ಶಾಲೆ, ದೇವಾಲಯ ಗ್ರಾಮದ ಪರಿಪೂರ್ಣತೆಯ ದ್ಯೋತಕ


Team Udayavani, Apr 28, 2018, 8:00 AM IST

2704Kpe1.jpg

ಕಾಪು: ಮನುಷ್ಯನ ತಲೆ ಮತ್ತು  ಹೃದಯ ಎರಡೂ ಸರಿಯಾಗಿದ್ದರೆ ಅದು ಪರಿಪೂರ್ಣತೆಯ ಲಕ್ಷಣ. ಯಾವುದಾದರೂ ಒಂದು ಸರಿಯಿಲ್ಲದಿದ್ದರೂ ಆಗ ಜೀವನವೇ ಅಸ್ತವ್ಯಸ್ತವಾಗುತ್ತದೆ. ಅದೇ ರೀತಿಯಲ್ಲಿ ಒಂದು ಗ್ರಾಮ ಆರೋಗ್ಯಪೂರ್ಣವಾಗಿ ಪ್ರಗತಿ ಸಾಧಿಸಬೇಕಾದರೆ ಗ್ರಾಮದ ಶಾಲೆ ಮತ್ತು ದೇವಸ್ಥಾನ ಗಳು ಪ್ರಮುಖ ಪಾತ್ರ ವಹಿಸುತ್ತವೆ. ಶಾಲೆ ಗ್ರಾಮದ ಶಿರವಾಗಿದ್ದರೆ, ದೇವಾಲಯ ಹೃದಯವಿದ್ದಂತೆ. ವಿದ್ಯಾಲಯ ಮತ್ತು ದೇವಾಲಯಗಳು ಗ್ರಾಮದ ಪರಿಪೂರ್ಣತೆಯ ದ್ಯೋತಕಗಳಾಗಿವೆ ಎಂದು ಉಡುಪಿ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಹೇಳಿದರು.

ಉಂಡಾರು ಶ್ರೀ ವಿಷ್ಣುಮೂರ್ತಿ ಸನ್ನಿಧಿಯಲ್ಲಿ ಜರಗಿದ ನವೀಕೃತ ದೇವಾಲಯ ಸಮರ್ಪಣೆ, ಬಿಂಬ ಪ್ರತಿಷ್ಠಾಪನೆೆ, ಬ್ರಹ್ಮಕಲಶ ಮಹೋತ್ಸವ ಹಾಗೂ ಮನ್ಮಹಾರಥೋತ್ಸವದ ಪ್ರಯುಕ್ತ ಜರಗಿದ ಧಾರ್ಮಿಕ ಸಭೆಯ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಗ್ರಾಮಸ್ಥರ ಸಹಕಾರ ಅವಿಸ್ಮರಣೀಯ
ಇನ್ನಂಜೆ ಗ್ರಾಮದಲ್ಲಿ ಸೋದೆ ಮಠದ ಮೂಲಕ ಸ್ಥಾಪನೆಗೊಂಡ ಶಾಲೆ ಹಾಗೂ ಸೋದೆ ಮಠದ ಆಡಳಿತ ದಲ್ಲಿರುವ ದೇವಾಲಯ ಎರಡೂ ಪ್ರಸಿದ್ಧಿಯಾಗಿದೆ. ದೇವಾಲಯ ಸರ್ವ ಸುಂದರವಾಗಿ ಮೂಡಿ ಬರುವಲ್ಲಿ  ಗ್ರಾಮಸ್ಥರು ನಿರೀಕ್ಷೆಗೂ ಮೀರಿ ನೀಡಿದ ಸಹಕಾರ ಅವಿಸ್ಮರಣೀಯವಾಗಿದೆ. ಮುಂದೆ ವಿದ್ಯಾಲಯದ ಪುನಶ್ಚೇತನದಲ್ಲಿಯೂ ಗ್ರಾಮಸ್ಥರ ಪರಿಪೂರ್ಣ ಸಹಕಾರ ಅತ್ಯಗತ್ಯವಾಗಿ ದೊರಕಬೇಕಿದೆ ಎಂದರು.

ಸಂತರು ನಾಡಿಗೆ ಬಂದರೆ ಊರು ಪಾವನ
ಧಾರ್ಮಿಕ ಉಪನ್ಯಾಸ ನೀಡಿದ ವಿದ್ವಾನ್‌ ವೆಂಕಟೇಶ ಕುಲಕರ್ಣಿ ಮಾತನಾಡಿ, ಆಚಾರ್ಯ ಮಧ್ವರು ಮತ್ತು ವಾದಿರಾಜರು ಕರಾವಳಿ ಮಾತ್ರವಲ್ಲದೇ ದೇಶದ ವಿವಿಧ ಭಾಗಗಳಲ್ಲೂ ನಡೆಸಿರುವ ಪವಾಡಗಳ ಘಟನೆಗಳನ್ನು ವಿವರಿಸಿದರು. ಉಂಡಾರು ವಿಷ್ಣುಮೂರ್ತಿ ಸನ್ನಿಧಾನವು ವಿಶೇಷ  ಸಾಧನಾ ಕ್ಷೇತ್ರವಾಗಿದ್ದು, ಸಂತರು ನಾಡಿಗೆ ಬಂದರೆ ಊರು ಪಾವನವಾಗುತ್ತದೆ ಎನ್ನುವುದಕ್ಕೆ ಉಂಡಾರು ಗ್ರಾಮವೇ ಉದಾಹರಣೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಶಿಕ್ಷಕ ಬಿ. ಪುಂಡಲೀಕ ಮರಾಠೆ ಮಾತನಾಡಿ, ಸೋದೆ ಶ್ರೀಗಳ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಊರವರ ಸಕ್ರಿಯ ಸೇವೆಯಿಂದಾಗಿ ವಿಷ್ಣುಮೂರ್ತಿ ದೇಗುಲವು ಆಕರ್ಷಕವಾಗಿ ಪುನಃ ನಿರ್ಮಾಣವಾಗಿದೆ. ಭವಿಷ್ಯದಲ್ಲಿ ಈ ತಾಣವು ಭವ್ಯ ಯಾತ್ರಾ ಕ್ಷೇತ್ರವಾಗಿ ಮೂಡಿಬರುವ ಎಲ್ಲ ಲಕ್ಷಣಗಳಿವೆ ಎಂದರು.

