ದೇವರಬಾಳು; ಬಸ್‌ ಇಲ್ಲದಿರುವುದೇ ಗೋಳು


Team Udayavani, Sep 22, 2018, 6:00 AM IST

2109kdpp1.jpg

ಹಳ್ಳಿಹೊಳೆ: ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳೆರಡರ ಗಡಿಭಾಗದಲ್ಲಿ ಇರುವ ನಕ್ಸಲ್‌ ಪೀಡಿತ ಪ್ರದೇಶವಾದ ದೇವರಬಾಳುವಿಗೆ ಇನ್ನೂ ಕೂಡ ಬಸ್‌ ಸಂಚಾರ ವ್ಯವಸ್ಥೆಯೇ ಇಲ್ಲ. 

ಹಳ್ಳಿಹೊಳೆಯಿಂದ ಚಕ್ರಾ ಮೈದಾನದವರೆಗೆ ಬಸ್‌ ಸಂಪರ್ಕವಿದೆ. ಆದರೆ ಅಲ್ಲಿಂದ ಮುಂದಕ್ಕೆ ದೇವರಬಾಳು, ಕಬ್ಬಿನಾಲೆ, ಕಟ್ಟಿನಾಡಿ ಊರಿಗೆ ಸುಮಾರು 6 ಕಿ.ಮೀ. ದೂರದವರೆಗೆ ಬಸ್‌ ಸಂಪರ್ಕವೇ ಇಲ್ಲ. ಇಲ್ಲಿನ ನಿವಾಸಿಗಳು ಸ್ವಂತ ವಾಹನವನ್ನೇ ಅವಲಂಬಿಸಬೇಕಾದ ಅನಿವಾರ್ಯತೆಯಿದೆ. 

ಹಳ್ಳಿಹೊಳೆ ಗ್ರಾ.ಪಂ. ವ್ಯಾಪ್ತಿಯ ದೇವರಬಾಳುವಿನಲ್ಲಿ 2005 ರ ಜೂ. 23ರಂದು ನಕ್ಸಲರೆಂದು ಗುರುತಿಸಿಕೊಂಡ ಅಜಿತ್‌ ಹಾಗೂ ಉಮೇಶ್‌ ಅವರನ್ನು ಆಗಿನ ಉಡುಪಿ ಎಸ್ಪಿಯಾಗಿದ್ದ ಮುರುಗನ್‌ ನೇತೃತ್ವದ ವಿಶೇಷ ಪೊಲೀಸ್‌ ತಂಡ ಹಾಗೂ ನಕ್ಸಲ್‌ ನಿಗ್ರಹ ಪಡೆಯ ಜಂಟಿ ಕಾರ್ಯಾಚರಣೆಯಲ್ಲಿ ಎನ್‌ಕೌಂಟರ್‌ ಮಾಡಲಾಗಿತ್ತು. ಅಲ್ಲಿಯವರೆಗೆ ಈ ಊರಿನ ಬಗ್ಗೆ ಹೆಚ್ಚು ಮಂದಿಗೆ ತಿಳಿದಿರಲಿಲ್ಲ. 

