ಕರಾವಳಿಯಲ್ಲಿ ಮೂರನೇ ಪಕ್ಷಕ್ಕೆ ಗೆಲುವು ಕಷ್ಟ


Team Udayavani, Apr 10, 2018, 6:45 AM IST

Balraj.jpg

1967ರಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದು, ಸಾಕಷ್ಟು ಅನುಭವ ಹೊಂದಿರುವರು ಬಲ್‌ರಾಜ್‌ ರೈ. 1994ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಪರಾಜಿತರಾಗಿದ್ದರು. ಪ್ರಸ್ತುತ ಕಾಂಗ್ರೆಸ್‌ ಪಕ್ಷದ ದ.ಕ. ಜಿಲ್ಲಾ ಉಪಾಧ್ಯಕ್ಷರಾಗಿದ್ದಾರೆ.

ನಿಮ್ಮ ಸೋಲಿಗೆ ಕಾರಣ?
       ಅಂದಿನ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ ಹೆಸರು ದೇಶದಲ್ಲಿ ಜೋರಾಗಿತ್ತು. ಆಗ ಕಾರ್ಕಳದಲ್ಲಿ ಎಂ. ವೀರಪ್ಪ ಮೊಲಿ ಪ್ರಭಾವವೂ ಹೆಚ್ಚಿತ್ತು. ಜತೆಗೆ ಕರಾವಳಿ ಭಾಗದಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಹೊರತುಪಡಿಸಿ ಮೂರನೇ ಪಕ್ಷ ಮತ ಪಡೆಯುವುದು ಕಷ್ಟ. ಕೆಲವೇ ಜನ ಮಾತ್ರ ಮೂರನೇ ಪಕ್ಷದಲ್ಲಿ ಗೆದ್ದಿದ್ದಾರೆ. ಅದೂ ಅವರ ವೈಯಕ್ತಿಕ ವರ್ಚಸ್ಸಿನಿಂದ.

ರಾಜಕೀಯ ವ್ಯವಸ್ಥೆ ಬದಲಾಗಿರುವ ಬಗ್ಗೆ?
       ಅಂದಿನ ರಾಜಕೀಯಕ್ಕೂ ಇಂದಿನ ರಾಜಕೀಯಕ್ಕೂ ಅಜಗಜಾಂತರವಿದೆ. ಅಂದು ವ್ಯಕ್ತಿಗೆ ಮೌಲ್ಯವಿತ್ತು. ಇಂದು ರಾಜಕೀಯ ಮೌಲ್ಯ ಕೂಡ ಕಡಿಮೆಯಾಗಿದೆ. ಈಗ ಏನಿದ್ದರೂ ಹಣದ ಪ್ರಭಾವ ಮತ್ತು ಪಕ್ಷದ ಆಶ್ರಯವೂ ಬೇಕು. ಪ್ರಸ್ತುತ ಒಮ್ಮೆ ರಾಜಕೀಯಕ್ಕಿಳಿದವರು ಜೀವನ ಪರ್ಯಂತ ರಾಜಕೀಯದಲ್ಲೇ ತೊಡಗಿರುತ್ತಾರೆ. ಸಂಘ – ಸಂಸ್ಥೆಗಳಿಗೆ ಹಣ ನೀಡಿ, ಬ್ಯಾನರ್‌ ಹಾಕಿಸಿಕೊಂಡು ಪ್ರಚಾರ ಗಿಟ್ಟಿಸಿಕೊಂಡರೆ ಅವರೇ ನಾಯಕರೆನಿಸಿಕೊಳ್ಳುತ್ತಾರೆ.

ಮುಂದೆ ನೀವು ಸ್ಪರ್ಧಿಸುವ ಸಾಧ್ಯತೆ?
      ಕಾರ್ಕಳದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸುವಂತೆ ಸ್ವತಃ ಸಿದ್ದರಾಮಯ್ಯನವರೇ ಕಳೆದ ಮೂರು ತಿಂಗಳ ಹಿಂದೆ ಹೇಳಿದ್ದರು. ಆದರೆ ಅಲ್ಲಿನ ನಾಯಕರು ಕರೆದರೆ ಮಾತ್ರ ನಾನು ಹೋಗಬಹುದು ಎಂದಿದ್ದೆ. ನಾನೇ ಹೋಗಿ ಸ್ಪರ್ಧಿಸುತ್ತೇನೆ ಎನ್ನುವುದು ಸರಿಯಾಗುವುದಿಲ್ಲ.

ಈ ಬಾರಿಯ ಚುನಾವಣೆ ಬಗ್ಗೆ ?
      ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತದಿಂದ ಗೆಲುವು ಸಾಧಿಸಲಿದೆ. ಸಿದ್ದರಾಮಯ್ಯನವರ ಆಡಳಿತ ಅವಧಿಯಲ್ಲಿ ಜನರಿಗೆ ಬೇಕಾಗುವ ಯೋಜನೆಗಳು ಜಾರಿಯಾಗಿವೆ. ಜನತೆ ಅದನ್ನು ಮೆಚ್ಚಿಕೊಂಡಿದ್ದಾರೆ. ಹಿಂದಿನಿಂದಲೂ ಜನಸಾಮಾನ್ಯರ ಬಗ್ಗೆ ಕಾಳಜಿ ಇಟ್ಟುಕೊಂಡೇ ಬೆಳೆದು ಬಂದವರು ಅವರು. ಅದೇರೀತಿಯಾ ಆಡಳಿತವನ್ನೂ ನೀಡಿದ್ದಾರೆ. ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಿದ್ದಾರೆ. ದೇವರಾಜ ಅರಸು ಅವರ ಅನಂತರ ಉತ್ತಮ ನಾಯಕತ್ವ ನೀಡಿದವರು ಸಿದ್ದರಾಮಯ್ಯ. ಹೀಗಾಗಿ ಮತ್ತೂಮ್ಮೆ ಕಾಂಗ್ರೆಸ್‌ ಬರಲಿದೆ.

ಕಾರ್ಕಳದಲ್ಲಿ  ಪಕ್ಷದ ಗೆಲುವಿನ ಭರವಸೆ ಇದೆಯೇ?
     ಕಾರ್ಕಳದಲ್ಲಿ ಕಾಂಗ್ರೆಸ್‌ ಒಮ್ಮತದಿಂದ ಚುನಾವಣೆ ಎದುರಿಸಿದರೆ ಗೆಲುವು ಸಾಧಿಸುವುದು ಖಚಿತ. ಆಂತರಿಕ ಗೊಂದಲಗಳು ಇದ್ದರೆ ಚುನಾವಣೆ ಎದುರಿಸುವುದು ಸುಲಭವಲ್ಲ. ಎಲ್ಲರೂ ಒಟ್ಟಾಗಿ ಕಾರ್ಯಾಚರಿಸುವ ಅನಿವಾರ್ಯತೆ ಇದೆ.

– ಜಿವೇಂದ್ರ ಶೆಟ್ಟಿ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.