ಸಜ್ಜುಗೊಂಡಿದೆ ಉಡುಪಿ ನರ್ಮ್ ಬಸ್‌ ನಿಲ್ದಾಣ

ಈಡೇರಿಕೆಯತ್ತ ಬಹುಕಾಲದ ಬೇಡಿಕೆ

Team Udayavani, Sep 14, 2019, 5:34 AM IST

Govt-Bus-UD

4 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನರ್ಮ್ ಬಸ್‌ ನಿಲ್ದಾಣ ಕಟ್ಟಡ.

ಉಡುಪಿ: ಉಡುಪಿ ಸಿಟಿ ಬಸ್‌ ತಂಗುದಾಣದ ಸಮೀಪ ನರ್ಮ್ ಬಸ್ಸು ತಂಗುದಾಣ ಶೀಘ್ರದಲ್ಲೇ ಆರಂಭವಾಗಲಿದೆ. ಅಕ್ಟೋಬರ್‌ 2017ರಲ್ಲಿ ಇದರ ಕಾಮಗಾರಿ ಆರಂಭವಾಗಿದ್ದು, ಇದೀಗ ಉದ್ಘಾಟನೆಗೆ ಸಜ್ಜುಗೊಂಡಿದೆ.

4 ಕೋ. ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಈ ಕಟ್ಟಡವು ಸುಮಾರು 41 ಸೆಂಟ್ಸ್‌ ಜಾಗದಲ್ಲಿದ್ದು 3 ಅಂತಸ್ತುಗಳನ್ನು ಒಳಗೊಂಡಿದೆ. ಕೆಳಅಂತಸ್ತಿನಲ್ಲಿ 6,814 ಚದರಡಿ ವಿಸ್ತೀರ್ಣ ಹೊಂದಿದೆ. ಮೇಲಿನ ಅಂತಸ್ತು 5,807 ಚದರಡಿ ವಿಸ್ತೀರ್ಣ ಹೊಂದಿದೆ. ಮೊದಲ ಅಂತಸ್ತು 5,637 ಚದರಡಿ ವಿಸ್ತೀರ್ಣ ಹೊಂದಿದೆ. ಕಟ್ಟಡದ ಒಟ್ಟು ವಿಸ್ತೀರ್ಣವು 18,258 ಚದರಡಿ ಇದೆ.

ವಾಣಿಜ್ಯ ವ್ಯವಹಾರಕ್ಕೂ ಬಳಕೆ
ಕೇವಲ ಬಸ್ಸು ತಂಗುದಾಣ ಮಾತ್ರವಲ್ಲದೆ ವಾಣಿಜ್ಯ ಬಳಕೆಗೆ ಉಪಯೋಗವಾಗುವಂತೆ ಮಾಡುವ ಮೂಲಕ ಆದಾಯ ಗಳಿಸುವ ಇರಾದೆಯನ್ನು ಕೆಎಸ್ಸಾರ್ಟಿಸಿ ಹೊಂದಿದೆ. ಕ್ಯಾಂಟಿನ್‌ ಸಹಿತ ಇನ್ನಿತರ ವಸ್ತುಗಳ ಮಾರಾಟದ ಅಂಗಡಿಗಳು ಈ ಮಳಿಗೆಯಲ್ಲಿ ಕಾರ್ಯಾಚರಿಸಲಿವೆ.

ವಾಣಿಜ್ಯ ವ್ಯವಹಾರಕ್ಕೆಂದು ಕೆಳ ಅಂತಸ್ತಿನಲ್ಲಿ 3,889ಚದರಡಿ ವಿಸ್ತೀರ್ಣ, ಮೇಲಂತಸ್ತಿನಲ್ಲಿ 3,049 ಚದರಡಿ ವಿಸ್ತೀರ್ಣ ಹಾಗೂ ಮೊದಲ ಅಂತಸ್ತಿನಲ್ಲಿ 4,390 ಚದರಡಿ ಸಹಿತ ಒಟ್ಟು 11,328 ಚದರಡಿ ವಿಸ್ತೀರ್ಣ ಜಾಗವನ್ನು ವಾಣಿಜ್ಯ ಉದ್ದೇಶಕ್ಕೆಂದು ಮೀಸಲಿರಿಸಲಾಗಿರುವುದು ಕಟ್ಟಡದ ವೈಶಿಷ್ಟéವಾಗಿದೆ.

