ರಾಜ್ಯ ಸರಕಾರ ಕಣ್ಣು  ,ಕಿವಿ ಕಳೆದು ಕೊಂಡಿದೆ: ಕೋಟ


Team Udayavani, Aug 17, 2017, 7:15 AM IST

1608kota1e.jpg

ಕೋಟ: ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಬೇಕಾದ, ಬಡ ವರ್ಗದವರ ಕಷ್ಟದ ಕುರಿತು ದೃಷ್ಠಿ  ಹರಿಸಬೇಕಾದ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಕಣ್ಣು-ಕಿವಿ ಕಳೆದು ಕೊಂಡು ಕುಳಿತಿದೆ. ಇದರಿಂದಾಗಿ ರಾಜ್ಯದಲ್ಲಿ ಸಮಸ್ಯೆಗಳು ತಾಂಡವವಾಡುತ್ತಿದೆ ಎಂದು ಮಾಜಿ ಸಚಿವ, ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಬಿಜೆಪಿ ಹಿಂದುಳಿದ  ವರ್ಗಗಳ ಮೋರ್ಚಾ ಕುಂದಾಪುರ ವತಿಯಿಂದ 94ಸಿ, 94ಸಿಸಿ, ಅಕ್ರಮ ಸಕ್ರಮ, ಹಕ್ಕು ಪತ್ರ, ಪಡಿತರ ಗೊಂದಲ,  ಅಸಮರ್ಪಕ ಮರಳು ನೀತಿ ಸೇರಿದಂತೆ  ರಾಜ್ಯಸರಕಾರ ಹಾಗೂ ಜಿಲ್ಲಾಡಳಿತದ ಬಡವರ ವಿರೋಧಿ ಧೋರಣೆಯನ್ನು ಖಂಡಿಸಿ ಆ.16ರಂದು ಮಾಬುಕಳದಿಂದ ಕುಂದಾಪುರದ ತನಕ ನಡೆದ ಪಾದಯಾತ್ರೆಯಲ್ಲಿ ಪ್ರಾಸ್ತಾವಿಕ ಮಾತನಾಡಿದರು.

ಹಕ್ಕು ಪತ್ರಕ್ಕಾಗಿ ಉಡುಪಿ ಜಿಲ್ಲೆಯಲ್ಲಿ 32 ಸಾವಿರ ಮಂದಿ ಅರ್ಜಿಸಲ್ಲಿಸಿ ಕಾಯುತ್ತಿದ್ದಾರೆ. ಕುಂದಾಪುರದಲ್ಲಿ 12ಸಾವಿರ ಮಂದಿ ಅರ್ಜಿ ಹಾಕಿದ್ದಾರೆ. ಆದರೆ ಇದುವರೆಗೆ ಇವರಿಗೆ ಹಕ್ಕುಪತ್ರವನ್ನು ನೀಡುವ ಕೆಲಸ ಸರಕಾರ ಮಾಡಿಲ್ಲ. ಪಡಿತರ ಚೀಟಿಯ ಸಮಸ್ಯೆ ದೊಡ್ಡಮಟ್ಟದಲ್ಲಿ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್‌ ಅವರು ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. 

ಜನಸಾಮಾನ್ಯರು ಪಡಿತರ ಚೀಟಿ ನೀಡಿ ಎಂದು ಕೇಳಿದರೆ ಸಚಿವರು ಪಡಿತರ ಅಂಗಡಿಗಳಲ್ಲಿ  ವಿಮಾನ ಟಿಕೇಟ್‌ ನೀಡುವುದಾಗಿ ಮಾತನಾಡುತ್ತಾರೆ. ನಿರಂತರವಾಗಿ ಹಿಂದೂ ಯುವಕರ ಹತ್ಯೆಯಾಗುತ್ತಿದೆ. ಮರಳು ಅಭಾವದಿಂದ ಕಾರ್ಮಿಕರು ತತ್ತರಗೊಂಡಿದ್ದಾರೆ.  ಸರಕಾರದ ಇಂಥ ಹತ್ತು ಹಲವು ಸಮಸ್ಯೆಗಳು° ಮುಂದಿಟ್ಟುಕೊಂಡು ಇಂದು ಪಾದಯಾತ್ರೆ ನಡೆಯುತ್ತಿದೆ ಎಂದು ಪೂಜಾರಿಯವರು ತಿಳಿಸಿದರು.