ಗ್ರಾಮಸ್ಥರಿಂದ ಸಮ್ಮಾನ
ಉಂಡಾರು ದೇಗುಲದ ಜೀರ್ಣೋದ್ಧಾರ ಕಾರ್ಯದಲ್ಲಿ ವಿಶೇಷವಾಗಿ ತೊಡಗಿಸಿಕೊಂಡ ಮುಂಬಯಿ ಸಮಿತಿಯ ಚಂದ್ರಹಾಸ ಗುರುಸ್ವಾಮಿಯವರನ್ನು ಗ್ರಾಮಸ್ಥರು ಶ್ರೀಗಳ ಮೂಲಕವಾಗಿ ಅದ್ದೂರಿಯಾಗಿ ಸಮ್ಮಾನಿಸಿ ಗೌರವಿಸಿದರು. ದಾನಿಗಳನ್ನು ಜೀರ್ಣೋದ್ಧಾರ ಸಮಿತಿ ಮತ್ತು ದೇಗುಲದ ವತಿಯಿಂದ ಸಮ್ಮಾನಿಸಲಾಯಿತು.

ಜೀರ್ಣೋದ್ಧಾರ ಸಮಿತಿಯ ದಯಾನಂದ ಶೆಟ್ಟಿ ಮಂಡೇಡಿ, ಸಮಿತಿಯ ಕೋಶಾಧಿಕಾರಿ ವಿ.ಜಿ. ಶೆಟ್ಟಿ, ಸತೀಶ್‌ ಶೆಟ್ಟಿ ಶಂಕರಪುರ ಉಪಸ್ಥಿತರಿದ್ದರು.

ಬಂಟಕಲ್ಲು ರಾಮಕೃಷ್ಣ ಶರ್ಮಾ ಸ್ವಾಗತಿಸಿದರು. ಸಮಿತಿಯ ಕಾರ್ಯದರ್ಶಿ ಯು. ನಂದನ ಕುಮಾರ್‌ ದಾನಿಗಳ ಪಟ್ಟಿ ವಾಚಿಸಿದರು. ನವೀನ್‌ ಅಮೀನ್‌ ಶಂಕರಪುರ ಕಾರ್ಯಕ್ರಮ ನಿರೂಪಿಸಿದರು. ನಿರ್ಮಲಾ ಶೆಟ್ಟಿ ವಂದಿಸಿದರು.

ಪಾಕೆಟ್‌ಮನಿ ದೇವರಿಗೆ ಸಮರ್ಪಿಸಿದ ಬಾಲಕಿ
ಉಂಡಾರು ದೇಗುಲದ ಜೀರ್ಣೋದ್ಧಾರ ಕಾರ್ಯದಲ್ಲಿ ಹಿರಿಯರೊಂದಿಗೆ ಕರಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮನೆಯಲ್ಲಿ ಹಿರಿಯರು ತಿಂಡಿಗಾಗಿ ನೀಡಿದ ಪಾಕೆಟ್‌ಮನಿಯನ್ನು ಸಂಗ್ರಹಿಸಿ ರೂ.1,600/-ನ್ನು ದೇವರ ಕಾರ್ಯಕ್ಕೆ ಸಮರ್ಪಿಸಿದ 4ನೇ ತರಗತಿಯ ವಿದ್ಯಾರ್ಥಿನಿ ಅಂಚೆಪಾಲಕಿ ರೇಖಾ ಶೆಟ್ಟಿ ಮತ್ತು ಕರುಣಾಕರ ಶೆಟ್ಟಿ ದಂಪತಿಯ ಪುತ್ರಿ ವೈಷ್ಣವಿಯ ಸೇವೆಯನ್ನು ಸೋದೆ ಶ್ರೀ ವಿಶೇಷವಾಗಿ ಉಲ್ಲೇಖೀಸಿದರು. ವೈಷ್ಣವಿಯ ಸೇವೆಯನ್ನು ರಾಮಾಯಣದಲ್ಲಿ ಸೇತುವೆ ನಿರ್ಮಾಣ ಕಾರ್ಯದಲ್ಲಿ ವಾನರ ಸೇನೆಯ ನಡುವೆ ಅಳಿಲು ಸಲ್ಲಿಸಿದ ಸೇವೆಗೆ ಹೋಲಿಸಿ, ಈಕೆಯ ದೇವ ಕಾರ್ಯ ಇತರಿಗೆ ಮಾದರಿಯಾಗಿದೆ ಎಂದು ಹರಸಿ ಸಮ್ಮಾನಿಸಿದರು.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.