಲಯಕ್ಕೆ ಸುತ್ತಬೇಕು;ಮೂಲ ಸೌಕರ್ಯ ವಿಸ್ತರಣೆಗೆ ಖಾಸಗಿ ಭೂಮಿ ಅಡ್ಡಿ

Team Udayavani, Oct 25, 2021, 5:20 AM IST

ಹೊಸ್ಮಾರು ಜಂಕ್ಷನ್‌ನಲ್ಲೆ ಇದೆ ಸಮಸ್ಯೆ ಹತ್ತಾರು!

ಕಾರ್ಕಳ: ಮಂಗಳೂರಿನಿಂದ ಶಿರ್ತಾಡಿ, ಮೂಡಬಿದಿರೆ ಸಂಪರ್ಕ ರಸ್ತೆಯ ಜಂಕ್ಷನ್‌ಗೆ ಬಂದು ಸೇರುವಲ್ಲಿ ಹತ್ತಾರು ಮೂಲ ಸೌಕರ್ಯ ಸಮಸ್ಯೆಗಳು ಜನರನ್ನು ನಿತ್ಯ ಕಾಡುತ್ತಿವೆ. ಈದು ಗ್ರಾ.ಪಂ. ವ್ಯಾಪ್ತಿಗೆ ಸೇರಿದ ಕಾರ್ಕಳ- ನಾರಾವಿ ಮಧ್ಯೆ ಇರುವ ಹೊಸ್ಮಾರು ಜಂಕ್ಷನ್‌ನಲ್ಲಿ ಚರಂಡಿ, ಸೂಕ್ತ ಬಸ್‌ ತಂಗುದಾಣ, ಸಾರ್ವಜನಿಕ ಶೌಚಾಲಯ ಇಲ್ಲದೆ ಪ್ರಯಾಣಿಕರು, ವ್ಯಾಪಾರಸ್ಥರು, ವಾಹನ ಚಾಲಕರು ನಾನಾ ಸಮಸ್ಯೆ ಅನುಭವಿಸುವಂತಾಗಿದೆ.

ಈ ಜಂಕ್ಷನ್‌ನಲ್ಲಿ ಹತ್ತಾರು ಅಂಗಡಿಗಳಿವೆ. ಕ್ಲಿನಿಕ್‌, ಆಯುರ್ವೇದ ಕೇಂದ್ರ,ಕೆಲ ಕಚೇರಿಗಳು ಇಲ್ಲಿವೆ. ಸುತ್ತಮುತ್ತಲಿ ನವರು ವಿವಿಧ ಕಾರಣಗಳಿಗಾಗಿ ಇಲ್ಲಿಗೆ ಬರುತ್ತಾರೆ. ಇಲ್ಲಿನ ಬಸ್‌ ನಿಲ್ದಾಣಶಿಸ್ತುಬದ್ದವಾಗಿಲ್ಲದ ಕಾರಣ ಬಳಕೆಗೆ ಯೋಗ್ಯವಾಗಿಲ್ಲ. ಇಲ್ಲಿ ಬಸ್‌ನಿಲ್ದಾಣ ಉಪಯೋಗಕ್ಕೆ ಇರಬೇಕಿದ್ದ ಜಾಗದಲ್ಲಿಲ್ಲ. ರಸ್ತೆಯ ಆಚೆ ಬದಿಯಲ್ಲಿ ಬಸ್‌ ನಿಲ್ದಾಣವಿದೆ. ಬಸ್‌ ಹತ್ತಲು ರಸ್ತೆ ದಾಟಿ ಬರಬೇಕು. ದಾಟುವ ವೇಳೆ ಸಮಸ್ಯೆಯಾಗುತ್ತಿದೆ. ಬಸ್‌ನಿಲ್ದಾಣಕ್ಕೆ ತೆರಳಲು ಯಾರೂ ಕೇಳುತ್ತಿಲ್ಲ. ಇದರಿಂದ ಕಾರ್ಕಳ, ಮಂಗಳೂರು, ಧರ್ಮಸ್ಥಳ ಕಡೆಗೆ ಪ್ರಯಾಣಿಸುವವರು ರಸ್ತೆ ಬದಿಯಲ್ಲೆ ಬಸ್‌ಗಾಗಿ ಕಾಯುತ್ತಾರೆ. ವೃದ್ಧರು, ಮಹಿಳೆಯರು, ಮಕ್ಕಳು ನಿತ್ಯ ರಸ್ತೆ ಬದಿಯಲ್ಲಿ ಬಿಸಿಲು, ಮಳೆಗೆ ಮೈಯೊಡ್ಡಿ ನಿಂತಿರುವ ದೃಶ್ಯ ಸರ್ವೇ ಸಾಮಾನ್ಯವಾಗಿದೆ. ಸಣ್ಣ ಮಕ್ಕಳು ರಸ್ತೆ ಕಡೆಗೆ ಬಂದಲ್ಲಿ ಅಪಾಯವೂ ಇದೆ. ಸಾರ್ವಜನಿಕರ ಸಮಸ್ಯೆ ಅರಿತ ಜೈನ ಸಮುದಾಯದ ಶ್ರಾವಕ, ಶ್ರಾವಿಕೆಯರು ಜಂಕ್ಷನ್‌ನಲ್ಲೆ ನಾಲ್ಕೈದು ಮಂದಿ ವಿಶ್ರಾಂತಿ ಪಡೆಯುವಂತೆ ಕಟ್ಟೆಯೊಂದನ್ನು ನಿರ್ಮಿಸಿ ಸಹಕರಿಸಿದ್ದಾರೆ. ಇದು ಸ್ವಲ್ಪ ಮಟ್ಟಿಗೆ ಅನುಕೂಲವಾಗಿದೆ.

