ಮಾಧ್ಯಮಕ್ಕೆ ವೈಜ್ಞಾನಿಕ ದೃಷ್ಟಿಕೋನ ಅನಿವಾರ್ಯ


Team Udayavani, Feb 8, 2019, 12:30 AM IST

0702gk4.jpg

ಉಡುಪಿ: ಮಾಧ್ಯಮಗಳು ವಿಜ್ಞಾನದ ಬೆಳವಣಿಗೆಗಳತ್ತಲೂ ಗಮನ ಹರಿಸುವುದು ಅನಿವಾರ್ಯ. ಇಲ್ಲವಾದಲ್ಲಿ ಭವಿಷ್ಯದಲ್ಲಿ ಮಾಧ್ಯಮಗಳು ಸಾರ್ವಜನಿಕರಿಂದ ದೂರವಾಗಬಹುದು ಎಂದು ಸ್ವರಾಜ್ಯ ಪತ್ರಿಕೆಯ ಸಲಹಾ ಸಂಪಾದಕ ಹಾಗೂ ಅಂಕಣಕಾರ ಆನಂದ್‌ ರಂಗನಾಥನ್‌ ಹೇಳಿದರು.

ಗುರುವಾರ ಮಣಿಪಾಲ ಸ್ಕೂಲ್‌ ಆಫ್ ಕಮ್ಯುನಿಕೇಷನ್‌ (ಎಸ್‌ಒಸಿ)ನಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ “ಆರ್ಟಿಕಲ್‌ 19′ ಕಾರ್ಯಕ್ರಮದ ಉದ್ಘಾಟನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಉದ್ದೇಶ ಮತ್ತು ವಿಷಯಗಳ ಆಯ್ಕೆ ಸ್ಪಷ್ಟವಾಗಿರಬೇಕು. ಕ್ಷೇತ್ರ ಅಧ್ಯಯನ, ಅಂಕಿ ಅಂಶ, ವೈಜ್ಞಾನಿಕ ದೃಷ್ಟಿಕೋನ, ವಿಜ್ಞಾನ ಕ್ಷೇತ್ರದ ಬೆಳವಣಿಗೆಗಳನ್ನು ಆಧರಿಸಿದ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಬೇಕು ಎಂದು ರಂಗನಾಥನ್‌ ಅವರು ತಿಳಿಸಿದರು.

ಮಾಧ್ಯಮ ಸ್ವತಂತ್ರವಲ್ಲ
ಇದೇ ವೇಳೆ ವಿದ್ಯಾರ್ಥಿಗ ಳೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ರಂಗನಾಥ್‌ ಅವರು, ಭಾರತ ದೇಶದಲ್ಲಿ ಯಾವುದೇ ಮಾಧ್ಯಮ ಕೂಡ ಸ್ವತಂತ್ರವಾಗಿದೆ ಎಂದು ಹೇಳುವುದು ಅಸಾಧ್ಯ. ಸ್ವಾತಂತ್ರ್ಯ ಎಂದರೆ ಕೇವಲ ಕಾರ್ಪೊರೇಟ್‌ ಸಂಸ್ಥೆಗಳು ಮತ್ತು ರಾಜಕೀಯ ಪಕ್ಷಗಳ ನಿಯಂತ್ರಣದಿಂದ ಹೊರ ತಾಗಿರುವುದು ಮಾತ್ರವಲ್ಲ, ಯಾವುದೇ ಒಂದು ಸಿದ್ಧಾಂತಕ್ಕೆ ಕೂಡ ಒಳಗಾಗಿರಬಾರದು. 

ವೀಕ್ಷಕರು, ಓದುಗರು ಬಯಸು
ವುದನ್ನು ನೀಡುತ್ತೇವೆ ಎಂದು ಮಾಧ್ಯಮಗಳು ವಾದ ಮಾಡುತ್ತವೆ. ಆದರೆ ಇದು ತಪ್ಪು. ಮಾಧ್ಯಮ ಒಂದು ವ್ಯವಹಾರ ಮಾತ್ರವಾಗಬಾರದು. ಸಮಾಜಕ್ಕೆ ಉತ್ತಮವಾದುದನ್ನು ನೀಡಬೇಕು. ಸಂವಿಧಾನದ ಕಲಂ 19 ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡುತ್ತದೆಯಾದರೂ ಅದರಲ್ಲಿರುವ ಉಪವಿಧಿಗಳು ತಡೆಯೊಡ್ಡುತ್ತವೆ. ರಾಜಕೀಯ ಇಚ್ಛಾಶಕ್ತಿ ಇದ್ದರೆ ಕಾಯಿದೆ ತಿದ್ದುಪಡಿ ಮಾಡಲು ಸಾಧ್ಯವಿದೆ ಎಂದರು.