ಪಾರ್ಕಿಂಗ್‌ಗೆ ವ್ಯವಸ್ಥೆ
ಕಟ್ಟಡದ ತಳಂತಸ್ತಿನಲ್ಲಿ ಏಕಕಾಲದಲ್ಲಿ 10 ಬಸ್ಸುಗಳು ನಿಲುಗಡೆಯಾಗಲು ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ 12 ಕಾರು ಹಾಗೂ 20 ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಟಿವಿ, ಎಸಿ ಅಳವಡಿಕೆಗೂ ಚಿಂತನೆ
ಪ್ರಯಾಣಿಕರಿಗಾಗಿ ಇರುವ ತಂಗುದಾಣ ಸಹಿತ ಕಟ್ಟಡಕ್ಕೆ ಎಸಿ ಅಳವಡಿಸುವ ಬಗ್ಗೆಯೂ ಚಿಂತನೆ ಇದೆ. ಈ ಪ್ರಕ್ರಿಯೆ ಸದ್ಯಕ್ಕೆ ಆಗದಿದ್ದರೂ ಮುಂಬರುವ ದಿನಗಳಲ್ಲಿ ವಹಿವಾಟು ನೋಡಿಕೊಂಡು ಆರಂಭಿಸುವ ಸಾಧ್ಯತೆ ಇದೆ. ಎಸಿ, ಟಿವಿಗಳನ್ನು ಅಳವಡಿಸುವ ಮೂಲಕ ಬಸ್ಸು ತಂಗುದಾಣಕ್ಕೆ ಹೈಟೆಕ್‌ ಸ್ಪರ್ಶ ನೀಡುವ ಪ್ರಸ್ತಾವವೂ ಇದೆ.

ಹೆಚ್ಚುವರಿ ನರ್ಮ್
ಬಸ್‌ಗೆ ಬೇಡಿಕೆ
ನಗರದಲ್ಲಿ 2016ರಿಂದ ನರ್ಮ್ ಬಸ್‌ಗಳ ಓಡಾಟವಿದ್ದು ಉತ್ತಮ ಸೇವೆ ನೀಡುವ ಮೂಲಕ ಈಗಾಗಲೇ ಜನಮನ್ನಣೆ ಗಳಿಸಿದೆ. ಪ್ರಸ್ತುತ 30 ನರ್ಮ್ ಬಸ್ಸುಗಳಿದ್ದು ಇನ್ನೂ ಹೆಚ್ಚಿನ ಕಡೆಗಳಿಗೆ ಬಸ್ಸು ಹಾಕಬೇಕೆಂಬ ಬೇಡಿಕೆಯೂ ಸಾರ್ವಜನಿಕರಿಂದ ಬಂದಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸಿ ಆದ್ಯತೆಯ ಮೇರೆಗೆ ಬಸ್ಸುಗಳನ್ನು ಹಾಕಲಾಗುವುದು ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಹೊಸ ಪರಿಕಲ್ಪನೆ
ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವ ಆಶಯವನ್ನು ಕೆಎಸ್ಸಾರ್ಟಿಸಿ ಹೊಂದಿದೆ. ಹೊಸ ಪರಿಕಲ್ಪನೆ ಮಾದರಿಯಲ್ಲಿ ಈ ಬಸ್ಸು ತಂಗುದಾಣವನ್ನು ನಿರ್ಮಿಸಲಾಗಿದೆ. ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.
-ಅರುಣ್‌, ವಿಭಾಗೀಯ ನಿಯಂತ್ರಕರು,ಕೆಎಸ್ಸಾರ್ಟಿಸಿ

ವಿಳಂಬಕ್ಕೆ ಮರಳು ಅಭಾವ ಕಾರಣ?
ಕೆಎಸ್ಸಾರ್ಟಿಸಿ ಕಾಮಗಾರಿ ಯೋಜನೆಯ ಪ್ರಕಾರ 2018ರಲ್ಲೇ ಈ ಬಸ್ಸು ತಂಗುದಾಣದ ಕಾಮಗಾರಿ ಮುಗಿಯಬೇಕಿತ್ತು. ಆದರೆ ಮರಳು ಅಭಾವದಿಂದ ಕಾಮಗಾರಿ ತುಸು ವಿಳಂಬವಾಗಿದೆ. ಈಗಾಗಲೇ ಶೇ.90ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ಇಲ್ಲಿ ಸೇವೆ ಲಭ್ಯವಾಗಲಿದೆ.

ವಿಶೇಷತೆಗಳು
1. 41 ಸೆಂಟ್ಸ್‌ ಜಾಗದಲ್ಲಿ ನಿರ್ಮಾಣ
2. 18,258 ಚದರಡಿ ಕಟ್ಟಡದ ಒಟ್ಟು ವಿಸ್ತೀರ್ಣ
3. 11,328 ಚದರಡಿ ವಾಣಿಜ್ಯ ಉದ್ದೇಶಕ್ಕೆ ಮೀಸಲು
4. ಹತ್ತು ಬಸ್ಸು ನಿಲುಗಡೆಗೆ ವ್ಯವಸ್ಥೆ

ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.