ಗ್ರಾಮೀಣ ವಿದ್ಯಾರ್ಥಿಗಳಿಗೆ ಆಶಾಕಿರಣ ಕುವೆಂಪು ಶತಮಾನೋತ್ಸವ ಸ.ಮಾ. ಶಾಲೆ

ಶತಮಾನೋತ್ತರ ಬೆಳ್ಳಿ ಹಬ್ಬದ ಸಂಭ್ರಮ

Team Udayavani, Nov 4, 2019, 5:00 AM IST

KUVEMPU-SKL-OLD-BUILDING-

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ತೆಕ್ಕಟ್ಟೆ: ಕುಂದಾಪುರ ಮತ್ತು ಕೋಟೇಶ್ವರವನ್ನು ಹೊರತುಪಡಿಸಿ ಸುತ್ತಮುತ್ತಲಿನ ಹಳ್ಳಿಗಳಾದ ಬೇಳೂರು, ಕೆದೂರು, ಉಳೂ¤ರು, ಬೀಜಾಡಿ, ಮಣೂರು ಕುಂಭಾಸಿ ಪರಿಸರದಲ್ಲಿ ಶಾಲೆಗಳಿಲ್ಲದೇ ಇರುವುದನ್ನು ಮನಗಂಡು 1893ರಲ್ಲಿ ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಶಾಲೆ ಸ್ಥಾಪನೆಯಾಯಿತು. ಶತಮಾನೋತ್ತರ ಬೆಳ್ಳಿ ಹಬ್ಬ ಪೂರೈಸಿರುವ ಈ ಶಾಲೆಯು ಗುಣಾತ್ಮಕ ಶಿಕ್ಷಣಕ್ಕಾಗಿ ಇಲಾಖೆಯಿಂದ “ಎ’ ಗ್ರೇಡ್‌ ಪಡೆದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಶಾಕಿರಣವಾಗುವ ಜತೆಗೆ 2002ರಲ್ಲಿ ಉತ್ತಮ ಶಾಲಾ ರಾಜ್ಯ ಪ್ರಶಸ್ತಿ ಪಡೆದ ಶಿಕ್ಷಣ ಸಂಸ್ಥೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಮೂಲ ಸೌಕರ್ಯಗಳು
ರಾ.ಹೆ. 66ರ ಸಮೀಪದ ಸುಮಾರು 1.07 ಎಕ್ರೆ ವಿಸ್ತೀರ್ಣದಲ್ಲಿರುವ ಈ ಶಿಕ್ಷಣ ಸಂಸ್ಥೆಯಲ್ಲಿ 25 ಕೊಠಡಿಗಳು, ಶೌಚಾಲಯಗಳು, ಕುಡಿಯಲು ನೀರಿನ ವ್ಯವಸ್ಥೆ, ವಾಚನಾಲಯ, ಬಾವಿ, ಶಾಲಾ ಬಸ್‌ ಸೌಲಭ್ಯ ಇದೆ. ಒಂದರಿಂದ ಮೂರನೇ ತರಗತಿ ಹಾಗೂ ಆರು ಮತ್ತು ಏಳನೇ ತರಗತಿಯಲ್ಲಿ ಆಂಗ್ಲ ಮಾಧ್ಯಮ, ಒಂದರಿಂದ ಮೂರನೇ ತರಗತಿಯವರೆಗೆ ನಲಿಕಲಿ ವ್ಯವಸ್ಥೆ ಇದೆ. 2014ರಲ್ಲಿ ಕೆ.ಎಸ್‌.ಕ್ಯೂ.ಎ.ಸಿ. ನಡೆಸಿದ ಗುಣಮಟ್ಟ ಮೌಲ್ಯಮಾಪನದಲ್ಲಿ “ಎ’ ಗ್ರೇಡ್‌ ಪಡೆದ ಉಡುಪಿ ಜಿಲ್ಲೆಯ ಎರಡೇ ಶಾಲೆ ಗಳಲ್ಲಿ ಇದೂ ಒಂದು. 2018-19ರಲ್ಲಿ ಕರ್ನಾಟಕ ಸರಕಾರದಿಂದ ಪಾರಂಪರಿಕ ಶಾಲಾ ಪಟ್ಟ ಕೂಡ ದೊರಕಿದೆ. ಶಾಲಾ ಆವರಣದಲ್ಲಿ ಭಾರತ ಸರಕಾರ ಮತ್ತು ಕರ್ನಾಟಕ ಸರಕಾರಗಳ ಜಂಟಿ ಆಶ್ರಯದಲ್ಲಿ ವಿಶ್ವಬ್ಯಾಂಕ್‌ ನೆರವಿನೊಂದಿಗೆ ಎರಡು ಕೋಟಿ ಅರವತ್ತು ಲಕ್ಷ ರೂ. ವೆಚ್ಚದಲ್ಲಿ ನ್ಯಾಶನಲ್‌ ಸೈಕ್ಲೋನ್‌ ಶೆಲ್ಟರ್‌ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ಶೌಚಾಲಯಗಳು, ಅಡಿಗೆ ಮನೆ, ಉಗ್ರಾಣ ಕೋಣೆ, ಜನರೇಟರ್‌ ಸೌಲಭ್ಯವಿದೆ.

