ಕೆನಡಾದಲ್ಲಿ ಅರಳಿದ ಪ್ರತಿಭೆ ಡಾ| ಆಚಾರ್ಯ


Team Udayavani, Dec 9, 2017, 12:46 PM IST

09-40.jpg

ಉಡುಪಿ: ಕೆನಡಾದ ಒಟ್ಟಾವ ಕಾರ್ಲ್ಟನ್‌ ವಿ.ವಿ. ಎಲೆಕ್ಟ್ರಾನಿಕ್ಸ್‌ ವಿಭಾಗದ ಪ್ರಾಧ್ಯಾಪಕ, ಉಡುಪಿ ತಾಲೂಕು ಹಿರಿಯಡಕ ಬಳಿಯ ಕುದಿ ಗ್ರಾಮದ ಡಾ| ರಾಮಚಂದ್ರ ಆಚಾರ್ಯ ಅವರು ಅಂತಾರಾಷ್ಟ್ರೀಯ ಸ್ತರದ “ಐಎಇಇಇ’ (ಇಂಟರ್‌ನ್ಯಾಶನಲ್‌ ಅಸೋಸಿಯೇಶನ್‌ ಆಫ್ ಎಲೆಕ್ಟ್ರಿಕಲ್‌ ಆ್ಯಂಡ್‌ ಎಲೆಕ್ಟ್ರಾನಿಕ್ಸ್‌ ಎಂಜಿನಿಯರ್) ಎಲೆಕ್ಟ್ರೊ ಮ್ಯಾಗ್ನೆಟಿಕ್‌ ಕಂಪಾಟಿಬಿಲಿಟಿ ಸೊಸೈಟಿಯ ಡಿಸ್ಟಿಂಗ್ವಿಶ್‌x ಲೆಕ್ಚರರ್‌ ಪ್ರೋಗ್ರಾಮ್‌ನ ಪ್ರತಿಷ್ಠಿತ ಅಧ್ಯಕ್ಷ ಹುದ್ದೆಗೆ ಆಯ್ಕೆಯಾಗಿದ್ದಾರೆ. 

ಡಾ| ಆಚಾರ್ಯರು ಐಎಇಇಇಯ ಸರ್ಕ್ನೂಟ್ಸ್‌ ಆ್ಯಂಡ್‌ ಸಿಸ್ಟಮ್ಸ್‌ ಸೊಸೈಟಿ, ಎಲೆಕ್ಟ್ರೊ ಮ್ಯಾಗ್ನೆಟಿಕ್‌ ಕಂಪಾಟಿಬಿಲಿಟಿ ಸೊಸೈಟಿ ಮತ್ತು ಎಲೆಕ್ಟ್ರಾನಿಕ್‌ ಡಿವೈಸಸ್‌ ಸೊಸೈಟಿ- ಈ ಮೂರು ಸೊಸೈಟಿಗಳ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರು. ಎಂಜಿನಿಯರ್ ಇನ್‌ಸ್ಟಿಟ್ಯೂಟ್‌ ಆಫ್ ಕೆನಡಾ ಮತ್ತು ಐಎಇಇಇಯ ಫೆಲೋಶಿಪ್‌ ಗೌರವ ಹೊಂದಿರುವ ಇವರು, ಈ ಸೊಸೈಟಿಗಳ ಸ್ಥಳೀಯ ವಿಭಾಗಗಳ ಆಮಂತ್ರಣದ ಮೇರೆಗೆ 30ಕ್ಕೂ ಹೆಚ್ಚು ದೇಶಗಳಲ್ಲಿ ಆಧುನಿಕ ಕಂಪ್ಯೂಟರ್‌ ಚಿಪ್‌ ವಿನ್ಯಾಸದ ಕುರಿತು ವಿಶೇಷ ಉಪನ್ಯಾಸಗಳನ್ನು ನೀಡಿದ್ದಾರೆ. 

