ಇವರದ್ದು ಪ್ರತಿ ರವಿವಾರ ನಗರದಲ್ಲಿ ಸ್ವಚ್ಛತೆ ಸೇವೆ 


Team Udayavani, Jun 28, 2018, 6:10 AM IST

clean.jpg

ಉಡುಪಿ: ರವಿವಾರವೆಂದರೆ ಅನೇಕ ಮಂದಿ ಹೆಚ್ಚು ಹೊತ್ತು ನಿದ್ದೆ ಹೊಡೆಯುವ, ಹಾಯಾಗಿರುವ ದಿನ. ಆದರೆ ಇದಕ್ಕೆ ಅಪವಾದ ಈ ಸ್ವಚ್ಛತಾ ಸೇವಕರ ತಂಡ. ಇವರು ಪ್ರತಿ ರವಿವಾರ ಬೆಳಕು ಹರಿಯುತ್ತಿದ್ದಂತೆ ಪೊರಕೆ, ಬುಟ್ಟಿಗಳನ್ನು ಹಿಡಿದು ನಗರದಲ್ಲಿ ಕಸ ಹೆಕ್ಕಿ ಸ್ವಚ್ಛಮಾಡುವ ಕೆಲಸ ಆರಂಭಿಸುತ್ತಾರೆ.

ಒಂದೂವರೆ ವರ್ಷದಿಂದ ಕಾರ್ಯ 
ಉಡುಪಿ ಗಾಂಧಿ ಆಸ್ಪತ್ರೆಯ ನೇತೃತ್ವದಲ್ಲಿ ಆಸ್ಪತ್ರೆಯ ವೈದ್ಯರು, ಸಿಬಂದಿ ಆರಂಭಿಸಿರುವ ಸ್ವಚ್ಛತಾ ಕಾರ್ಯಕ್ಕೆ ಈಗ ಒಂದೂವರೆ ವರ್ಷ. ಈ ತಂಡದ ಜತೆಗೆ ಅನೇಕ ಮಂದಿ ಕೈಜೋಡಿಸಿ ಒಂದು ಮಾದರಿ ಅಭಿಯಾನವನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಹರಿಶ್ಚಂದ್ರ ಮತ್ತು ವೈದ್ಯಕೀಯ ನಿರ್ದೇಶಕ ಡಾ| ವ್ಯಾಸರಾಜ ತಂತ್ರಿ ಅವರು ನಗರ ಸ್ವಚ್ಛಗೊಳಿಸುವ ಪರಿಕಲ್ಪನೆಯನ್ನು ಸಾಕಾರಗೊಳಿಸಲು  2017 ಜ.12ರ ವಿವೇಕಾನಂದ ಜಯಂತಿಯಂದು ತೀರ್ಮಾನಿಸಿದರು. ಪೊರಕೆ, ಬುಟ್ಟಿ ಹಿಡಿದುಕೊಂಡು ಸಿಟಿಬಸ್‌ನಿಲ್ದಾಣ, ಕಲ್ಸಂಕ ಪರಿಸರದಲ್ಲಿ ಸ್ವಚ್ಛತಾ ಕೆಲಸ ಆರಂಭಿಸಿಯೇ ಬಿಟ್ಟರು. ಇದಕ್ಕೆ ಯುವಜನತೆ ಕೂಡ ಸಾಥ್‌ ನೀಡಿದರು. 

ದಾರಿಹೋಕರಿಗಾಗಿ
ದಾರಿಯಲ್ಲಿ ಹೋಗುವವರು ರಸ್ತೆ, ಚರಂಡಿಗಳಿಗೆ ಕಸ ಎಸೆಯಬಾರದು ಎಂಬ ದೃಷ್ಟಿಯಿಂದ ಡಸ್ಟ್‌ ಬಿನ್‌ಗಳನ್ನು ಇಟ್ಟಿದ್ದೇವೆ. ಇಲ್ಲಿ ನಗ‌ರಸಭೆಯವರು ಸ್ವಚ್ಛತಾ ಕೆಲಸ ಮಾಡುತ್ತಾರೆ. ಆದರೆ ನಾವು ಅವರಿಗೆ ಪೂರಕವಾಗಿ ಹಾಗೂ ಇತರರಿಗೆ ಪ್ರೇರಣೆಯಾಗಬೇಕೆಂಬ ಉದ್ದೇಶದಿಂದ ಮಾಡುತ್ತಿದ್ದೇವೆ. ಇಂತಹ ಕಾರ್ಯಕ್ರಮ ಆರಂಭಿಸುವವರಿಗೆ ಕಸದ ಬುಟ್ಟಿ ಸೇರಿದಂತೆ ಸಹಕಾರ ನೀಡಲು ಸಿದ್ಧರಿದ್ದೇವೆ ಎನ್ನುತ್ತಾರೆ ಡಾ| ವ್ಯಾಸರಾಜ ತಂತ್ರಿ ಅವರು. 

