Govt ;ಹಳೆಯದಕ್ಕೆ ಅನುದಾನವಿಲ್ಲ; ಹೊಸ ಕಾಮಗಾರಿ ಆರಂಭವಾಗಿಲ್ಲ !

ಗ್ಯಾರಂಟಿಗೆ ಆದ್ಯತೆ; ಅಭಿವೃದ್ಧಿಯ ಅವಗಣನೆ ಆರೋಪ

Team Udayavani, Sep 3, 2023, 6:50 AM IST

Govt ;ಹಳೆಯದಕ್ಕೆ ಅನುದಾನವಿಲ್ಲ; ಹೊಸ ಕಾಮಗಾರಿ ಆರಂಭವಾಗಿಲ್ಲ !

ಉಡುಪಿ: ರಾಜ್ಯದಲ್ಲಿ ಹೊಸ ಸರಕಾರ ರಚನೆಯಾಗಿ 100 ದಿನ ಕಳೆದರೂ ಅಭಿವೃದ್ಧಿ ಕಾರ್ಯ ವೇಗ ಪಡೆದಿಲ್ಲ ಹಾಗೂ ಹಳೆಯ ಕಾಮಗಾರಿಗಳು ಅನುದಾನ ಬಾರದೇ ಪುನರಾರಂಭಗೊಂಡಿಲ್ಲ. ಹೊಸ ಪ್ರಸ್ತಾವನೆಗೂ ಅನುಮೋದನೆ ದೊರೆತಿಲ್ಲ.

ಲೋಕೋಪಯೋಗಿ ಇಲಾಖೆಯಿಂದ ರಸ್ತೆ, ಸೇತುವೆ, ಸರಕಾರಿ ಕಟ್ಟಡ ನಿರ್ಮಾ ಣಕ್ಕೆ ಪ್ರಸ್ತಾವನೆ, ಮೀನುಗಾರಿಕೆ ಇಲಾಖೆ ಯಿಂದ ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರಕ್ಕಾಗಿ ಸಲ್ಲಿಸಿದ ಪ್ರಸ್ತಾವನೆ ಸರಕಾರದ ಹಂತದಲ್ಲೇ ಬಾಕಿಯಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಸಲ್ಲಿಸಿರುವ ಸುಮಾರು 21 ಪ್ರಸ್ತಾವನೆಗಳಲ್ಲಿ 3 ಮಾತ್ರ ಅಂಗೀಕಾರಗೊಂಡಿವೆ.

ಬೈಂದೂರಿನಲ್ಲಿ ನ್ಯಾಯಾಲಯದ ಹೊಸ ಕಟ್ಟಡ ನಿರ್ಮಾಣಕ್ಕೆ 17.50 ಕೋ.ರೂ., ಕುಂದಾಪುರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣಕ್ಕೆ 8 ಕೋ.ರೂ., ಕೊಲ್ಲೂರಿನ ಹೊಸ ಪ್ರವಾಸಿ ಮಂದಿರದ 2ನೇ ಹಂತದ ಕಾಮಗಾರಿ ಮತ್ತು ಹಳೇ ಪ್ರವಾಸಿ ಮಂದಿರದ ನವೀಕರಣಕ್ಕೆ 3 ಕೋ.ರೂ., ಬೈಂದೂರು ಪ್ರವಾಸಿ ಮಂದಿರದ 2ನೇ ಹಂತದ ಕಾಮಗಾರಿಗೆ 1.5 ಕೋ.ರೂ., ಬೈಂದೂರು ಪಟ್ಟಣ ಪಂಚಾಯತ್‌ ಕಟ್ಟಡ ನಿರ್ಮಾಣಕ್ಕೆ 5 ಕೋ.ರೂ., ಉಡುಪಿಯಲ್ಲಿ ಲೋಕೋಪಯೋಗಿ ಇಲಾಖೆಯ ನೌಕರರು/ ಅಧಿಕಾರಿಗಳಿಗೆ ವಸತಿ ಸಮುಚ್ಚಯ ನಿರ್ಮಾಣಕ್ಕೆ 8 ಕೋ.ರೂ., ಕಾರ್ಕಳದಲ್ಲಿ ಹೊಸ ಉಪವಿಭಾಗ ಕಚೇರಿ ನಿರ್ಮಾಣಕ್ಕೆ 3 ಕೋ.ರೂ., ಬ್ರಹ್ಮಾವರ ತಾಲೂಕು ಬ್ರಹ್ಮಾವರ-ಜನ್ನಾಡಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸೇತುವೆ ಮರು ನಿರ್ಮಾಣ ಮತ್ತು ರಸ್ತೆ ವಿಸ್ತರಣೆಗೆ 8 ಕೋ.ರೂ., ಕುಂದಾಪುರ-ತೀರ್ಥಹಳ್ಳಿ (ಕುಂದಾಪುರದಿಂದ ಬಸ್ರೂರಿನವರೆಗೆ) ರಸ್ತೆ ಕಾಂಕ್ರೀಟ್‌ಗೆ 20 ಕೋ.ರೂ., ಬಾಳೆಬರ ಘಾಟಿಯಲ್ಲಿ ರಸ್ತೆ ಕಾಂಕ್ರೀಟ್‌ಗೆ 18 ಕೋ.ರೂ., ಬೈಂದೂರು-ವೀರಾಜಪೇಟೆ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಅಭಿವೃದ್ಧಿಗೆ 23 ಕೋ.ರೂ. ಹಾಗೂ ಜಡ್ಕಲ್‌- ಹಳ್ಳಿಹೊಳೆ-ಸಿದ್ದಾ ಪುರ-ಅಮಾಸೆಬೈಲು-ಹೆಬ್ರಿ ರಸ್ತೆಯಲ್ಲಿ ಸೇತುವೆ ಪುನರ್‌ ನಿರ್ಮಾಣಕ್ಕೆ 3.40 ಕೋ.ರೂ. ಸಹಿತ ವಿವಿಧ ಕಾಮಗಾರಿಗೆ 119 ಕೋ.ರೂ. ಜಿಲ್ಲೆಗೆ ಅಗತ್ಯವಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ 200 ಕೊಠಡಿ, ಸುಮಾರು 75 ಶಾಲೆಗಳು ಸಹಿತ ವಿವಿಧ ಕಟ್ಟಡ ಕಾಮಗಾರಿಗೆ 38.96 ಕೋ.ರೂ. ಖರ್ಚು ಅಂದಾಜಿಸಲಾಗಿದೆ. ಅದರಲ್ಲಿ 20.51 ಕೋ.ರೂ. ಬಿಡುಗಡೆ ಮಾಡಲಾಗಿದೆ. ಸುಮಾರು 18 ಕೋ.ರೂ. ಅನುದಾನ ಬರಬೇಕಿದೆ.

