ಗಾವಳಿ ಸೇತುವೆ ಬಳಿ ಲಾರಿಗಳ ಮುಖಾಮುಖಿ ಢಿಕ್ಕಿ: ಪ್ರಯಾಣಿಕ ಗಂಭೀರ, 12 ಗಂಟೆ ರಸ್ತೆ ಸಂಚಾರ ಬಂದ್
Team Udayavani, Nov 27, 2022, 10:48 AM IST
ತೆಕ್ಕಟ್ಟೆ : ಕುಂದಾಪುರ ತಾಲೂಕಿನ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾವಳಿ ಸೇತುವೆ ತಿರುವಿನಲ್ಲಿ ಶನಿವಾರ ರಾತ್ರಿ ಗಂಟೆ 11ರ ಸುಮಾರಿಗೆ ಲಾರಿಗಳು ಮುಖಾಮುಖಿ ಢಿಕ್ಕಿಯಾಗಿ ಸಂಪೂರ್ಣ ನುಜ್ಜುಗುಜ್ಜಾದ ಘಟನೆ ಸಂಭವಿಸಿದೆ.
ಬಿದ್ಕಲ್ಕಟ್ಟೆಯಿಂದ ಬ್ರಹ್ಮಾವರದ ಕಡೆಗೆ ರಬ್ಬರ್ ಮರ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಅತೀ ವೇಗದಿಂದ ಬಂದು ಎದುರಿನಲ್ಲಿ ಖೋಕ್ ಸಾಗುತ್ತಿದ್ದ ಲಾರಿಗೆ ನೇರವಾಗಿ ಬಂದು ಢಿಕ್ಕಿ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಪರಿಣಾಮ ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್ ಚಾಲಕನೋರ್ವ ಗಂಭೀರ ಗಾಯಗಳಾಗಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ತೀವ್ರತೆಗೆ ಲಾರಿಯ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.
12 ಗಂಟೆಗಳ ಕಾಲ ರಸ್ತೆ ಸಂಚಾರ ಬಂದ್ : ಗಾವಳಿ – ಬಿದ್ಕಲ್ಕಟ್ಟೆ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿ ಈ ಭೀಕರ ರಸ್ತೆ ಅಪಘಾತದಿಂದಾಗಿ ಈ ಮಾರ್ಗದ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ರಾತ್ರಿ 11 ಗಂಟೆಯಿಂದಲೂ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಬಿದ್ಕಲ್ಕಟ್ಟೆ ಗುಡ್ಡೆಅಂಗಡಿ ಮಾರ್ಗದ ಮೂಲಕ ಸಂಚರಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದ್ದು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಕೋಟ ಪೋಲೀಸ್ ಠಾಣಿಗೆ ಸ್ಥಳೀಯರು ಮಾಹಿತಿ ನೀಡಿದರು ಕೂಡಾ ಸೂಕ್ತ ಸ್ಪಂದನೆ ದೊರಕಲಿಲ್ಲ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಅಸ್ಸಾಂ: ಐರನ್, ಫೋಲಿಕ್ ಆಸಿಡ್ ಮಾತ್ರೆ ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