ಸಮಸ್ಯೆಗಳ ಆಗರ ಬೆಳ್ಮಣ್‌ ಇಟ್ಟಮೇರಿ ಅಂಗನವಾಡಿ


Team Udayavani, Jun 25, 2019, 5:44 AM IST

anganavadi

ಬೆಳ್ಮಣ್‌: ಇಲ್ಲಿನ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಇಟ್ಟಮೇರಿ ಅಂಗನವಾಡಿಯ ಶೌಚಾಲಯದ ಪೈಪ್‌ಲೈನ್‌ ಸಂಪರ್ಕ 2 ವರ್ಷಗಳಿಂದ ತೆರೆದ ಸ್ಥಿತಿಯಲ್ಲಿದ್ದು ಪುಟಾಣಿಗಳ ಜತೆ ಅಂಗನವಾಡಿ ಕಾರ್ಯಕರ್ತೆಯರು ದಿನ ನಿತ್ಯ ನರಕ ಯಾತನೆ ಅನುಭವಿಸುತ್ತಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆ ಈ ಆಂಗನವಾಡಿಯ ತ್ಯಾಜ್ಯ ಗುಂಡಿಯ ಪೈಪ್‌ಲೈನ್‌ ಸಂಪರ್ಕ ತೆರೆದ ಸ್ಥಿತಿಯಲ್ಲಿದ್ದ ಬಗ್ಗೆ ಬೆಳ್ಮಣ್‌ ಗ್ರಾಮ ಪಂಚಾಯತ್‌ಗೆ ಮನವಿ ನೀಡಿದ್ದರೂ ಈ ವರೆಗೂ ಯಾವುದೇ ಜನಪ್ರತಿನಿಧಿ ಅಥವಾ ಅಧಿಕಾರಿಗಳು ಇತ್ತ ಸುಳಿದಿಲ್ಲ. ಸ್ವಚ್ಛ ಭಾರತದ ಕೂಗು ದೇಶಾದ್ಯಂತ ಬಲವಾಗಿದ್ದರೂ ಇಲ್ಲಿ ಮಾತ್ರ ಕ್ಷೀಣಿಸಿರುವ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಯುವ ಸಂಘಟನೆ ದುರಸ್ತಿ ಮಾಡಿತ್ತು

ಕಳೆದ 6 ತಿಂಗಳ ಹಿಂದೆ ಇಲ್ಲಿನ ಯುವಕ ಮಂಡಲ ಈ ಶೌಚದಾಲಯದ ತ್ಯಾಜ್ಯ ಗುಂಡಿಯ ತೆರೆದ ಪೈಪ್‌ಲೈನನನ್ನು ಮುಚ್ಚಿ ಒಂದಿಷ್ಟು ಮುಕ್ತಿ ನೀಡಿದ್ದರೂ ಮತ್ತೆ ಗುಂಡಿ ತೆರೆದುಕೊಂಡು ದುರ್ನಾತ ಬೀರುತ್ತಿದೆ. ಇದರಿಂದಾಗಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ಪುಟಾಣಿಗಳು ಸಂಕಷ್ಟ ಪಡುವಂತಾಗಿದೆ. ಸ್ಥಳೀಯಾಡಳಿತ ನಿದ್ರಾವಸ್ಥೆಯಲ್ಲಿದ್ದು ಶೀಘ್ರ ದುರಸ್ಥಿಗೆ ಮುಂದಾಗ ಬೇಕೆಂಬುದು ಹೆತ್ತವರ ಆಗ್ರಹ.

ಬೆಂಕಿ ಉಗುಳುವ ಪರಿವರ್ತಕ

ಅಂಗನವಾಡಿ ಪಕ್ಕದಲ್ಲೇ ಇರುವ ವಿದ್ಯುತ್‌ ಪರಿವರ್ತಕ (ಟಿ.ಸಿ) ಸದಾ ಬೆಂಕಿ ಉಗುಳುತ್ತಿದ್ದು ಇನ್ನಷ್ಟು ಅಪಾಯಕ್ಕೆ ಎಡೆ ಮಾಡಿದೆ. ಇಲ್ಲಿ ಬೇಸಗೆಯಲ್ಲಿ ಹಲವು ಬಾರಿ ಬೆಂಕಿ ಆವರಿಸಿದ್ದೂ ಇದೆ. ಬೆಳ್ಮಣ್‌ ಮೆಸ್ಕಾಂ ಸಿಬಂದಿ ಈ ಬಗ್ಗೆ ಗಮನ ಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕಟ್ಟಡದ ಮೇಲೆ ಮರದ ಗೆಲ್ಲು

ಅಂಗನವಾಡಿ ಕಟ್ಟಡದ ಮೇಲೆ ಬಾಗಿರುವ ಮರದ ಗೆಲ್ಲುಗಳು ಬೀಳುವ ಸ್ಥಿತಿಯಲ್ಲಿವೆ. ಗಾಳಿ ಮಳೆಗೆ ಇವು ಮುರಿದು ಬೀಳಬಹುದು ಎಂಬ ಆತಂಕ ಹೆತ್ತವರು ಮತ್ತು ಅಂಗನವಾಡಿ ಕಾರ್ಯಕರ್ತೆ ಯರನ್ನು ಕಾಡುತ್ತಿದೆ.

ಕೂಡಲೇ ರಿಪೇರಿ

ಈ ಅಂಗನವಾಡಿನ ಕಟ್ಟಡದ ಜಾಗದ ಬಗ್ಗೆ ಗೊಂದಲ ಇದೆ. ಆಂಗನವಾಡಿ ಇಂದ ಯಾವುದೇ ಮನವಿ ಬಂದಿಲ್ಲ. ಶೌಚಾಲಯದ ತ್ಯಾಜ್ಯ ಗುಂಡಿಯ ಬಳಿ ಮರದ ಬೇರು ಬಂದ ಕಾರಣ ಪೈಪ್‌ಲೈನ್‌ ತೆರೆಯಲ್ಪಟ್ಟಿದೆ. ಕೂಡಲೇ ರಿಪೇರಿ ಮಾಡಲಾಗುವುದು.
– ವಾರಿಜಾ, ಬೆಳ್ಮಣ್‌ ಗ್ರಾ.ಪಂ. ಅಧ್ಯಕ್ಷೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.