ಕರಾವಳಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಳೆ ತೆಗೆಯುವ ಯಂತ್ರಗಳ ಸದ್ದು


Team Udayavani, Jul 10, 2018, 6:00 AM IST

0907tke1-1imp.jpg

ತೆಕ್ಕಟ್ಟೆ :  ಕರಾವಳಿ ಭಾಗದಲ್ಲಿ ಭಾಗಶಃ ನಾಟಿ ಕಾರ್ಯ ಪೂರ್ಣಗೊಂಡಿದ್ದು ಗ್ರಾಮೀಣ ಭಾಗದಲ್ಲಿ ಎದುರಾದ ಕೃಷಿ ಕೂಲಿಕಾರ್ಮಿಕರ ಸಮಸ್ಯೆಯಿಂದಾಗಿ ಮೊದಲ ಬಾರಿಗೆ ಮಾನವ ಶಕ್ತಿಯನ್ನು ಬಳಸದೆ ಯಾಂತ್ರಿಕೃತವಾಗಿ ಕಳೆ ತೆಗೆಯುವ ಯಂತ್ರಗಳು  ಕರಾವಳಿ ಜಿಲ್ಲೆಯಲ್ಲಿ ಸದ್ದು ಮಾಡುತ್ತಿವೆ.

ಗಂಟೆಗೆ 70 ಸೆಂಟ್ಸ್‌ ವಿಸ್ತೀರ್ಣದ ಕಳೆ ತೆಗೆಯುವುದು
ಈ ಕಳೆ ತೆಗೆಯುವ ಯಂತ್ರ ( ಪವರ್‌ ವೀಡರ್‌) ದ ಬೆಲೆ ರೂ.29 ಸಾವಿರ ಮೌಲ್ಯವನ್ನು ಹೊಂದಿದೆ. ಪೆಟ್ರೋಲ್‌ ಚಾಲಿತ ಪವರ್‌ ಮೆಶಿನ್‌ಗಳನ್ನು ಅಳವಡಿಸಲಾಗಿದ್ದು ಪ್ರತಿ ಗಂಟೆಗೆ ಸರಿ ಸುಮಾರು 70 ಸೆಂಟ್ಸ್‌ ವಿಸ್ತೀರ್ಣದ ಕೃಷಿ ಭೂಮಿಯಲ್ಲಿ ಬೆಳೆದಿರುವ ಕಳೆ ತೆಗೆಯ ಬಲ್ಲ ಸಾಮರ್ಥ್ಯವನ್ನು ಹೊಂದಿದೆ. ಸುಮಾರು 9 ಇಂಚು ಅಂತರದಲ್ಲಿ ಸಾಲು ನಾಟಿ ಅಥವಾ ಮುಂಗಾರು ಮಳೆಯ ಆಗಮನಕ್ಕೂ ಮುನ್ನ ಬೀಜ ಬಿತ್ತನೆ ಮಾಡಿರುವ ಕೃಷಿ ಭೂಮಿಗಳಲ್ಲಿ ಸಸಿಗಳ ನಡುವಿನ ಅಂತರದಲ್ಲಿ ಬೆಳೆದಿರುವ ಕಳೆ ಗಿಡಗಳ ಬೇರು ಸಹಿತ ತೆಗೆಯಬಲ್ಲದು .

ಗಂಟೆಗೆ ರೂ.400 ಬಾಡಿಗೆ
ಕರಾವಳಿಯ ಪರಿಸರದ ಹೊಯ್ಗೆ ಕೃಷಿ ಭೂಮಿಗೆ ಉಪಯುಕ್ತವಾಗುವ ರೀತಿಯಲ್ಲಿ ಈ ಪವರ್‌ ವೀಡರ್‌ನ್ನು ಆವಿಷ್ಕರಿಸಲಾಗಿದೆ. ಕೃಷಿ ಭೂಮಿಯ ವಾಸ್ತವ ಸ್ಥಿತಿಯನ್ನು ಅಧ್ಯಯನ ಮಾಡಿ ಅನಂತರ ಯಂತ್ರದ ವೇಗವನ್ನು ನಿರ್ಧರಿಸಿ ಕಳೆ ತೆಗೆಯಲಾಗುವುದು. ಮಾನವ ಶಕ್ತಿಯ ಬಳಕೆ ಕಡಿಮೆಯಾಗುವುದಾದರೂ ಕೂಡಾ ಯಂತ್ರಗಳ ಕಾರ್ಯನಿರ್ವಹಣೆಗೆ ಎರಡು ಮಂದಿ ಅನಿವಾರ್ಯತೆ ಇದೆ ಎನ್ನುವುದು ಭರತ್‌ ಗಾಣಿಗ ಬಾರಿಕೆರೆ ಅವರ ಅಭಿಪ್ರಾಯ.

