ಚಾರ ಹಂದಿಕಲ್ಲಿನಲ್ಲಿ ಗ್ರಾಮಸ್ಥರೇ ಭಗೀರಥರು

10 ವರ್ಷಗಳಿಂದ ಗ್ರಾಮಸ್ಥರಿಂದ ತಾತ್ಕಾಲಿಕ ಅಣೆಕಟ್ಟು ನಿರ್ಮಾಣ

Team Udayavani, May 20, 2019, 6:00 AM IST

1805HBRE1A

ತಾತ್ಕಾಲಿಕ ಅಣೆಕಟ್ಟು ನಿರ್ಮಾಣದಿಂದ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರುವುದು.

ಹೆಬ್ರಿ: ಇಲ್ಲಿಗೆ ಸಮೀಪ ಚಾರ ಗ್ರಾಮದ ಹಂದಿಕಲ್ಲು ಸೀತಾನದಿಗೆ ಕಳೆದ 10 ವರ್ಷಗಳಿಂದ ಈ ಭಾಗದ ರೈತರು ಮರಳು ಚೀಲಗಳನ್ನು ಹಾಕಿ ತಾತ್ಕಾಲಿಕ ಅಣೆಕಟ್ಟನ್ನು ನಿರ್ಮಿಸಿ ನೀರಿನ ಅಭಾವ ನೀಗಿಸುವಲ್ಲಿ ಯಶಸ್ವಿಯಾಗಿದ್ದಾರೆ.

10 ವರ್ಷಗಳಿಂದ ನಿರಂತರ ಪ್ರಯತ್ನ
ಬೇಸಗೆಯ ನೀರಿನ ಅಭಾವ ನೀಗಿಸಲು ಕಳೆದ 10 ವರ್ಷಗಳಿಂದ ಪ್ರತಿ ವರ್ಷ ಎಳ್ಳಮಾವಾಸ್ಯೆ ಮುಗಿ ಯುತ್ತಿದ್ದಂತೆ ಈ ಭಾಗದ ರೈತರು, ಗ್ರಾಮಸ್ಥರು, ವಿವೇಕಾನಂದ ವೇದಿಕೆಯ ಸದಸ್ಯರು, ಜೋಮ್ಲ ಅಭಿವೃದ್ಧಿ ಸಮಿತಿಯವರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಸೇರಿ ಸುಮಾರು 2,500ಕ್ಕೂ ಅಧಿಕ ಪ್ಲಾಸ್ಟಿಕ್‌ ಚೀಲಗಳಲ್ಲಿ ಮರಳನ್ನು ಸಂಗ್ರಹಿಸಿ ನೀರಿನ ಹರಿವಿಗೆ ಅಡ್ಡವಾಗಿ ತಾತ್ಕಾಲಿಕ ಅಣೆಕಟ್ಟನ್ನು ನಿರ್ಮಿಸಿದ್ದಾರೆ.

ಅಂತರ್ಜಲ ವೃದ್ಧಿ
ತಾತ್ಕಾಲಿಕ ಕಿಂಡಿ ಅಣೆಕಟ್ಟಿನ ನಿರ್ಮಾಣದಿಂದ ಬೃಹತ್‌ ಹೊಂಡ ಗುಂಡಿಗಳಲ್ಲಿ ನೀರಿನ ಸಂಗ್ರಹಣೆ ಅಧಿಕವಾಗಿ ಪಕ್ಕದ ಕೆರೆ ಬಾವಿಗಳಲ್ಲಿ ಅಂತರ್ಜಲ ಹೆಚ್ಚಾಗುತ್ತಿದೆ. ಇದರಿಂದ ಸಮೀಪದ 50 ಎಕರೆಗೂ ಅಧಿಕ ಕೃಷಿ ಭೂಮಿಗೆ ಅನುಕೂಲವಾಗುತ್ತಿದೆ. ಅಲ್ಲದೆ ಈ ಬಾರಿ ಬೀಸಿಲಿನ ತಾಪ ಹೆಚ್ಚಾಗಿದ್ದು ಎಲ್ಲೆಡೆ ಕೆರೆ ಬಾವಿಗಳು ಬತ್ತಿ ಹೋಗಿದ್ದು ಸುತ್ತಮುತ್ತಲಿನ ಜನರು ಇದೇ ನೀರನ್ನು ಅವಲಂಬಿಸಿದ್ದಾರೆ.

ಕಿಂಡಿ ಅಣೆಕಟ್ಟು ಅಗತ್ಯ
ಈಗಾಗಲೇ ಚಾರ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಟ್ಯಾಂಕರ್‌ ಮೂಲಕ ನೀರನ್ನು ಪೂರೈಕೆ ಮಾಡಲಾಗುತ್ತಿದ್ದು ನೀರಿನ ಸಮಸ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಇದರ ಶಾಶ‌Ìತ ಪರಿಹಾರಕ್ಕೆ ಹಂದಿಕಲ್ಲಿನ ಸೀತಾನದಿಗೆ ಕಿಂಡಿ ಅಣೆಕಟ್ಟು ನಿರ್ಮಿಸುವುದು ಅಗತ್ಯವಾಗಿದೆ.

