Katapadi ;ಕೃಷಿ ಭೂಮಿಯತ್ತ ಹೊಳೆ ನೀರು ನುಗ್ಗುವ ಭೀತಿ


Team Udayavani, Jun 4, 2023, 3:47 PM IST

Katapadi ;ಕೃಷಿ ಭೂಮಿಯತ್ತ ಹೊಳೆ ನೀರು ನುಗ್ಗುವ ಭೀತಿ

ಕಟಪಾಡಿ: ಕೋಟೆ ಗ್ರಾಮದ ಮಟ್ಟು ಪಿನಾಕಿನಿ ಹೊಳೆಯ ನಡುವೆ ಪರೆಂಕುದ್ರು ಬಳಿ ಹೊಳೆಯಲ್ಲಿ ಕಾಂಡ್ಲ ಗಿಡಗಳನ್ನು ಹೇರಳ ಪ್ರಮಾಣದಲ್ಲಿ ನಾಟಿ ಮಾಡುತ್ತಿರುವುದು ಗ್ರಾಮಸ್ಥರ ನಿದ್ದೆಗೆಡಿಸಿದೆ.

ಈಗಾಗಲೇ ಮಟ್ಟು ಪಿನಾಕಿನಿ ಹೊಳೆಯ ನಡುವೆ ಕಳೆ ಗಿಡಗಳು ಬೆಳೆದು ಹೊಳೆಯ ನೀರು ಸರಾಗವಾಗಿ ಹರಿಯುವಿಕೆಗೆ ಸಮಸ್ಯೆ ತಂದೊಡ್ಡುತ್ತಿದೆ. ಹೊಳೆಯ ನೀರು ತಿರುವು ಪಡೆದುಕೊಂಡು ವಿಭಜನೆಗೊಂಡು ಜನವಸತಿ ಭೂಪ್ರದೇಶ ಮತ್ತು ಕೃಷಿ ಕ್ಷೇತ್ರಕ್ಕೆ ನೀರು ನುಗ್ಗುತ್ತಿರುವ ಸಮಸ್ಯೆಯ ನಡುವೆಯೇ ಮತ್ತೆ ಪರೆಂಕುದ್ರು ಬಳಿ ಹೊಳೆಯಲ್ಲಿ ಸ್ಥಳೀಯರನ್ನು ಬಳಸಿಕೊಂಡು ನೀರಿನ ಇಳಿಕೆಯ ಸಂದರ್ಭ ಮತ್ತೆ ಕಾಂಡ್ಲ ಗಿಡಗಳನ್ನು ಹೇರಳ ಪ್ರಮಾಣದಲ್ಲಿ ನಾಟಿ ಮಾಡುತ್ತಿರುವುದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಈ ಬಗ್ಗೆ ಈಗಾಗಲೇ ಕೋಟೆ ಗ್ರಾ.ಪಂ. ಆಡಳಿತದ ಗಮನಕ್ಕೆ ತರಲಾಗಿದ್ದು, ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇದೀಗ ನಾಟಿ ನಡೆಸಿದ ಹೊಳೆಯ ಪ್ರದೇಶದ ಬಳಿ ನಿರ್ಮಿಸಲಾಗಿರುವ ರಸ್ತೆಗೆ ಅಳವಡಿಸಲಾದ ಸಿಮೆಂಟ್‌ ಪೈಪ್‌ ಈ ಗಿಡಗಳು ಬೆಳೆದು ನಿಂತಲ್ಲಿ ಮುಂದಿನ ಮಳೆಗಾಲದಲ್ಲಿ ಮುಚ್ಚುವ ಸಾಧ್ಯತೆ ಇದ್ದು, ಮತ್ತೆ ನೀರು ಉಕ್ಕೇರಿ ಹರಿದು ಸಮಸ್ಯೆಯನ್ನು ಉಂಟು ಮಾಡಲಿದೆ. ನೆರೆ ನೀರು ಉಕ್ಕಿ ಹರಿಯುವ ವೇಳೆಯಲ್ಲಿ ಹೊಳೆಯ ನೀರಿನ ಜತೆಗೆ ವಿಷದ ಹಾವುಗಳು, ಅಪಾಯಕಾರಿ ತ್ಯಾಜ್ಯವೂ ಸಮೀಪದ ಕೃಷಿ ಗದ್ದೆ, ವಸತಿ ಪ್ರದೇಶದತ್ತ ಬರುವುದರಿಂದ ಮತ್ತಷ್ಟು ಅಪಾಯವು ಕಟ್ಟಿಟ್ಟ ಬುತ್ತಿಯಾಗಿದೆ.

