ಕಳವು ಪ್ರಕರಣ: ಆರೋಪಿಗಳಿಗೆ ನ್ಯಾಯಾಲಯದಿಂದ ಶಿಕ್ಷೆ
Team Udayavani, Dec 10, 2022, 12:54 AM IST
ಕಾರ್ಕಳ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ರಿ ಗ್ರಾಮದ, ಅಡಾಲ್ ಬೆಟ್ಟು ಎಂಬಲ್ಲಿ 2020ರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂದಿಸಿ ರಾಜೇಶ್ ಹೆಗಡೆ ಹಾಗೂ ರಾಜೇಶ್ ಪೂಜಾರಿ ಎಂಬವರಿಬ್ಬರಿಗೆ 2ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ಡಿ.9ರಂದು ತೀರ್ಪು ನೀಡಿದೆ.
ಜಯ ಶಂಕರ ಇವರ ಸಹೋದರಿ ದಿ| ಲಕ್ಷ್ಮಿ ಶೆಡ್ತಿಯವರ ಬೀಗ ಹಾಕಿರುವ ಮನೆಯ ಹಿಂದುಗಡೆ ಬಾಗಿಲನ್ನು ಬಲಾತ್ಕಾರವಾಗಿ ದೂಡಿ ಮನೆಯ ಒಳಗಿನ ಕೊಠಡಿಯ ಗೋದ್ರೆಜ್ ಬಾಗಿಲನ್ನು ತೆರೆದು ಅದರೊಳಗೆ ಚಿನ್ನವಿರಬಹುದು ಎಂದು ಬಟ್ಟೆ ಬರೆಗಳನ್ನ ಚೆಲ್ಲಾಪಿಲ್ಲಿ ಮಾಡಿ, ಅಡುಗೆ ಕೋಣೆಯಲ್ಲಿದ್ದ ಸುಮಾರು 2000 ಮೌಲ್ಯದ ರೆಗುಲೇಟರ್ ಇರುವ ಎರಡು ಒಲೆಯ ಗ್ಯಾಸ್ ಸ್ಟವ್ ಅನ್ನು ಕಳುವು ಮಾಡಿಕೊಂಡು ಹೋಗಿದ್ದು ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯ ಪಿ.ಎಸ್.ಐ ಸುಮಾ ಬಿ ರವರು ಆರೋಪಿಗಳಾದ ರಾಜೇಶ್ ಹೆಗ್ಡೆ ಮತ್ತು ರಾಜೇಶ್ ಪೂಜಾರಿಯ ವಿರುದ್ಧ ದೋಷಾರೋಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಕರಣವನ್ನು ವಿಚಾರಣೆ ನಡೆಸಿದ ಕಾರ್ಕಳದ 2ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಕಾರ್ಕಳದ ನ್ಯಾಯಾಧೀಶೆ ಚೇತನಾ ಸಿ.ಎಫ್ ರವರು ಆರೋಪಿಗಳಿಗೆ ಹೊಂಚು ಹಾಕಿ ರಾತ್ರಿಯಲ್ಲಿ ಮನೆ ಅತಿಕ್ರಮಣ ಪ್ರವೇಶ ಮಾಡಿರುವುದಕ್ಕೆ 1 ವರ್ಷ ಸಾಧಾರಣ ಸಜೆ ಮತ್ತು ತಲಾ 2ಸಾವಿರ ತಂಡ ತಪ್ಪಿದ್ದಲ್ಲಿ 1 ತಿಂಗಳ ಸಾಧಾರಣ ಸಜೆ, ಕಳ್ಳತನ ಮಾಡಿರುವುದಕ್ಕೆ 1 ವರ್ಷ ಸಾಧಾರಣ ಸಜೆ ಮತ್ತು ತಲಾ 2ಸಾವಿರ ತಂಡ ತಪ್ಪಿದ್ದಲ್ಲಿ 1 ತಿಂಗಳ ಸಾಧಾರಣ ಸಜೆ, ವಿಧಿಸಿ ತೀರ್ಪನ್ನು ನೀಡಿದ್ದು, ಸರಕಾರದ ಪರವಾಗಿ ರಾಜಶೇಖರ್ ಪಿ ಶಾಮರಾವ್ ಸಹಾಯಕ ಸರ್ಕಾರಿ ಅಭಿಯೋಜಕರು ಕಾರ್ಕಳ ಇವರು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