ಮೂರು ಗ್ರಾಮಗಳಿಗೆ ಅನುಕೂಲ
ಸುಸಜ್ಜಿತ ಕಿಂಡಿ ಅಣೆಕಟ್ಟು ನಿರ್ಮಾಣ ಈ ಭಾಗದ ರೈತರ ಬಹುಕಾಲದ ಬೇಡಿಕೆಯಾಗಿದ್ದು ಇದರಿಂದ ನಾಲ್ಕೂರು, ಚಾರ ಹಾಗೂ 38ನೇ ಕಳೂ¤ರು ಗ್ರಾಮಗಳಿಗೆ ಅನುಕೂಲವಾಗಲಿದೆ. ಕಳೆದ ಹತ್ತು ವರ್ಷಗಳಿಂದ ರೈತರು ಇತರ ಸಂಘಟನೆಗಳೊಂದಿಗೆ ನೀರಿನ ಅಂತರ್ಜಲ ಹೆಚ್ಚಿಸಲು ಶ್ರಮಿಸುತ್ತಿದ್ದು ಇದು ವರೆಗೆ ಜನಪ್ರತಿನಿಧಿಗಳು, ಅಧಿಕಾರಿ ವರ್ಗ, ಸಂಬಂಧಪಟ್ಟ ಇಲಾಖೆ ಮತ್ತು ಸ್ಥಳೀಯ ಪಂಚಾಯತ್‌ಗೆ ಬೇಡಿಕೆ ಮನವಿ ಸಲ್ಲಿಸಿದರೂ ಇತ್ತ ಗಮನ ಹರಿಸದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿಗಳಿಗೆ ಮನವಿ
ಶಾಶ್ವತ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡುವಂತೆ ಈಗಾಗಲೇ ಶಾಸಕರು ಮತ್ತು ಮುಖ್ಯಮಂತ್ರಿಗಳಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ.

ಜನಪ್ರತಿನಿಧಿಗಳು ಗಮನಹರಿಸಿ
ಈ ಪ್ರದೇಶದಲ್ಲಿ 2000 ಇಸವಿಯಲ್ಲಿ ವಿದ್ಯುತ್‌ ಸ್ಥಾವರ ಘಟಕ ಮಾಡುವ ಕುರಿತು ಸರ್ವೆ ಕಾರ್ಯ ಆಗಿತ್ತು. ಬಳಿಕ ಆ ವಿಷಯ ಏನಾಯ್ತು ಎಂದು ಯಾರಿಗೂ ಗೊತ್ತಿಲ್ಲ. ಒಂದು ವೇಳೆ ವಿದ್ಯುತ್‌ ಸ್ಥಾವರ ಆದರೆ ಉಡುಪಿ ಜಿಲ್ಲೆಗೆ ನಿರಂತರ ವಿದ್ಯುತ್‌ನೊಂದಿಗೆ ಸುತ್ತಮುತ್ತಲಿನ ಗ್ರಾಮಗಳ ನೀರಿನ ಸಮಸ್ಯೆ ದೂರವಾಗಲಿದೆ. ಆದ್ದರಿಂದ ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ಬಹುದಿನಗಳ ಬೇಡಿಕೆ ಹಾಗೂ ತೀರ ಅಗತ್ಯವಾದ ಕಿಂಡಿಅಣೆಕಟ್ಟನ್ನು ನಿರ್ಮಿಸಿ ಶಾಶ‌Ìತ ನೀರಿನ ಸಮಸ್ಯೆ ಹೋಗಲಾಡಿಸಿ.
-ಮಿಥುನ್‌ ಶೆಟ್ಟಿ ಚಾರ, ಪ್ರಗತಿಪರ ಕೃಷಿಕ

ಮುಂದಿನ ಬಜೆಟ್‌ನಲ್ಲಿ ಅನುದಾನ ಸಾಧ್ಯತೆ
ಮನವಿಯನ್ನು ಸರಕಾರಕ್ಕೆ ಸಲ್ಲಿಸಲಾಗಿದ್ದು ಈ ಬಾರಿ ಯಾವುದೇ ಕಿಂಡಿ ಅಣೆಕಟ್ಟಿಗೆ ಅನುದಾನ ಬಂದಿಲ್ಲ. ಮುಂದಿನ ಬಜೆಟ್‌ನಲ್ಲಿ ಸಾಧ್ಯತೆ ಇದ್ದು ಶಾಶ‌Ìತ ನೀರಿನ ಸಮಸ್ಯೆಗೆ ಚಾರ ಹಂದಿಕಲ್ಲಿನ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ.
ವಿ. ಸುನಿಲ್‌ ಕುಮಾರ್‌,
ಶಾಸಕರು ಕಾರ್ಕಳ

– ಹೆಬ್ರಿ ಉದಯಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.