ಸಾರ್ವಜನಿಕ ಶೌಚಾಲಯವಿಲ್ಲ
ಜಂಕ್ಷನ್‌ನಲ್ಲಿ ಸಾರ್ವಜನಿಕರ ಬಳಕೆಗೆ ಸೂಕ್ತ ಸಾರ್ವಜನಿಕ ಶೌಚಾಲಯವಿಲ್ಲ. ಇಲ್ಲಿಂದ ಸುಮಾರು 200 ಮೀ. ದೂರದಲ್ಲಿ ಖಾಸಗಿ ಸಂಸ್ಥೆ ನಿರ್ಮಿಸಿದ ಶೌಚಾಲಯವಿದ್ದು. ಅದು ತುಸು ದೂರದಲ್ಲಿದೆ. ಜಂಕ್ಷನ್‌ಗೆ ಬರುವವರಿಗೆ ಅದು ಉಪಯುಕ್ತವಾಗಿಲ್ಲ. ಬಸ್‌ಗಾಗಿ ಕಾಯುವವರು ಪಕ್ಕದಲ್ಲಿರುವ ಕಟ್ಟಡ, ಅಂಗಡಿಗಳ ಹಿಂದಿನ ನಿರ್ಜನ ಪ್ರದೇಶಗಳಿಗೆ ತೆರಳುತ್ತಾರೆ. ಮಹಿಳೆಯರು, ಶಾಲಾ ಮಕ್ಕಳು ಮುಜುಗರ ಅನುಭವಿಸುತ್ತಾರೆ. ಪಿಡಬ್ಲ್ಯುಡಿ ಇಲಾಖೆಯಿಂದ ಇಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯೂ ಆಗಿಲ್ಲ. ಎರಡೂ ಜಿಲ್ಲೆಗೆ ಹಂಚಿಕೊಂಡಿದೆ ಜಂಕ್ಷನ್‌ ಬಳಕೆ ದ.ಕ., ಉಡುಪಿ ಜಿಲ್ಲೆಗಳ ಕೆಲ ಗ್ರಾಮಗಳಿಗೆ ಹಂಚಿಕೊಂಡಿದೆ. ದ.ಕ. ಜಿಲ್ಲೆಯ ಮಾಂಟ್ರಾಡಿ, ಬೋರುಗುಡ್ಡೆ, ನಾರಾವಿ, ಅಲಿಯೂರು, ನೆಲ್ಲಿಕಾರು,
ಉಡುಪಿ ಜಿಲ್ಲೆಗೆ ಸೇರಿದ ಈದು, ನೂರಾಲ್‌ ಬೆಟ್ಟು ಆಸುಪಾಸಿನವರಿಗೆಇದು ಅನುಕೂಲವಾಗಿದೆ.

ಇದನ್ನೂ ಓದಿ:ಎಂ.ಎ.ಹೆಗಡೆ ಅವರಿಗೆ‌ ಮರಣೋತ್ತರ ಚಂದುಬಾಬು‌ ಪ್ರಶಸ್ತಿ ಪ್ರದಾನ‌

ಶಿಥಿಲಗೊಂಡ ಬಸ್‌ ನಿಲ್ದಾಣ
ಇದ್ದ ಬಸ್‌ನಿಲ್ದಾಣ ಕೂಡ ಶಿಥಿಲಾವಸ್ಥೆಯಲ್ಲಿದ್ದು ಕುಡುಕರ ತಾಣದಂತಿದೆ. ಇಲ್ಲಿಯ ಮೇಲ್ಛಾವಣಿ, ಪೀಠೊಪಕರಣಗಳು ಮುರಿದು ನೇತಾಡಿಕೊಂಡು ಧರೆಗೆ ಬೀಳುವುದರಲ್ಲಿದೆ. ಮಳೆಗೆ ನೀರು ಒಳಗೆ ಬರದಂತೆ ಪ್ಲಾಸ್ಟಿಕ್‌ ಹೊದಿಸಲಾಗಿದೆ. ಬಸ್‌ನಿಲ್ದಾಣದ ಒಳಗೆ ಬೀಡಿ, ಗುಟ್ಕ ಇನ್ನಿತರ ತ್ಯಾಜ್ಯ ವಸ್ತುಗಳು ತುಂಬಿ ಹೋಗಿದ್ದು, ದನದ ದೊಡ್ಡಿಯಂತಿದೆ. ಇಲ್ಲಿ ಕುಡುಕರು ಬಿಡಾರ ಹೂಡುತ್ತಿದ್ದು, ಇದರೊಳಗೆ ನಾಗರಿಕರು ತೆರಳುವಂತಿಲ್ಲ.

ಫ‌ಂಡ್‌ ಮೀಸಲಿರಿಸಲಾಗಿದೆ
ಸಾರ್ವಜನಿಕ ಶೌಚಾಲಯ ಇದೆ. ಅದು ಸ್ವಲ್ಪ ದೂರದಲ್ಲಿದೆ. ಜಂಕ್ಷನ್‌ನಲ್ಲೆ ಜನರಿಗೆ ಅನುಕೂಲವಾಗಲೆಂದು ಶೌಚಾಲಯ ತೆರೆಯಲು ಫ‌ಂಡ್‌ ಮೀಸಲಿರಿಸಲಾಗಿದೆ. ಇತರ ಸೌಕರ್ಯ ಕಲ್ಪಿಸಲು ಖಾಸಗಿ ಜಾಗದ ಸಮಸ್ಯೆಯೂ ಇದೆ.
-ಎನ್‌. ವಿಜಯಕುಮಾರ ಜೈನ್‌, ಉಪಾಧ್ಯಕ್ಷ , ಗ್ರಾ.ಪಂ. ಈದು

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.