300ರ ಬದಲು ಇರುವುದು 22 ಯಂತ್ರಗಳು !

ಉಭಯ ಜಿಲ್ಲೆಗಳಲ್ಲಿ 47 ಸಾವಿರ ಹೆಕ್ಟೇರ್‌ ಭತ್ತ ಕೃಷಿ

Team Udayavani, Oct 23, 2021, 6:50 AM IST

300ರ ಬದಲು ಇರುವುದು 22 ಯಂತ್ರಗಳು !

ಉಡುಪಿ: ಕರಾವಳಿಯಲ್ಲಿ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ಕಟಾವು ಯಂತ್ರಗಳಿಗೆ ಬೇಡಿಕೆ ಕಂಡುಬರುತ್ತಿದೆ. ಎರಡೂ ಜಿಲ್ಲೆಗಳಲ್ಲಿ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಕಟಾವು ಯಂತ್ರಗಳಿದ್ದರೂ ಗದ್ದೆಗಳು ಏಕಕಾಲದಲ್ಲಿ ಕಟಾವಿಗೆ ಬರುವುದರಿಂದ ಯಂತ್ರಗಳ ಕೊರತೆ ಉಂಟಾಗುತ್ತಿದೆ. ಖಾಸಗಿ ಯಂತ್ರಗಳನ್ನು ಅವಲಂಬಿಸಬೇಕಾಗಿದ್ದು, ದುಬಾರಿ ದರ ವಿಧಿಸದಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ. ಈ ನಡುವೆ ಆಗಾಗ ಮಳೆಯೂ ಬರುತ್ತಿದ್ದು, ತುರ್ತಾಗಿ ಕಟಾವು ಮುಗಿಸದೆ ಇದ್ದರೆ ನಷ್ಟಕ್ಕೆ ಒಳಗಾಗುವ ಚಿಂತೆಯಲ್ಲಿ ರೈತರಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಒಟ್ಟು 47 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತದ ಬೇಸಾಯ ಮಾಡಲಾಗಿದ್ದು, ಬಹುತೇಕ ಕಟಾವು ಹಂತದಲ್ಲಿದೆ.

ಯಂತ್ರದ ಕೊರತೆ
ಕೂಲಿಯಾಳುಗಳ ಸಮಸ್ಯೆಯಿಂದ ಉಭಯ ಜಿಲ್ಲೆಗಳಲ್ಲಿ ಬಹುತೇಕ ಯಂತ್ರದ ಮೂಲಕ ಕಟಾವು ನಡೆಯುತ್ತಿದೆ. ಉಡುಪಿ ಜಿಲ್ಲೆಯ ಕೃಷಿಯಂತ್ರಧಾರೆ ಕೇಂದ್ರದಲ್ಲಿರುವುದು ಕೇವಲ 8 ಯಂತ್ರಗಳು ಮಾತ್ರ. ಒಟ್ಟು 36 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಕನಿಷ್ಟ 250ರಿಂದ 300ರಷ್ಟು ಯಂತ್ರಗಳ ಆವಶ್ಯಕತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ಇಲ್ಲಿ 14 ಕಟಾವು ಯಂತ್ರಗಳಿವೆ. ಗದ್ದೆಗಳು ಏಕಕಾಲದಲ್ಲಿ ಕಟಾವಿಗೆ ಬರುವಾಗ ಸಮಸ್ಯೆ ಎದುರಾಗುತ್ತದೆ.

ಹೆಚ್ಚು ದರ ನೀಡಿದರೂ ಯಂತ್ರವಿಲ್ಲ
ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು, ಬ್ರಹ್ಮಾವರ ಭಾಗಗಳಲ್ಲಿ ಕಟಾವು ಆರಂಭಗೊಂಡಿದೆ. ಕೃಷಿ ಯಂತ್ರಧಾರೆಯ ಯಂತ್ರಗಳು ಅದಾಗಲೇ ಬುಕಿಂಗ್‌ ಆಗಿವೆ. ತಮಿಳುನಾಡು ಭಾಗದಿಂದ ಕಟಾವು ಯಂತ್ರಗಳು ಆಗಮಿಸಿವೆ. ಇವರು ತಾಲೂಕು, ಗ್ರಾಮವಾರು ಬುಕಿಂಗ್‌ ಆಗಿರುವ ಕಟಾವು ಮುಗಿಸಿ ಬೇರೆ ಭಾಗಗಳಿಗೆ ತೆರಳುವುದರಿಂದ ಇನ್ನುಳಿದವರು ಕಾಯಬೇಕಾದ ಸ್ಥಿತಿ ಇದೆ.