ಶೈಕ್ಷಣಿಕ ಸಾಧನೆಯಲ್ಲದೆ ಉಭಯ ರಾಷ್ಟ್ರಗಳ ವ್ಯಾಪಾರ ವ್ಯವಹಾರ ವೃದ್ಧಿಗಾಗಿ ಕೆನಡಾ – ಇಂಡಿಯ ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಸ್ಥಾಪನೆಯಲ್ಲಿಯೂ ಡಾ| ಆಚಾರ್ಯರು ಮಹತ್ವದ ಪಾತ್ರ ವಹಿಸಿದ್ದಾರೆ. ಇದು ವಿಜ್ಞಾನ, ತಂತ್ರಜ್ಞಾನ, ವ್ಯಾಪಾರ ಮತ್ತು ನೀತಿ ಕುರಿತು ಕಾರ್ಯನಿರ್ವಹಿಸಲಿದೆ. 2014ರಲ್ಲಿ ಕಾರ್ಲ್ಟನ್‌ ವಿ.ವಿ.ಯಲ್ಲಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆ ಸ್ಥಾಪಿಸುವಲ್ಲಿಯೂ ಆಚಾರ್ಯ ಸೇವೆ ಸಲ್ಲಿಸಿದ್ದರು. ಅಂತಾರಾಷ್ಟ್ರೀಯ ಸಂಶೋಧನ ನಿಯತಕಾಲಿಕಗಳಲ್ಲಿ ಇವರ 200ಕ್ಕೂ ಹೆಚ್ಚು ಅಧ್ಯಯನ ಪ್ರಬಂಧಗಳು ಪ್ರಕಟವಾಗಿವೆ.  

ಕವಿಯಾಗಿ ಆಚಾರ್ಯ
ಪ್ರೊ| ಆಚಾರ್ಯ, ಕನ್ನಡ ಕವನಗಳನ್ನೂ ಬರೆಯು ತ್ತಾರೆ. 50ಕ್ಕೂ ಹೆಚ್ಚು ಕವನಗಳನ್ನು ರಚಿಸಿದ್ದು, ಸಂಕಲನ ಹೊರತರುವ ತಯಾರಿಯಲ್ಲಿದ್ದಾರೆ. 

ಉನ್ನತ ಶಿಕ್ಷಣ
ಡಾ| ಆಚಾರ್ಯರು ಪದವಿಯ ಬಳಿಕ ರಾಜಸ್ಥಾನದ ಪಿಲಾನಿಯಲ್ಲಿರುವ ಬಿರ್ಲಾ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯಲ್ಲಿ ಮೈಕ್ರೋ ಎಲೆಕ್ಟ್ರಾನಿಕ್ಸ್‌ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದರು. ಬಳಿಕ ಕೆನಡಾಕ್ಕೆ ತೆರಳಿ, ಹೈ ಫ್ರೀಕ್ವೆನ್ಸಿ ಕಂಪ್ಯೂಟರ್‌ ಚಿಪ್‌ (ಮಾಡೆಲಿಂಗ್‌ ಮತ್ತು ಸಿಮ್ಯುಲೇಶನ್‌) ಕುರಿತು ಪಿ.ಎಚ್‌ಡಿ. ಪದವಿ ಪಡೆದರು. 

ಕನ್ನಡ ಮಾಧ್ಯಮ, ಉಚಿತ ಹಾಸ್ಟೆಲ್‌ ಓದು
ಕುದಿ ಗ್ರಾಮದಲ್ಲಿ ರಾಘವೇಂದ್ರ ಆಚಾರ್ಯ ಮತ್ತು ಜಾಂಬವತಿ ಆಚಾರ್ಯ ದಂಪತಿಗೆ ಜನಿಸಿದ ರಾಮಚಂದ್ರ ಆಚಾರ್ಯರು ಬೊಮ್ಮರಬೆಟ್ಟು ಸರಕಾರಿ ಹಿ.ಪ್ರಾ. ಶಾಲೆ ಮತ್ತು ಹಿರಿಯಡಕ ಸ.ಪ.ಪೂ. ಕಾಲೇಜಿನ ಪ್ರೌಢಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದವರು. ಎಂಜಿಎಂ ಕಾಲೇಜಿನಲ್ಲಿ ಪಿಯು ಓದಿದ ಬಳಿಕ ಬೆಂಗಳೂರು ಆರ್‌ವಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಶನ್‌ ವಿಭಾಗದಲ್ಲಿ ಪದವಿ ಗಳಿಸಿದರು. ಬೆಂಗಳೂರು ವಿ.ವಿ.ಪುರಂನ ರಾಮಕೃಷ್ಣ ಸ್ಟೂಡೆಂಟ್ಸ್‌ ಹೋಮ್‌ ಉಚಿತ ಹಾಸ್ಟೆಲ್‌ನಲ್ಲಿದ್ದುದು ಜೀವನದ ಅನೇಕ ತಿರುವುಗಳಿಗೆ ಕಾರಣವಾಯಿತು ಎನ್ನುತ್ತಾರೆ ಡಾ| ಆಚಾರ್ಯ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.