ಒಳಚರಂಡಿಯೇ ಇಲ್ಲ,ಇರುವಲ್ಲಿ ನಿರ್ವಹಣೆ ಕೊರತೆ
Team Udayavani, May 25, 2018, 6:00 AM IST
ಕೋಟ: ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಹೆಚ್ಚಿನ ಕಡೆಗಳಲ್ಲಿ ಸರಿಯಾದ ಚರಂಡಿ ವ್ಯವಸ್ಥೆಯೇ ಇಲ್ಲ. ಇನ್ನು ಇರುವಲ್ಲಿ ನಿರ್ವಹಣೆಗೆ ಆಸಕ್ತಿ ತೋರುತ್ತಿಲ್ಲ!
ಯೋಜಿತ ಕಾಮಗಾರಿ ಇಲ್ಲ
ಇಲ್ಲಿನ ಕಾರಂತ ಬೀದಿ, ಕಾರ್ಕಡ, ಪಾರಂಪಳ್ಳಿ, ಗುಂಡ್ಮಿ, ಚಿತ್ರಪಾಡಿ ಮುಂತಾದ ಕಡೆಗಳಲ್ಲಿ ಹಲವಾರು ಮೀಟರ್ಗಳಷ್ಟು ಒಳಚರಂಡಿ ವ್ಯವಸ್ಥೆ ಇದೆ. ಇದನ್ನು ಮೂರು-ನಾಲ್ಕು ವರ್ಷಗಳಿಗೊಮ್ಮೆ ಸಮಸ್ಯೆ ಎದುರಾದಗ ಹೂಳೆತ್ತಲಾಗುತ್ತದೆ. ಪ್ರತಿ ವರ್ಷ ಪೌರಕಾರ್ಮಿಕರ ಮೂಲಕ ಎಲ್ಲಾ ಕಡೆಯ ಪೊದೆಗಳನ್ನು ಸ್ವಚ್ಚಗೊಳಿಸಲಾಗುತ್ತದೆ. ಇದನ್ನು ಹೊರತು ಪಡಿಸಿ ದೊಡ್ಡ ಮಟ್ಟದ ಅನುದಾನ ಬಳಸಿಕೊಂಡು ಯಾವುದೇ ಕಾಮಗಾರಿಗಳನ್ನು ನಡೆಸಲಾಗುವುದಿಲ್ಲ.
ಚರಂಡಿ ನಿರ್ಮಿಸಲು ಜಾಗವಿಲ್ಲ
ಇಲ್ಲಿನ ಹೆಚ್ಚಿನ ಕಡೆಗಳಲ್ಲಿ ರಸ್ತೆಯಿಂದ ಕೆಳಗೆ ಒಂದು ಫೀಟ್ ಜಾಗವಿಲ್ಲದಂತೆ ಆಕ್ರಮಿಸಿಕೊಂಡು ಮನೆಯ ಕಾಂಪೌಂಡ್ಗಳು ನಿರ್ಮಾಣಗೊಂಡಿದೆ. ಹೀಗಾಗಿ ಒಳಚರಂಡಿ ನಿರ್ಮಾಣಕ್ಕೆ ಅವಕಾಶ ವಿಲ್ಲವಾಗಿದೆ. ಎಲ್ಲರೂ ತಮ್ಮ-ತಮ್ಮ ಮನೆಗಳಿಗೆ ನೀರು ನುಗ್ಗದಂತೆ ಜಾಗೃತೆ ಮಾಡಿಕೊಳ್ಳುತ್ತಿದ್ದು ಕೊನೆಗೆ ನೀರು ರಸ್ತೆಯ ಮೇಲೆ ನಿಲ್ಲುವ ಪರಿಸ್ಥಿತಿ ಇದೆ.
ಹೆದ್ದಾರಿಯಲ್ಲಿ ದೊಡ್ಡ ಸಮಸ್ಯೆ
ರಾಷ್ಟ್ರೀಯ ಹೆದ್ದಾರಿಯಲ್ಲೂ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ. ಸಾಲಿಗ್ರಾಮ ಪೇಟೆ, ಸಾಸ್ತಾನ, ಗುಂಡ್ಮಿ, ಕೋಟ ಮುಂತಾದ ಕಡೆಗಳಲ್ಲಿ ಮುಖ್ಯ ರಸ್ತೆಯಿಂದ ಕೆಳಗಿಳಿದರೆ ಕೊಳಚೆ ನೀರಿನ ಅಭಿಷೇಕವಾಗುತ್ತದೆ. ಕಳೆದ ಬಾರಿ ಕೃಷಿ ಭೂಮಿ, ವಾಣಿಜ್ಯ ಕಟ್ಟಡ, ಮನೆಗಳಿಗೆ ನೀರು ನುಗ್ಗಿದ ಪ್ರಕರಣಗಳು ನಡೆದಿವೆ.
ಸೂಕ್ತ ಚರಂಡಿ ವ್ಯವಸ್ಥೆ ಬೇಕು
ಪ.ಪಂ. ವ್ಯಾಪ್ತಿಯ ಕಾರ್ಕಡ ಮುಂತಾದ ಕಡೆಗಳಲ್ಲಿ ಹಾಗೂ ರಾ.ಹೆ.ಯಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ಮೇಲೆ ನೀರು ನಿಲ್ಲುವ ಪರಿಸ್ಥಿತಿ ಇದೆ. ಇದರಿಂದ ಪಾದಚಾರಿಗಳು, ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಅಗತ್ಯ ಕಡೆಗಳಲ್ಲಿ ಒಳಚರಂಡಿ ನಿರ್ಮಾಣ ಹಾಗೂ ನಿರ್ವಹಣೆ ಕುರಿತು ಸಂಬಂಧಪಟ್ಟವರು ಗಮನಹರಿಸಬೇಕಿದೆ.
– ಮಂಜುನಾಥ ನಾೖರಿ ಕಾರ್ಕಡ, ಸ್ಥಳೀಯ ನಿವಾಸಿ
ದೊಡ್ಡ ಸಮಸ್ಯೆ ಇಲ್ಲ
ಸಾಲಿಗ್ರಾಮದಲ್ಲಿ ಹೆಚ್ಚೇನು ಒಳಚರಂಡಿ ವ್ಯವಸ್ಥೆ ಇಲ್ಲ. ಇದುವರೆಗೆ ಮಳೆಗಾಲದಲ್ಲಿ ದೊಡ್ಡ ಸಮಸ್ಯೆ ಕೂಡ ಕಾಣಿಸಿಕೊಂಡಿಲ್ಲ. ಅಗತ್ಯವಿದ್ದಾಗ ಚರಂಡಿ ಹೂಳೆತ್ತುವ ಕುರಿತು ಕ್ರಮಕೈಗೊಳ್ಳಲಾಗುತ್ತದೆ. ಪ್ರತಿ ವರ್ಷ ಪೌರಕಾರ್ಮಿಕರನ್ನು ಬಳಸಿಕೊಂಡು ಪೊದೆಗಳನ್ನು ಸ್ವಚ್ಚಗೊಳಿಸಲಾಗುತ್ತದೆ. ಈ ಬಾರಿ ಕೂಡ ಚಾಲನೆ ನೀಡಲಾಗಿದೆ.
– ಶ್ರೀಪಾದ್ ಪುರೋಹಿತ್,ಮುಖ್ಯಾಧಿಕಾರಿಗಳು ಪ.ಪಂ.
– ಆರ್ಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?