ಆಸ್ಪತ್ರೆಯ ದಾದಿಯರು, ಇತರ ಸಿಬಂದಿ ಮಾತ್ರವಲ್ಲದೆ ವೈದ್ಯರ ತಂಡವೂ ಪಾಲ್ಗೊಳ್ಳುತ್ತದೆ. ಆಡಳಿತ ನಿರ್ದೇಶಕ ಡಾ| ಹರಿಶ್ಚಂದ್ರ ಎಂ. ಅವರು ಇದುವರೆಗೆ ಒಂದೇ ಒಂದು ದಿನ ಕೂಡ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಳ್ಳುವುದನ್ನು ತಪ್ಪಿಸಿಲ್ಲ. ಈ ತಂಡದಲ್ಲಿ ಈಗ ಉಪನ್ಯಾಸಕರು, ನಿವೃತ್ತ ಬ್ಯಾಂಕ್‌ ಉದ್ಯೋಗಿಗಳು, ವಿದ್ಯಾರ್ಥಿಗಳೂ ಗುರುತಿಸಿಕೊಂಡಿದ್ದಾರೆ. ಸಾಮಾನ್ಯವಾಗಿ ತಂಡದ ಸಂಖ್ಯೆ 15ರಿಂದ 20 ಇರುತ್ತದೆ. ಮೊದಲ 25 ರವಿವಾರ “ನಮ್ಮ ಮನೆ ನಮ್ಮ ಮರ’ ತಂಡದ ಸದಸ್ಯರು ಕೂಡ ಪಾಲ್ಗೊಂಡಿದ್ದರು. 

ರವಿವಾರ ಒಂದು ಗಂಟೆ ಮೀಸಲು 
ಪ್ರತಿ ರವಿವಾರ ಬೆಳಗ್ಗೆ 6ರಿಂದ 7 ಗಂಟೆಯವರೆಗೆ ತಪ್ಪದೆ ಸ್ವಚ್ಛತಾ ಕಾರ್ಯ ನಡೆಸಲಾಗುತ್ತದೆ. ಬಸ್‌ನಿಲ್ದಾಣ ಪರಿಸರದಿಂದ ಕಲ್ಸಂಕದವರೆಗಿನ ಕಸವನ್ನು ಗುಡಿಸಿ ಸ್ವಚ್ಛಗೊಳಿಸಲಾಗುತ್ತದೆ. ಆಸ್ಪತ್ರೆಯ ವತಿಯಿಂದಲೇ ಕಸದ ಡಬ್ಬಗಳನ್ನು ಫ‌ುಟ್‌ಪಾತ್‌ ಪಕ್ಕದಲ್ಲಿ ಇಡಲಾಗಿದೆ. ನೀರು ನಿಲ್ಲದ ಈ ತೊಟ್ಟಿಗಳಲ್ಲಿ ಸಂಗ್ರಹವಾಗುವ ಕಸವನ್ನು ಸುಲಭವಾಗಿ ತೆಗೆಯಬಹುದು. ನಗರಸಭೆಯ ಪೌರಕಾರ್ಮಿಕರು ಕೂಡ ಆಗಾಗ್ಗೆ ಈ ಕಸದ ಡಬ್ಬಗಳನ್ನು ಖಾಲಿ ಮಾಡುತ್ತಾರೆ. 

ಸ್ವಚ್ಛತೆ ನಿರಂತರ 
ಸ್ವಚ್ಛಭಾರತವೆಂದರೆ ಅದು ಒಂದು ದಿನದ ಕೆಲಸವಲ್ಲ, ಸ್ವಚ್ಛತೆಯ ಜಾಗೃತಿ ನಮ್ಮಲ್ಲಿ ಸದಾ ಇರಬೇಕು. ನಾವು ಮಾಡುವುದನ್ನು ನೋಡಿ ಇತರರು ಮಾಡಬೇಕೆಂಬುದು ನಮ್ಮ ಇಚ್ಛೆ. ಜನರ ಮನಸ್ಥಿತಿ ಬದಲಾಯಿಸುವ ಆವಶ್ಯಕತೆ ಇದೆ. 
– ಡಾ| ವ್ಯಾಸರಾಜ ತಂತ್ರಿ, 
ವೈದ್ಯಕೀಯ ನಿರ್ದೇಶಕ

ಮಳೆಗಾಲಕ್ಕೂ ನಿಲ್ಲುವುದಿಲ್ಲ
ನಮ್ಮ ಸಿಬಂದಿ ಸಮಯ ಹೊಂದಾಣಿಕೆ ಮಾಡಿಕೊಂಡು ಸ್ವತ್ಛತಾ ಕಾರ್ಯದಲ್ಲಿ ಪಾಲ್ಗೊಳ್ಳುತ್ತಾರೆ. ಅವರ ಕೆಲಸದ ಅವಧಿಗೆ ತೊಂದರೆಯಾಗದಂತೆ ಸಮಯ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಮಳೆಗಾಲದಲ್ಲಿ ಕೊಡೆ ಹಿಡಿದುಕೊಂಡು ಕೂಡ ಉತ್ಸಾಹದಿಂದ ಪಾಲ್ಗೊಳ್ಳುತ್ತಾರೆ. ನಮ್ಮ ಜತೆಗೆ ಹಲವು ಸಾರ್ವಜನಿಕರು ಕೂಡ ಕೈಜೋಡಿಸಿದ್ದಾರೆ. 
– ಇಸುಬು,ಮ್ಯಾನೇಜರ್‌ ಗಾಂಧಿ ಆಸ್ಪತ್ರೆ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.