ಈ ಬಗ್ಗೆ ಈಗಾಗಲೇ ಗ್ರಾಮಸಭೆ ಯಲ್ಲಿಯೂ ವಿರೋಧವನ್ನು ವ್ಯಕ್ತಪಡಿಸ ಲಾಗಿದ್ದು, ಕಳೆ ಗಿಡಗಳನ್ನು ನಿರ್ವಹಣೆ ಮಾಡುವಂತೆ ವಿನಂತಿಸಿಕೊಂಡಿದ್ದರೂ ಯಾವುದೇ ಪ್ರತಿಫಲ ಇಲ್ಲವಾಗಿದ್ದು, ಇದೀಗ ಮತ್ತೆ ಕಾಂಡ್ಲ ಗಿಡಗಳನ್ನು ನಾಟಿ ಮಾಡುತ್ತಿರುವುದು ರೈತರು, ಹೊಳೆಯ ತೀರದ ನಿವಾಸಿಗಳಿಗೆ ಮತ್ತಷ್ಟು ಅಪಾಯಕಾರಿ ಪರಿಣಮಿಸಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀರಿನಲ್ಲಿ ಆಮ್ಲಜನಕ ಮಟ್ಟದ ವೃದ್ಧಿ, ಮೀನುಗಾರಿಕೆ ಸಹಕಾರಿ, ಸುನಾಮಿ ಸಂದರ್ಭ ಸಹಕಾರಿಯಾಗಿ ಕಾಂಡ್ಲ ನಾಟಿಯ ಬಗ್ಗೆ ಕೇಂದ್ರ ಸರಕಾರದ ಇಕೋ ಬಜೆಟ್‌ ಯೋಜನೆಯಾಗಿದೆ. ಸ್ಥಳೀಯ ಮೀನುಗಾರರ ದೋಣಿ ಸುಗಮ ಸಂಚಾರಕ್ಕೆ ಅವಕಾಶ ಇದೆ. ಮಣ್ಣಿನ ಸವಕಳಿ ತಡೆಯುತ್ತದೆ. ಹೊಳೆ ಕೊರೆತವನ್ನು ತಡೆಯುತ್ತದೆ. ತಡೆ ಬೇಲಿ ಆಗದೆ, ಬೇರು ಮಾತ್ರ ಬೆಳೆಯುವುದರಿಂದ ಗದ್ದೆಯತ್ತ ನೀರು ನುಗ್ಗುವುದು ಅಸಾಧ್ಯ. ಕಾಡಿನ ರೀತಿಯಲ್ಲಿ ಬೆಳೆದು ನಿಂತ ಕಾಂಡ್ಲ ವನದಿಂದ ಪ್ರವಾಸೋದ್ಯಮ ಅಭಿವೃದ್ಧಿ ಸಾಧ್ಯ. ಯಾವುದೇ ರೀತಿಯಲ್ಲಿ ತೊಂದರೆ ಆಗುವುದಿಲ್ಲ.
ಸುಬ್ರಹ್ಮಣ್ಯ ಆಚಾರ್‌,
ರೇಂಜ್‌ ಫಾರೆಸ್ಟ್‌ ಆಫೀಸರ್‌, ಉಡುಪಿ

ಈ ಸಮಸ್ಯೆಯ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ತಂದರೂ ಪರಿಹಾರ ಶೂನ್ಯವಾಗಿದೆ. ಸ್ಥಳೀಯರನ್ನು ಬಳಸಿಕೊಂಡು ಹೊಳೆಯ ನಡುವೆ ಮತ್ತಷ್ಟು ಗಿಡಗಳ ನಾಟಿಯನ್ನು ಮಾಡುತ್ತಿದ್ದಾರೆ. ಸ್ಥಳೀಯ ಕೃಷಿಕರು, ಮಟ್ಟು ಪ್ರದೇಶದ ಗ್ರಾಮಸ್ಥರು ಸಮಸ್ಯೆಯನ್ನು ಬಗೆಹರಿಸುವಂತೆ ವಿನಂತಿಸಿದ್ದು, ಅರಣ್ಯ ಇಲಾಖೆಯ ಗಮನಕ್ಕೆ ಮತ್ತೆ ತರಲಾಗುತ್ತದೆ.
– ಕಿಶೋರ್‌ ಕುಮಾರ್‌ ಅಂಬಾಡಿ, ಅಧ್ಯಕ್ಷರು, ಕೋಟೆ ಗ್ರಾ.ಪಂ.

ಸಮಸ್ಯೆಯ ಬಗ್ಗೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಗ್ರಾಮಸ್ಥರು, ಕೃಷಿಕರಿಗೆ ತೊಂದರೆ ಉಂಟು ಮಾಡುವ ಕಳೆ ಗಿಡಗಳ ಸಮಸ್ಯೆಯ ಬಗ್ಗೆ ಗಮನ ಹರಿಸುವಂತೆ ಕೈಗೊಂಡ ನಿರ್ಣಯವನ್ನು ಅರಣ್ಯ ಇಲಾಖಾಧಿಕಾರಿಗೆ ಕಳುಹಿಸಲಾಗುತ್ತದೆ.
– ಶ್ರುತಿ ಕಾಂಚನ್‌, ಪಿಡಿ, ಕೋಟೆ ಗ್ರಾ.ಪಂ.


 -ವಿಜಯ ಆಚಾರ್ಯ, ಕಟಪಾಡಿ

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.