ಶಾಲಾ ಸಂಸತ್ತು, ಯಕ್ಷಗಾನ ತರಗತಿ ಉದ್ಘಾಟನೆ
Team Udayavani, Jul 11, 2017, 1:10 AM IST
ಬೆಳ್ಮಣ್: ವಿದ್ಯಾರ್ಥಿಯಾದವ ಜೀವನದಲ್ಲಿ ಅನೇಕ ವೈಶಿಷ್ಟé ಹಾಗೂ ಗುಣಗಳನ್ನು ತುಂಬಿಕೊಂಡು ಮುಂದೆ ನಿಷ್ಠಾವಂತ ನಾಯಕನಾಗಿ ಮೂಡಿ ಬರಬೇಕು ಎಂದು ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.
ಅವರು ಶನಿವಾರ ಬೆಳ್ಮಣ್ ಶ್ರೀ ಲಕ್ಷ್ಮೀಜನಾರ್ದನ ಇಂಟರ್ ನ್ಯಾಶನಲ್ ಸ್ಕೂಲ್ನಲ್ಲಿ 2017-18ನೇ ಶೆ„ಕ್ಷಣಿಕ ವರ್ಷದ ಶಾಲಾ ಸಂಸತ್ತು ಹಾಗೂ ಯಕ್ಷಗಾನ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು.
ನಾಯಕತ್ವ ತಾನಾಗಿ ಬರುವುದಿಲ್ಲ ಬದಲಾಗಿ ತೊಡಗಿಸಿಕೊಳ್ಳುವಿಕೆಯಿಂದ ಬರುತ್ತದೆ. ಸಮಾಜದಲ್ಲಿ ವಿಪುಲ ಅವಕಾಶಗಳಿವೆ. ಆಯಾಯ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ,ಶಾಲೆಯ ಸಂಚಾಲಕ ಡಾ| ಪಿ.ಕೆ. ಶೆಟ್ಟಿ ಮಾತನಾಡಿ, ಪ್ರಸ್ತುತ ಸಮಾಜಕ್ಕೆ ನಿಷ್ಠಾವಂತ, ಪ್ರಾಮಾಣಿಕ ನಾಯಕರ ಆವಶ್ಯಕತೆ ಇದೆ. ತಾವೆಲ್ಲರೂ ಅಂತಹ ಉತ್ತಮ ನಾಯಕರಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಗುಣಗಳನ್ನು ರೂಢಿಸಿಕೊಂಡರೆ ಮುಂದೆ ಅತ್ಯುತ್ತಮ ನಾಯಕರಾಗುವುದರಲ್ಲಿ ಸಂಶಯವಿಲ್ಲ ಎಂದರು.
ವಿದ್ಯಾರ್ಥಿ ನಾಯಕಿ ಜೊಸ್ವಿಟ, ಉಪನಾಯಕಿ ಸೃಷ್ಟಿ ಸಹಿತ ವಿವಿಧ ವಿದ್ಯಾರ್ಥಿಗಳು ಪ್ರಮಾಣ ವಚನ ಸ್ವೀಕರಿಸಿದರು.
ಶಾಲಾ ಪ್ರಾಂಶುಪಾಲ ಶ್ರೀ ಭುಜಂಗ ಪಿ.ಶೆಟ್ಟಿ ಸ್ವಾಗತಿಸಿ ಪ್ರಮಾಣ ವಚನ ಬೋಧಿಸಿದರು. ವಿಶ್ವಸ್ತ ಮಂಡಳಿಯ ಸದಸ್ಯ ಶಶಿಧರ್ ಶೆಟ್ಟಿ, ಶ್ರೀ ಲಕ್ಷಿ$¾àಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ತುಕರಾಮ್ ಶೆಟ್ಟಿ, ನಿವೃತ್ತ ಶಿಕ್ಷಕ ಜಯಂತ್ರಾವ್, ಯಕ್ಷಗಾನ ಗುರುಗಳಾದ ಮಹಾವೀರ ಪಾಂಡಿ ಕಾಂತಾವರ ಉಪಸ್ಥಿತರಿದ್ದರು.
ಮಿಥಾಲಿ ಹೆಗ್ಡೆ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಥಮ್ ವಂದಿಸಿ ದರು.ಬಳಿಕ ವೈವಿಧ್ಯ ಮನೋರಂಜನ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಂದ ಮೂಡಿ ಬಂದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
MUST WATCH
ಹೊಸ ಸೇರ್ಪಡೆ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