ಬಸ್ಸು ತಂಗುದಾಣವಿದ್ದರೂ ಬಸ್ಸೇ ಬರುತ್ತಿಲ್ಲ ತಂಗುದಾಣಕ್ಕೆ


Team Udayavani, Jan 17, 2019, 12:50 AM IST

katapady.png

ಕಟಪಾಡಿ: ದಶಕಗಳಿಂದಲೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಬಸ್ಸುಗಳು ಕಟಪಾಡಿ ಪೇಟೆಯ ಒಳ ಭಾಗದ ಬಸ್ಸು ತಂಗುದಾಣಕ್ಕೆ ಆಗಮಿಸಿ ಪ್ರಯಾಣಿಕರನ್ನು ಇಳಿಸಿ – ಹತ್ತಿಸಿ ತನ್ನ ಸಂಚಾರವನ್ನು ಮುಂದುವರೆಸುತ್ತಿತ್ತು.

ಇದೀಗ ಹೆದ್ದಾರಿ ಚತುಷ್ಪಥಗೊಂಡು ವಿಸ್ತರೀಕರಣದ ಅನಂತರ ಇತ್ತೀಚಿನ ದಿನಗಳಲ್ಲಿ ಸರ್ವೀಸ್‌ ರಸ್ತೆಯು ಬಸ್ಸು ಸಂಚಾರಕ್ಕೆ ತೆರೆದುಕೊಂಡ ಅನಂತರದಲ್ಲಿ ಸರ್ವೀಸ್‌ ನೀಡಬೇಕಾದ ಬಸ್ಸುಗಳು ಕಟಪಾಡಿ ಪೇಟೆಯೊಳಗೆ ಬಾರದೇ ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿಯೇ ಸಂಚರಿಸುವುದರಿಂದ ಸಮಸ್ಯೆ ತಲೆದೋರಿದೆ.

ಶಿರ್ವ, ಕಾಪು ಭಾಗದತ್ತ ಸಂಚರಿಸುವ ಬಸ್ಸುಗಳೂ ಕಟಪಾಡಿ ಪೇಟೆಯೊಳಗಿನ ಬಸ್ಸು ತಂಗುದಾಣಕ್ಕೆ ಬಾರದಿರುವುದರಿಂದ ಶಾಲೆಯ ವಿದ್ಯಾರ್ಥಿಗಳು ಹೆಚ್ಚು ಸಮಸ್ಯೆಯನ್ನು ಅನುಭವಿಸುವಂತಾಗಿದೆ.

ಮೊದಲೇ ಜನನಿಬಿಡ, ವಾಹನ ಸಂಚಾರ ದಟ್ಟಣೆಯಿಂದ ಕೂಡಿದ ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಜಂಕ್ಷನ್‌ನ್ನು ಶಾಲಾ ಮಕ್ಕಳು ದಾಟಿಕೊಂಡು ಬಂದು ಶಾಲೆಯ ಹಾದಿಯನ್ನು ಹಿಡಿಯ ಬೇಕಿದೆ. ಅದರೊಂದಿಗೆ ಪೇಟೆಯೊಳಕ್ಕೆ ವ್ಯಾಪಾರ ವಹಿವಾಟಿಗಾಗಿ ಆಗಮಿಸುವ ವಯೋ ವೃದ್ಧರು, ಹೆಂಗಸರೂ ಸಂಕಷ್ಟ ಪಡುವಂತಾಗಿದೆ.

ಈ ಅವ್ಯವಸ್ಥೆಯ ಬಗ್ಗೆ ಕಟಪಾಡಿ ಗ್ರಾಮ ಪಂಚಾಯತ್‌ನಲ್ಲಿ ನಡೆದ ಮಕ್ಕಳ ಗ್ರಾಮಸಭೆಯ ಸಂದರ್ಭ ಶಾಲಾ ವಿದ್ಯಾರ್ಥಿಗಳು ಸಂಚಾರ ಸಂಕಷ್ಟದ ತಮ್ಮ ಅಳಲನ್ನು ತೋಡಿಕೊಂಡಿದ್ದು, ಇದುವರೆಗೂ ಪ್ರತಿಫಲ ಮಾತ್ರ ಶೂನ್ಯವಾಗಿದೆ.

