ಬಾರ್ ಬಂದ್ ಮಾಡುವ ವರೆಗೂ ಪ್ರತಿಭಟನೆ ನಿಲ್ಲದು
Team Udayavani, Aug 18, 2017, 7:50 AM IST
ಮರವಂತೆ (ಉಪ್ಪುಂದ): ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗೂರಿನ ಹೆದ್ದಾರಿ ಬದಿಯಲ್ಲಿದ್ದ ಬಾರ್ ಎಂಡ್ ರೆಸ್ಟೋರಂಟ್ನ್ನು ನಾಗೂರು – ಕೊಡೇರಿ ರಸ್ತೆಯ ನಿವೇಶನಕ್ಕೆ ಸ್ಥಳಾಂತರಿಸಿರುವುದನ್ನು ವಿರೋಧಿಸಿ ಗಂಗೆಬೈಲು,
ಕೊಡೇರಿ, ಆದ್ರಗೋಳಿ, ನಾಗೂರು ಪರಿಸರದ ಸ್ಥಳೀಯರ ಪ್ರತಿಭಟನೆ ಗುರುವಾರವು ಮುಂದುವರಿಯಿತು.
ಮಹಿಳೆಯರ ಸುರಕ್ಷತೆಗೆ ಆತಂಕ
ಈ ಸ್ಥಳದಲ್ಲಿ ಬಾರ್ ತೆರೆಯಲು ಅವಕಾಶ ನೀಡಿರುವುದರಿಂದ ರಸ್ತೆಯಲ್ಲಿ ಸಂಚರಿಸುವ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಸಮಸ್ಯೆ ಗಳಾಗುತ್ತವೆ. ಪರಿಸರದಲ್ಲಿ ಇರುವ ದೇವಸ್ಥಾನ, ಮನೆಗಳ ಮೇಲೆ ಇದರಿಂದ ದುಷ್ಪರಿಣಾಮ ಬೀರುತ್ತದೆ, ಅಲ್ಲದೇ ರಸ್ತೆಯಲ್ಲಿ ಸಂಚರಿಸುವ ಮಹಿಳೆಯರ ಸುರಕ್ಷತೆಗೆ ಆತಂಕ ಎದುರಾಗಿದೆ ಎಂದು ಮಹಿಳೆಯರು ಅಧಿಕಾರಿಗಳಲ್ಲಿ ಅಳಲನ್ನು ತೋಡಿಕೊಂಡರು.
ಪ್ರತಿಭಟನೆ ನಿಲ್ಲದು
ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುವ ಕಾರಣದಿಂದಾಗಿ ಈ ಹಿಂದೆ ಗ್ರಾಮಸ್ಥರು ಜಿಲ್ಲಾ ಅಬಕಾರಿ ಇಲಾಖೆಗಳ ಮುಂದೆ ಪ್ರತಿಭಟನೆ ನಡೆಸಿ ಮನವಿಯನ್ನು ಸಲ್ಲಿಸಿದ್ದರು. ಅಧಿಕಾರಿಗಳ ಬಳಿ ತಮ್ಮ ನೋವನ್ನು ಹೇಳಿಕೊಂಡಿದ್ದರು ಸಹ ಬಾರ್ ತೆರೆಯಲು ಪರವಾನಿಗೆ ನೀಡುವ ಮೂಲಕ ಸಾರ್ವಜನಿಕರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿರುವ ನಾಗರಿಕರು ಬಾರ್ ಬಂದ್ ಮಾಡುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ತಿಳಿಸಿದರು.
ಎಸಿ ಶಿಲ್ಪಾನಾಗ್ ಭೇಟಿ
ಬಾರ್ ಸ್ಥಳಾಂತರದಿಂದ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಮನಗಂಡ ಗ್ರಾಮಸ್ಥರು ಈ ಮೊದಲೇ ಬಾರ್ ತೆರೆಯುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಾ ಬಂದಿದರು ಸಹ ಸಂಬಂಧಪಟ್ಟ ಇಲಾಖೆಯವರು ಪರವಾನಿಗೆ ನೀಡಿರುವುದರಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು ಕೊಡೇರಿ ರಸ್ತೆಯ ಹಾಡಿಸ್ಥಳ ಎಂಬಲ್ಲಿ ಸೇರಿ, ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತ ನೂರಾರು ಪುರುಷರು ಮತ್ತು ಮಹಿಳೆಯರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾನಾಗ್ ಭೇಟಿ ನೀಡಿ ಬಾರ್ನ ಕುರಿತು ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿ ಈ ಕುರಿತು ವರದಿಯನ್ನು ಜಿಲ್ಲಾಧಿಕಾರಿ ಅವರಿಗೆ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