ಇಲಾಖೆಗಳಿಂದ ಪ್ರಸ್ತಾವನೆ
ಲೋಕೋಪಯೋಗಿ, ಪ್ರವಾಸೋ ದ್ಯಮ, ಮೀನುಗಾರಿಕೆ ಇಲಾಖೆ ಸಹಿತ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯ ಗಳಿಗೆ ಜಿಲ್ಲಾ ಮಟ್ಟದಿಂದ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಲಾಗಿದೆ. ಆದರೆ ಹೊಸ ಸರಕಾರದಿಂದ ಈವರೆಗೂ ಯಾವುದೇ ಪ್ರಸ್ತಾವನೆಗೆ ಅಂಗೀಕಾರ ಸಿಕ್ಕಿಲ್ಲ. ಯಾವುದೇ ಹೊಸ ಕಾಮಗಾರಿ, ಅಭಿವೃದ್ಧಿ ಕಾರ್ಯ ಆರಂಭವಾಗಿಲ್ಲ. ಗ್ಯಾರಂಟಿ ಯೋಜನೆಗೇ ಆದ್ಯತೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಬರ ನಿರ್ವಹಣೆಗೆ ಅನುದಾನ ಅಗತ್ಯ
ರಾಜ್ಯ ಸರಕಾರ ಸೆಪ್ಟಂಬರ್‌ ಮೊದಲ ವಾರದಲ್ಲಿ ಬರ ಘೋಷಣೆ ಮಾಡುವ ಸಾಧ್ಯತೆಯಿದೆ. ಒಂದೊಮ್ಮೆ ಬರ ತಾಲೂಕುಗಳ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯನ್ನು ಕೈಬಿಟ್ಟರೆ, ಇಲ್ಲಿನ ಪರಿಸ್ಥಿತಿ ನಿರ್ವಹಣೆಗೆ ಅನುದಾನದ ಕೊರತೆ ಎದುರಾಗಲಿದೆ. ವಿಪತ್ತು ನಿರ್ವಹಣೆ ಖಾತೆಯಲ್ಲಿ ಅನುದಾನವಿದ್ದರೂ ಬರ ಘೋಷಣೆಯಾಗದೇ ಇದ್ದರೆ ಅದರ ಬಳಕೆ ಅಸಾಧ್ಯವಾಗಲಿದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಪೂರೈಕೆಗೂ ಅನುದಾನ ಕೊರತೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಜಿಲ್ಲೆಯಲ್ಲಿ ಹೊಸದಾಗಿ ಅಭಿವೃದ್ಧಿ ಕಾಮಗಾರಿಗೆ ಯಾವುದೇ ಅನುದಾನ ಬಂದಿಲ್ಲ. ಕೆಲವು ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಅನುದಾನ ಬರುವ ನಿರೀಕ್ಷೆಯಿದೆ. ಬರ ಘೋಷಣೆಯಾದರೆ ವಿಪತ್ತು ನಿರ್ವಹಣೆ ಖಾತೆಯಲ್ಲಿರುವ ಅನುದಾನವನ್ನು ಬರ ಸಂಬಂಧಿ ತುರ್ತು ಕಾರ್ಯಗಳಿಗೆ ವಿನಿಯೋಗಿಸಲು ಸಾಧ್ಯವಿದೆ. ಬೇರೆ ಕಾಮಗಾರಿಗೆ ಈ ಅನುದಾನ ಬಳಸಲು ಬರುವುದಿಲ್ಲ.
– ಡಾ| ವಿದ್ಯಾ ಕುಮಾರಿ,
ಜಿಲ್ಲಾಧಿಕಾರಿ ಉಡುಪಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.