ವಿಶೇಷತೆಗಳು
2017-18ನೇ ಶೈಕ್ಷಣಿಕ ವರ್ಷದಿಂದ 1ನೇ ತರಗತಿಗೆ ಆಂಗ್ಲ ಮಾಧ್ಯಮ ವಿಭಾಗ ಆರಂಭಗೊಳಿಸಲಾಗಿದ್ದು, ಕುಂದಾಪುರ ತಾಲೂಕಿನಲ್ಲಿಯೇ ಅತೀ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಯೆಂಬ ಹೆಗ್ಗಳಿಕೆ ಇದರದ್ದು. ಆಕರ್ಷಕ ಚಿಲ್ಡ್ರನ್‌ ಪಾರ್ಕ್‌, ಕಂಪ್ಯೂಟರ್‌ ಹಾಗೂ ಚಿತ್ರಕಲಾ ತರಬೇತಿ ಶಿಕ್ಷಣ ವ್ಯವಸ್ಥೆ, ವಿಜ್ಞಾನ ಕಲಿಕೆಗೆ ಸುಸಜ್ಜಿತ ಪ್ರತ್ಯೇಕ ಪ್ರಯೋಗಾಲಯ, ಗುಣಮಟ್ಟದ ಶಿಕ್ಷಣಕ್ಕಾಗಿ ಬೋಧನ ಕಲಿಕಾ ಸಾಮಗ್ರಿಗಳ ಬಳಕೆ, ಸಹ ಪಠ್ಯ ಚಟುವಟಿಕೆಯೊಂದಿಗೆ ಸ್ಕೌಟ್ಸ್‌ , ಗೈಡ್ಸ್‌, ಕಬ್ಸ್, ಬುಲ್‌ ಬುಲ್‌, ಸೇವಾದಳ, ಯೋಗ ಶಿಕ್ಷಣ ತರಬೇತಿ, ಪ್ರತಿ ತರಗತಿಗೂ ರೇಡಿಯೋ ಬ್ರಾಡ್‌ ಕಾಸ್ಟಿಂಗ್‌ ವ್ಯವಸ್ಥೆ, ಹೆಚ್ಚಿನ ಕಲಿಕೆಗಾಗಿ ಎಲ್‌ಸಿಡಿ ಪ್ರಾಜೆಕ್ಟರ್‌ನ ಅಳವಡಿಕೆ, ಎಜ್ಯುಸ್ಯಾಟ್‌ ಬಳಕೆ, ಕ್ರೀಡಾ ಚಟುವಟಿಕೆ ವಿಶೇಷ ಆದ್ಯತೆ, ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸಲು ಮಾಸಿಕ ಹಸ್ತಪತ್ರಿಕೆಯ ಬಿಡುಗಡೆ ಮಾಡಲಾಗುತ್ತಿದೆ.

ತೆಕ್ಕಟ್ಟೆ ಎಜುಕೇಶನ್‌ ಟ್ರಸ್ಟ್‌ ರಚನೆ ಶಾಲೆಯ ಗುಣಾತ್ಮಕ ಶಿಕ್ಷಣ, ಗೌರವ ಶಿಕ್ಷಕರ ಭತ್ಯೆ ಹಾಗೂ ಶಾಲಾ ಅಭಿವೃದ್ಧಿ ದೃಷ್ಟಿಯಿಂದ ತೆಕ್ಕಟ್ಟೆ ಎಜುಕೇಶನ್‌ ಟ್ರಸ್ಟ್‌ ಹಾಗೂ ಶಾಲಾಭಿವೃದ್ಧಿ ಸಮಿತಿ ರಚಿಸಲಾಗಿದೆ. ಟ್ರಸ್ಟ್‌ನ ಅಧ್ಯಕ್ಷರಾಗಿ ಮಲ್ಯಾಡಿ ಶಿವರಾಮ ಶೆಟ್ಟಿ ಹಾಗೂ ಕಾರ್ಯದರ್ಶಿ ವಿಶ್ವನಾಥ ಆಚಾರ್‌ ಹಾಗೂ ಶಾಲಾಭಿವೃದ್ಧಿ ಸಮಿತಿ ಸರ್ವ ಸದಸ್ಯರು ಮತ್ತು ಗ್ರಾಮಸ್ಥರು ಶಾಲೆಯ ಉನ್ನತೀಕರಣಕ್ಕಾಗಿ ಶ್ರಮಿಸುತ್ತಿದ್ದಾರೆ.

125ನೇ ವರ್ಷಕ್ಕೆ ನಮ್ಮ ಶಾಲೆಗೆ ಪಾರಂಪರಿಕ ಪಟ್ಟ ಬಂದಿರು ವುದು ಹೆಮ್ಮೆಯ ವಿಷಯ. ಉತ್ತಮ ಶಾಲಾ ರಾಜ್ಯ ಪ್ರಶಸ್ತಿ ಪುರಸ್ಕೃತ ಪ್ರಶಸ್ತಿ ಪಡೆದ ಶಾಲೆಯಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಅಧ್ಯಾಪಕ ವೃಂದ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಶ್ರಮಿಸುತ್ತಿದೆ.
-ಲಲಿತಾ ಸಖರಾಮ್‌, ಮುಖ್ಯ ಶಿಕ್ಷಕರು

ನಾನು ಇಲ್ಲಿ ವ್ಯಾಸಂಗ ಮಾಡುತ್ತಿರುವಾಗ 8ನೇ ತರಗತಿ ಇಲ್ಲಿಯೇ ಇತ್ತು. ಗ್ರಾಮೀಣ ಭಾಗದ ಸುಮಾರು 900ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ನಾವು ರಾಜಕೀಯ ಹಾಗೂ ಸಾಮಾಜಿಕ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಇಲ್ಲಿನ ಶಿಕ್ಷಣವೇ ಪ್ರೇರಣೆ.
-ಮಲ್ಯಾಡಿ ಶಿವರಾಮ ಶೆಟ್ಟಿ ,
ಮಾಜಿ ಗ್ರಾ.ಪಂ. ಸದಸ್ಯರು
(ಹಳೆ ವಿದ್ಯಾರ್ಥಿ)

-  ಟಿ. ಲೋಕೇಶ್‌ ಆಚಾರ್ಯ

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.