ಜನರಿಗೆ ಮರಳು ಚಿಂತೆ; ಸರಕಾರಕ್ಕೆ ಗುತ್ತಿಗೆ ಚಿಂತೆ : ಕಳೆದ ಒಂದು ವರ್ಷದಿಂದ ಕಾರ್ಮಿಕರು ಮರಳು ಸಮಸ್ಯೆಯಿಂದ ಕೆಲಸವಿಲ್ಲದೆ ತತ್ತರಿಸುತ್ತಿದ್ದಾರೆ. ಕಾನೂನು ತಿದ್ದುಪಡಿಯ ಮೂಲಕ ಮರಳು ಸಮಸ್ಯೆ ಬಗೆಹರಿಸುವ ಎಲ್ಲ ಅವಕಾಶಗಳಿದ್ದರು ಸರಕಾರ ಈ ಕುರಿತು ಯೋಚಿಸಿಲ್ಲ.  ಇದೀಗ ವಿದೇಶದಿಂದ ಮರಳು ತರಿಸುವುದಾಗಿ ಹೇಳುತ್ತಿದ್ದಾರೆ. ಸಮಸ್ಯೆ ಬಗೆಹರಿಸಲು ಅವಕಾಶವಿದ್ದರು ಯಾರಿಗೆ ಮರಳು ಗುತ್ತಿಗೆಯನ್ನು ನೀಡಬೇಕು ಎನ್ನುವ ಚಿಂತೆಯಲ್ಲಿಯೇ ಸರಕಾರ ಮುಳುಗಿದೆ ಎಂದು ಮಾಜಿ ಸಚಿವ, ಮಾಜಿ ಸಂಸದ ಕೆ. ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಪಾದಯಾತ್ರೆಗೆ ಚಾಲನೆ ನೀಡಿದರು.
ಅನಂತರ  ಮಾಬುಕಳ, ಸಾಸ್ತಾನ, ಕೋಟ, ತೆಕ್ಕಟ್ಟೆ,  ಕೋಟೇಶ್ವರದಲ್ಲಿ ಜನಜಾಗೃತಿ ಸಭೆ ನಡೆದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತವಾಯಿತು ಹಾಗೂ ಕುಂದಾಪುರದಲ್ಲಿ  ಪಾದಯಾತ್ರೆ ಸಮಾರೋಪ ಜರಗಿತು.

ಪಾದಯಾತ್ರೆಯ ಸಂದರ್ಭ  ಬಿಜೆಪಿ  ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ಕಿರಣ್‌ ಕುಮಾರ್‌, ಬಿಜೆಪಿ ಕುಂದಾಪುರ ಕ್ಷೇತ್ರಾಧ್ಯಕ್ಷ ಕಾಡೂರು ಸುರೇಶ ಶೆಟ್ಟಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಬಿಜೆಪಿ ಹಿಂದುಳಿದ ಮೋರ್ಚಾ ಕುಂದಾಪುರ ಕ್ಷೇತ್ರಾಧ್ಯಕ್ಷ ರವೀಂದ್ರ ತಿಂಗಳಾಯ ಪಡುಕರೆ,  ಬಿಜೆಪಿ ಮುಖಂಡರಾದ ಯಶಪಾಲ್‌ ಸುವರ್ಣ, ಬೈಕಾಡಿ ಸುಪ್ರಸಾದ್‌ ಶೆಟ್ಟಿ,  ಶ್ಯಾಮಲ ಕುಂದರ್‌, ಗೀತಾಂಜಲಿ ಸುವರ್ಣ, ನಯನ ಗಣೇಶ್‌, ಶಂಕರ್‌ ಪೂಜಾರಿ, ಕಿಶೋರ್‌ ಕುಮಾರ್‌ ಕುಂದಾಪುರ, ರಾಜೇಶ ಕಾವೇರಿ, ಜಿ.ಪಂ.ಸದಸ್ಯ ಕೋಟ ರಾಘವೇಂದ್ರ ಕಾಂಚನ್‌, ಶ್ರೀಲತಾ ಸುರೇಶ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ಗಣಪತಿ ಶ್ರೀಯಾನ್‌, ಶ್ಯಾಮ್‌ ಸುಂದರ್‌ ನಾೖರಿ, ವಿಟuಲ ಪೂಜಾರಿ ಸಾಸ್ತಾನ, ತಾ.ಪಂ.ಸದಸ್ಯ ಜ್ಯೋತಿ ಉದಯ್‌ ಪೂಜಾರಿ, ಮಹೇಶ್‌ ಪೂಜಾರಿ, ಶಂಕರ್‌ ಅಂಕದಕಟ್ಟೆ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.