ಪಲಿಮಾರು ಮಠದ ಉತ್ತರಾಧಿಕಾರಿಯಾಗಿ ಶ್ರೀ ವಿದ್ಯಾರಾಜೇಶ್ವರ ತೀರ್ಥರಿಗೆ ಪಟ್ಟಾಭಿಷೇಕ
Team Udayavani, May 13, 2019, 3:05 AM IST
ಉಡುಪಿ: ಯೋಗೀಶ್ವರನಾದ ಶ್ರೀಕೃಷ್ಣನ ಆರಾಧನೆಯಿಂದ ಸರ್ವವೂ ಸಾಧ್ಯವಾಗುತ್ತದೆ ಎಂದು ಪಲಿಮಾರು ಮಠದ 31ನೆ ಯತಿಗಳಾಗಿ ಭಾನುವಾರ ಪಟ್ಟಾಭಿಷಿಕ್ತರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ನುಡಿದರು.
ರಾಜಾಂಗಣದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಶ್ರೀಕೃಷ್ಣ-ರಾಮದೇವರ ಪೂಜೆಯನ್ನು ಮಾಡಬೇಕೆಂಬ ಇಚ್ಛೆ ನನಗೆ ಇತ್ತು. ಹೃಷಿಕೇಶ ತೀರ್ಥರ ಪರಂಪರೆಯನ್ನು ಅಲಂಕರಿಸುವ ಭಾಗ್ಯ ಗುರುಗಳು ಹಾಗೂ ದೇವರ ಅನುಗ್ರಹದಿಂದ ನನಗೆ ಒದಗಿದೆ’ ಎಂದರು.
ಉತ್ತರಾಧಿಕಾರಿಯಲ್ಲ, ಉತ್ತಮಾಧಿಕಾರಿ: ಪೇಜಾವರ ಶ್ರೀ ವಿಶ್ವೇಶತೀರ್ಥರು ಆಶೀರ್ವಚನ ನೀಡಿ, ನೂತನ ಯತಿಗಳು ಉತ್ತರಾಧಿಕಾರಿಯಾಗಿರದೆ ಉತ್ತಮಾಧಿಕಾರಿಯಾಗುತ್ತಾರೆ. ಮಧ್ವರು ಪ್ರವಚನ ನೀಡುವಾಗ ಶ್ಲೋಕಗಳನ್ನು ಹಾಡಿದ, ಅವರ ಕೃತಿಯನ್ನು ದಾಖಲಿಸಿದ ಪರಂಪರೆಯ ಮೊದಲ ಯತಿ ಶ್ರೀ ಹೃಷಿಕೇಶತೀರ್ಥರು, ಎಲ್ಲರಿಗೂ ಮಂಗಲವಾಗಬೇಕೆಂದು ಮಂಗಲಾಷ್ಟಕವನ್ನು ಬರೆದ ಶ್ರೀ ರಾಜರಾಜೇಶ್ವರ ತೀರ್ಥರು, ಅನೇಕ ಮಠಾಧೀಶರಿಗೆ ಪಾಠ ಹೇಳಿ ರೂಪಿಸಿದ ತಮ್ಮ ಗುರು ಶ್ರೀವಿದ್ಯಾಮಾನ್ಯತೀರ್ಥರು ವಿರಾಜಿಸಿದ ಈ ಪರಂಪರೆಯನ್ನು ನೂತನ ಯತಿಗಳು ಬೆಳಗಲಿ ಎಂದು ಹಾರೈಸಿದರು.
ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥರು ಆಶೀರ್ವಚನ ನೀಡಿ, ಉಪನಿಷತ್ತು ಮಾತೃದೇವೋ ಭವ’ ಎನ್ನುತ್ತದೆ. ವ್ಯಕ್ತಿಗಳನ್ನು ಹೆತ್ತು, ಹೊತ್ತು ನಿರ್ಮಿಸುವವರು ತಾಯಿ. ಇಂದು ತಾಯಂದಿರ ದಿನ. ಗುರು, ಸನ್ಯಾಸಿಯಾದರೂ ಮಾತೆಗೆ ಮಗನೇ. ಗುರುಗಳು ಸಮಾಜವನ್ನು ನಿರ್ಮಿಸುವವರು.
ನೂತನ ಯತಿಗಳಲ್ಲಿ ಹಿಂದಿನ ಎಲ್ಲ ಯತಿಗಳ ಸನ್ನಿಧಾನವಿದ್ದು, ಉನ್ನತ ಸಮಾಜವನ್ನು ನಿರ್ಮಾಣ ಮಾಡಲಿ ಎಂದು ಹಾರೈಸಿದರು. ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಕಾಣಿಯೂರು, ಅದಮಾರು ಕಿರಿಯ, ಪೇಜಾವರ ಕಿರಿಯ, ಸುಬ್ರಹ್ಮಣ್ಯ, ಭೀಮನಕಟ್ಟೆ, ಸೋದೆ ಮಠಾಧೀಶರು ಉಪಸ್ಥಿತರಿದ್ದರು.
ಅಭಿಜಿನ್ ಮುಹೂರ್ತದಲ್ಲಿ ಪಟ್ಟಾಭಿಷೇಕ: ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಧ್ಯಾಹ್ನ 12.20ಕ್ಕೆ ಅಭಿಜಿನ್ ಮುಹೂರ್ತದಲ್ಲಿ ಮಠದ ಉಪಾಸ್ಯಮೂರ್ತಿ, ಸಾಲಿಗ್ರಾಮಗಳನ್ನು ಹರಿವಾಣದಲ್ಲಿರಿಸಿ, ಶಿರದ ಮೇಲಿಂದ ಅಭಿಷೇಕ ಮಾಡುವ ಮೂಲಕ ನೂತನ ಉತ್ತರಾಧಿಕಾರಿಯನ್ನು ನೇಮಿಸಿದರು. ಇದೇ ವೇಳೆ ವೇದ, ಗೀತೆ, ಭಾಗವತಾದಿಗಳ ಪಾರಾಯಣ ನಡೆಯಿತು. ಮಹಿಳೆಯರು ಲಕ್ಷ್ಮೀ ಶೋಭಾನೆ ಪಠಿಸಿದರು. ರಾಜಾಂಗಣದಲ್ಲಿ ಮಂಗಲಾಷ್ಟಕ ಪಠಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?