ಭರವಸೆ ಮಾತ್ರ
ಆ ಎನ್‌ಕೌಂಟರ್‌ ಪ್ರಕರಣ ನಡೆದು 13 ವರ್ಷಗಳು ಕಳೆದಿವೆ. ಆ ಬಳಿಕ ನಕ್ಸಲ್‌ ಪ್ಯಾಕೇಜ್‌ನಡಿ ಅನುದಾನ ಬಂದರೂ ಇಲ್ಲಿನ ಅರಣ್ಯ ವಾಸಿ ಜನರ ಬದುಕು ಮಾತ್ರ ಯಾವುದೇ ಅಭಿವೃದ್ಧಿ ಕಂಡಿಲ್ಲ. ದೇವರಬಾಳು, ಕಬ್ಬಿನಾಲೆ, ಕಟ್ಟಿನಾಡಿ, ಭಾಗದಲ್ಲಿ ಸುಮಾರು 40 ರಿಂದ 50 ಮನೆಗಳಿವೆ. ಇಲ್ಲಿನ ಜನರಿಗೆ ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸಲು ಜನಪ್ರತಿನಿಧಿಗಳು, ಸರಕಾರ ಅನೇಕ ಭರವಸೆಗಳನ್ನು ನೀಡಿತ್ತು. 5 ವರ್ಷಗಳ ಹಿಂದೆ ನಕ್ಸಲ್‌ ಪ್ಯಾಕೇಜ್‌ ಅನುದಾನದಡಿ ಇಲ್ಲಿನ ಮನೆಗಳಿಗೆ ವಿದ್ಯುತ್‌ ಸಂಪರ್ಕವನ್ನು ಕಲ್ಪಿಸಿದ್ದು, ಬಿಟ್ಟರೆ ಬೇರೆ ಯಾವುದೇ ಅಭಿವೃದ್ಧಿಯಾಗಿಲ್ಲ. 

ಬಸ್‌ ಸೌಕರ್ಯ ವಿಸ್ತರಿಸಲಿ
ಹಳ್ಳಿಹೊಳೆಯಿಂದ ದೇವರಬಾಳುವಿಗೆ ಸುಮಾರು 8 ಕಿ.ಮೀ. ದೂರವಿದ್ದು, ಈಗಿರುವ ಚಕ್ರಾ ಮೈದಾನದವರೆಗೆ ಇರುವ ಬಸ್‌ ಸೌಕರ್ಯವನ್ನು ದೇವರಬಾಳುವರೆಗೂ ವಿಸ್ತರಿಸಿದರೆ ಇಲ್ಲಿನ ನೂರಾರು ಮಂದಿಗೆ ಪ್ರಯೋಜನವಾಗಲಿದೆ. ಇಲ್ಲಿಂದ ಶಂಕರನಾರಾಯಣ, ಕೊಲ್ಲೂರು ಕಡೆಗೆ ತೆರಳುವವರಿಗೂ ಪ್ರಯೋಜನವಾಗಲಿದೆ.  
-ಶಂಕರ, ದೇವರಬಾಳು ನಿವಾಸಿ

ಬಸ್‌ ಬೇಡಿಕೆ ಸಲ್ಲಿಕೆ
ಹಳ್ಳಿಹೊಳೆಯಿಂದ ದೇವರಬಾಳುವಿಗೆ ಬಸ್‌ ಸೌಕರ್ಯ ಕಲ್ಪಿಸುವ ಸಂಬಂಧ ಹಳ್ಳಿಹೊಳೆ ಗ್ರಾ.ಪಂ. ವತಿಯಿಂದ ಈಗಾಗಲೇ ಕೆಎಸ್‌ಆರ್‌ಟಿಸಿಗೆ ಬೇಡಿಕೆಯನ್ನು ಸಲ್ಲಿಸಲಾಗಿದೆ. 
– ಸುದರ್ಶನ್‌, ಹಳ್ಳಿಹೊಳೆ ಗ್ರಾ.ಪಂ. ಪಿಡಿಒ

ಹಲವೆಡೆಯಿಂದ ಬೇಡಿಕೆಗಳಿವೆ
ದೇವರಬಾಳು ಸೇರಿದಂತೆ ಕರಾವಳಿಯ ಅನೇಕ ಕಡೆಗಳಿಗೆ ಬಸ್‌ ಸಂಪರ್ಕ ಕಲ್ಪಿಸಲು ಬೇಡಿಕೆಗಳು ಬಂದಿವೆ. ಆದರೆ ಈಗ ಸದ್ಯಕ್ಕೆ ಹೊಸ ಬಸ್‌ ಆರಂಭಿಸುವ ಯಾವುದೇ ಪ್ರಸ್ತಾವನೆ ಇಲಾಖೆ ಮುಂದಿಲ್ಲ. 
– ಜೈಶಾಂತ್‌, ಕೆಎಸ್‌ಆರ್‌ಟಿಸಿ ಡಿಟಿಒ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.