ಸತ್ಯ, ಸ್ಪಷ್ಟತೆ ಇರಲಿ
ಅಧ್ಯಕ್ಷತೆ ವಹಿಸಿದ್ದ ಮಾಹೆ ಕುಲಸಚಿವ ಡಾ| ನಾರಾಯಣ ಸಭಾಹಿತ್‌ ಮಾತನಾಡಿ, ಮಾಧ್ಯಮಗಳು ಸತ್ಯವನ್ನು ಹುಡುಕುವ ಪ್ರಯತ್ನ ಮಾಡಬೇಕು. ಸುದ್ದಿಗಳಲ್ಲಿ ಸ್ಪಷ್ಟತೆ ಇರಬೇಕೆಂದು ಜನ ಬಯಸುತ್ತಾರೆ. ತಪ್ಪುಗಳು ಪುನರಾವರ್ತನೆಯಾದರೆ ಮಾಧ್ಯಮಗಳು ಜನರ ವಿಶ್ವಾಸ ಕಳೆದುಕೊಳ್ಳುತ್ತವೆ ಎಂದರು.

ಕಾರ್ಯಕ್ರಮವನ್ನು ಮಣಿಪುರದ ಲೇಖಕ, ಸಿನೆಮಾ ನಿರ್ದೇಶಕ ಬಾಬಿ ವಾಹೆಂಗ್ಬಾಮ್‌ ಉದ್ಘಾಟಿಸಿದರು. ಎಸ್‌ಒಸಿ ನಿರ್ದೇಶಕಿ ಡಾ| ಪದ್ಮಾರಾಣಿ ಸ್ವಾಗತಿಸಿದರು. ಹಿರಾಂಕ್ಷಿ ಕಾರ್ಯಕ್ರಮ ನಿರ್ವಹಿಸಿ, ತಕ್ಷತ್‌ ಪೈ ವಂದಿಸಿದರು. ಮೂರು ದಿನಗಳ ಕಾಲ ನಡೆಯಲಿರುವ “ಆರ್ಟಿಕಲ್‌-19′ ಪ್ರಬಂಧ ಮಂಡನೆ, ಸಾಂಸ್ಕೃತಿಕ ಹಾಗೂ ಸ್ಪರ್ಧಾ ಕಾರ್ಯಕ್ರಮಗಳನ್ನು ಒಳಗೊಂಡಿರುತ್ತದೆ.

ಕ್ಯಾಂಪಸ್‌ನಲ್ಲಿ ರಾಜಕೀಯ ಸಲ್ಲದು
ವಿ.ವಿ.ಗಳ ಕ್ಯಾಂಪಸ್‌ಗಳಲ್ಲಿ ರಾಜಕೀಯ ಪಕ್ಷಗಳ ಯೂತ್‌ ವಿಂಗ್‌ನ್ನು ಶೇ. 83ರಷ್ಟು ಮಂದಿ ವಿದ್ಯಾರ್ಥಿಗಳು ಇಷ್ಟಪಡುವುದಿಲ್ಲ. ಹಾಗಾಗಿ ಕ್ಯಾಂಪಸ್‌ಗಳಲ್ಲಿ ಇಂತಹ ಸಂಘಟನೆಗಳಿಗೆ ಅವಕಾಶ ನೀಡಬಾರದು. ದೇಶದಲ್ಲಿ ಶೇ. 35ರಷ್ಟು ಮಂದಿ ರಾಜಕಾರಣಿಗಳು ಅಪರಾಧ ಹಿನ್ನೆಲೆಯವರು ಎಂದು ರಂಗನಾಥನ್‌ ಹೇಳಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.