ಇದನ್ನೂ ಓದಿ:ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಹೊರೆಯಾಗದ ದರಕ್ಕೆ ಸೂಚನೆ
ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಕರ್ತಾರ್‌ ಮಾದರಿಯ ಕಂಬೈನ್ಡ್ ಹಾರ್ವೆಸ್ಟರ್‌ನಿಂದ ಕಟಾವಿಗೆ ಜಿಲ್ಲಾ ಸಮಿತಿಯಿಂದ ಪ್ರತೀ ಗಂಟೆಗೆ 1,800 ರೂ. ಬಾಡಿಗೆ ನಿಗದಿಪಡಿಸಲಾಗಿದೆ. ಖಾಸಗಿ ಕಟಾವು ಯಂತ್ರಗಳ ಮಾಲಕರು ರೈತರ ಹಿತವನ್ನು ಗಮನದಲ್ಲಿರಿಸಿ, ಕೃಷಿ ಯಂತ್ರಧಾರೆ ಕೇಂದ್ರದ ಬಾಡಿಗೆ ದರವನ್ನು ಮಾನದಂಡವಾಗಿಟ್ಟುಕೊಂಡು ರೈತರೊಂದಿಗೆ ಸ್ಥಳೀಯವಾಗಿ ಚರ್ಚಿಸಿ, ನ್ಯಾಯೋಚಿತ ದರ ವಿಧಿಸಬೇಕು ಎಂದು ಜಿಲ್ಲಾಧಿಕಾರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ. ಜಿಲ್ಲಾಡ ಳಿತ ನಿಗದಿಪಡಿಸಿರುವ ದರ 2017ರದು, ಅನಂತರ ಪರಿಷ್ಕರಣೆ ಮಾಡ ಲಾಗಿಲ್ಲ. ಈಗ ಯಂತ್ರೋಪ ಕರಣ ಗಳ ಬಿಡಿಭಾಗ ಗಳು, ಇಂಧನ ವೆಚ್ಚ, ಚಾಲಕನ ಭತ್ತೆ ಹೆಚ್ಚಳ ವಾದ ಪರಿಣಾಮ ಕೆಲವು ಕಂಬೈನ್‌x ಹಾರ್ವೆಸ್ಟರ್‌ಗಳು 2,500 ರೂ.ವರೆಗೂ ದರ ತೆಗೆದುಕೊಳ್ಳುತ್ತಿದ್ದಾರೆ.

ಹೆಚ್ಚುವರಿ
ಯಂತ್ರಕ್ಕೆ ಬೇಡಿಕೆ
ಜಿಲ್ಲೆಯ 2-3 ಪಂಚಾಯತ್‌ಗಳಿಗೆ ತಲಾ 1ರಂತೆ ಕಟಾವು ಯಂತ್ರ ನೀಡಬೇಕೆಂದು ಕೃಷಿ ಇಲಾಖೆ ಮೂಲಕ ಸರಕಾರಕ್ಕೆ ಹಲವಾರು ಬಾರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಸರಕಾರ ಕ್ರಮ ತೆಗೆದುಕೊಂಡರೆ ಮತ್ತಷ್ಟು ಯಂತ್ರಗಳು ಯಂತ್ರಧಾರೆಯ ಮೂಲಕ ಕೃಷಿಕರ ಸೇವೆಗೆ ಲಭ್ಯವಾಗಲಿವೆ.

ದ.ಕ. ಜಿಲ್ಲೆಯ 11 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಕೃಷಿ ಮಾಡಲಾಗಿದೆ. ಕೃಷಿಯಂತ್ರಧಾರೆ ಕೇಂದ್ರಗಳಲ್ಲಿ 14 ಕಟಾವು ಯಂತ್ರಗಳಿವೆ. ಏಕಕಾಲದಲ್ಲಿ ಕಟಾವಿಗೆ ಬರುವಾಗ ಸಮಸ್ಯೆ ಎದುರಾಗುತ್ತದೆ. ಶಿವಮೊಗ್ಗ, ತಮಿಳುನಾಡು ಭಾಗದಲ್ಲಿ ಕಟಾವು ಮುಗಿದ ಬಳಿಕ ಯಂತ್ರಗಳು ಇಲ್ಲಿಗೆ ಆಗಮಿಸುತ್ತವೆ.
-ಸೀತಾ, ಜಂಟಿ ನಿರ್ದೇಶಕರು, ಕೃಷಿ ಇಲಾಖೆ, ದ.ಕ.

ಉಡುಪಿ ಜಿಲ್ಲೆಯಲ್ಲಿ ಕಟಾವು ಆರಂಭಗೊಂಡಿದೆ. ಹೊರಗಿನಿಂದ ಬರುವ ಯಂತ್ರಗಳ ಸಾಮರ್ಥ್ಯಕ್ಕನು ಗುಣವಾಗಿ ದರ ನಿಗದಿ ಮಾಡಲಾಗುತ್ತಿದೆ. ರೈತರಿಗೆ ಯಾವುದೇ ಹೊರೆಯಾಗದ ದರ ವಿಧಿಸುವಂತೆ ಹಾರ್ವೆಸ್ಟರ್‌ಗಳಿಗೆ ಸೂಚನೆ ನೀಡಲಾಗಿದೆ.
-ಡಾ| ಎಚ್‌. ಕೆಂಪೇಗೌಡ, ಜಂಟಿ ಕೃಷಿ ನಿರ್ದೇಶಕರು, ಉಡುಪಿ

-ಪುನೀತ್‌ ಸಾಲ್ಯಾನ್‌

 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.