ಕೃಷಿ ಚಟುವಟಿಕೆಗೆ ಮೂಲವಾಗಿ ಬೇಕಾಗುವ ಗೊಬ್ಬರ, ಸಸಿ(ಅಗೆ), ಉಳುವೆ ಯಂತ್ರ, ನಾಟಿ ಹಾಗೂ ಕಳೆ ತೆಗೆಯುವ ಕಾರ್ಯದ ಸಂಪೂರ್ಣ ಜವಾಬ್ದಾರಿಯನ್ನು ಬಾಡಿಗೆ ಆಧಾರದ ಮೇಲೆ ನಿರ್ವಹಿಸುತ್ತಾರೆ.
ಸಂಪರ್ಕ: ಕಾಳಿದಾಸ್‌ 9448657112

ಕೃಷಿಯಲ್ಲಿ ಹೊಸತನ 
ಕಾಲಕ್ಕೆ ತಕ್ಕಂತೆ ಕೃಷಿ ಪದ್ಧªತಿಯನ್ನು ಮುಂದು ವರಿಸಿಕೊಂಡು ಹೋಗಬೇಕಾದ ಅನಿವಾರ್ಯ ಇದೆ. ಪ್ರಸ್ತುತ ಸಾಲು ನಾಟಿ ಹಾಗೂ ಬಿತ್ತನೆ ಪದ್ಧತಿಯಿಂದಾಗಿ ಅಗೆ (ಸಸಿ) ತೆಳುವಾಗಿ ನೆಡುವುದರಿಂದ ಇಳುವರಿ ಹೆಚ್ಚಾಗುತ್ತಿದೆ. ಆವಿಷ್ಕೃತಗೊಂಡಿರುವ ಈ ಪವರ್‌ ವೀಡರ್‌ ಬೆಲೆ ದುಬಾರಿಯಾಗಿರುವುದರಿಂದ ಗ್ರಾಮೀಣ ರೈತರು ಈ ಯಂತ್ರವನ್ನು ಖರೀದಿಸುವುದು ಕಷ್ಟ ಸಾಧ್ಯ.
– ರಾಮಚಂದ್ರ ಭಟ್‌ ಶಾನಾಡಿ , 
ಹಿರಿಯ ಸಾವಯವ ಕೃಷಿಕರು

35 ಮಂದಿ ತಂಡ
ಕಳೆದ ಎಂಟು ವರ್ಷಗಳಿಂದಲೂ  ಯಾಂತ್ರಿಕ ಕೃಷಿ ಚಟುವಟಿಕೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು, ಕಳೆದ ಒಂದುವರೆ ತಿಂಗಳಿನಿಂದ ಸರಿ ಸುಮಾರು 50 ಎಕರೆಗೂ ಅಧಿಕ ವಿಸ್ತೀರ್ಣದ ಕೃಷಿ ಭೂಮಿ ನಾಟಿ ಕಾರ್ಯವನ್ನು ಮುಗಿಸಿದ್ದೇವೆ. ಅಲ್ಲದೆ 23 ಎಕರೆಗೂ ಅಧಿಕ ವಿಸ್ತೀರ್ಣದ ಕೃಷಿ ಭೂಮಿ ಬಾಡಿಗೆ ಆಧಾರದ ಮೇಲೆ ಪಡೆದುಕೊಂಡು ಸಂಪೂರ್ಣವಾಗಿ ಸುಮಾರು 35 ಮಂದಿ ತಂಡ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ.
ಕಾಳಿದಾಸ್‌ ಸಾಗರ, 
ಯಂತ್ರಗಳ ಮಾಲಕರು 

– ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.