ಇನ್ನುಳಿದಂತೆ ಬಸ್ಸು ಪ್ರಯಾಣಿಕರ ವ್ಯಾಪಾರ ವಹಿವಾಟನ್ನು ನಂಬಿ ವ್ಯಾಪಾರ ಆರಂಭಿಸಿದ್ದ ವ್ಯಾಪಾರಗಳು ಕೂಡಾ ಇದೀಗ ಬಸ್ಸು ತಂಗುದಾಣವನ್ನು ಪ್ರವೇಶಿಸದ ಕಾರಣ ವ್ಯಾಪಾರದಲ್ಲೂ  ತೊಂದರೆ ಅನುಭವಿಸುವಂತಾಗಿದೆ ಎಂದು ಕೆಲ ವ್ಯಾಪಾರಸ್ಥರು ಮಾಹಿತಿ ನೀಡುತ್ತಿದ್ದಾರೆ.ಈ ಭಾಗದ ತಂಗುದಾಣವನ್ನೇ ಹೆಚ್ಚು ಆಶ್ರಯಿಸಿದ್ದ ಪ್ರಯಾಣಿಕರನ್ನು ಕರೆದೊಯ್ಯುವ ರಿಕ್ಷಾ ಸಹಿತ ಇತರೇ ವಾಹನಗಳೂ ತಮ್ಮ ಬಾಡಿಗೆಯಲ್ಲೂ ಇಳಿಮುಖ ಅನುಭವಿಸುವಂತಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ.

ಕೇವಲ ಮಟ್ಟು ಭಾಗಕ್ಕೆ ತೆರಳುವ ಬಸ್ಸು ಕಟಪಾಡಿ ಪೇಟೆಯ ಬಸ್ಸು ತಂಗುದಾಣವನ್ನು ಪ್ರವೇಶಿಸುತ್ತಿದ್ದು, ಕನಿಷ್ಠ ಶಿರ್ವ, ಕಾಪು ಭಾಗದತ್ತ ಸಂಚರಿಸುವ ಬಸ್ಸುಗಳಾದರೂ ಕಟಪಾಡಿ ಪೇಟೆಯೊಳಕ್ಕೆ ಪ್ರವೇಶಿಸುವಂತೆ ಜನತೆ ಆಗ್ರಹಿಸುತ್ತಿದ್ದಾರೆ. ಇಲ್ಲವಾದಲ್ಲಿ ಕಟಪಾಡಿ ಪೇಟೆಯ ಬಸ್ಸು ತಂಗುದಾಣವು ಇತಿಹಾಸದ ಪುಟಗಳನ್ನು ಸೇರುವ ಸಾಧ್ಯತೆಯೇ ಹೆಚ್ಚು ಎಂದು ಈ ಭಾಗದ ಜನತೆ ಪರಿತಪಿಸುತ್ತಿದ್ದಾರೆ.

ಕಟಪಾಡಿ ಪೇಟೆಯ ಒಳಗಡೆ ಎರ್ರಾ ಬಿರ್ರಿಯಾಗಿ ವಾಹನಗಳ ನಿಲುಗಡೆಯಿಂದಾಗಿ ತೊಂದರೆ ಆಗುತ್ತಿದೆ. ಬಸ್ಸುಗಳಿಗೆ ಸಮಯಾವಕಾಶದ ತೊಂದರೆಯೂ ಇದೆ. ಈ ಬಗ್ಗೆ ಆರ್‌ಟಿಒ ಅವರ ಬಳಿ ಸೂಕ್ತ ಕ್ರಮಕ್ಕೆ ಚಿಂತಿಸಲಾಗುತ್ತದೆ.
– ಮಹೇಶ್‌ ಪ್ರಸಾದ್‌, ಪೊಲೀಸ್‌ ವೃತ್ತ ನಿರೀಕ್ಷಕರು, ಕಾಪು ವೃತ್ತ

ಪೇಟೆಯೊಳಕ್ಕೆ ಬಸ್ಸು ಬಾರದೆ ವಯಸ್ಸಾದವರು ಹೆದ್ದಾರಿ ದಾಟಲು ಕಷ್ಟ ಪಡುವಂತಾಗಿದೆ. ಪೊಲೀಸರು ರಸ್ತೆ ದಾಟಿಸುವಲ್ಲಿ ಕರ್ತವ್ಯದಲ್ಲಿರುವುದರಿಂದ ಸ್ವಲ್ಪ ಅನುಕೂಲ. ಇಲ್ಲವಾದಲ್ಲಿ ಇದು ನಿತ್ಯ ಬವಣೆಯಾಗಿದೆ. ಶಾಲಾ ಮಕ್ಕಳೂ, ವಯೋವೃದ್ಧರೂ ತೊಂದರೆ ಅನುಭವಿಸುತ್ತಿದ್ದಾರೆ.
– ಮಂಜುನಾಥ, ಕಟಪಾಡಿ

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.