ಇನ್ನೂ ಈಡೇರಿಲ್ಲ ಕುರು ಜನರ ಸೇತುವೆಯ ಕನಸು

ಮಳೆಗಾಲದಲ್ಲಿ ನದಿ ದಾಟುವುದೇ ದೊಡ್ಡ ಸಾಹಸ; ಸಂಪರ್ಕಕ್ಕೆ ದೋಣಿಯೇ ಆಸರೆ

Team Udayavani, Jul 22, 2019, 5:02 AM IST

1807UPPE1-1

ವಿದ್ಯಾರ್ಥಿಗಳು ದೋಣಿಯಲ್ಲಿ ಸಾಗುತ್ತಿರುವುದು.

ಉಪ್ಪುಂದ: ಮರವಂತೆ ಕುರು ನಿವಾಸಿಗಳ ಬದುಕು ಅತ್ತ ಹೋಗದು ಇತ್ತ ಸಾಗದು ಎನ್ನುವಂತಾಗಿದೆ. ಸೌರ್ಪಣಿಕಾ ನದಿಯ ನಡುವೆ ಬದುಕುವ ಇವರಿಗೆ ದೋಣಿಯೇ ಸಂಪರ್ಕ ಕೊಂಡಿ. ಜನಪ್ರತಿನಿಧಿಗಳ ಭರವಸೆ ಈಡೇರದೆ ಉಳಿದಿದ್ದು ನಿವಾಸಿಗಳ ಬದುಕು ಅಭದ್ರತೆಯಿಂದ ಕೂಡಿದೆ.

ಕುರು ದ್ವೀಪ ಪ್ರದೇಶವಾಗಿದ್ದು, ನಾಡ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಸೇರಿದೆ. ಈ ಪ್ರದೇಶವು 40 ಎಕರೆ ಭೂ ಭಾಗ ಹೊಂದಿದೆ. 10 ಮನೆಗಳಿವೆ. ಮೊದಲು 100ಕ್ಕೂ ಅಧಿಕ ಜನರು ಇದ್ದು, ಈಗ 60 ಜನರು ವಾಸವಾಗಿದ್ದಾರೆ. ನಡು ರಾತ್ರಿಯಲ್ಲಿ ತುರ್ತು ಆರೋಗ್ಯ ದೃಷ್ಟಿಯಿಂದ ಆಸ್ಪತ್ರಗೆ ದಾಖಲಾಗಬೇಕಾದರೆ ದೋಣಿಗೇ ಅಂಟಿಕೊಳ್ಳಬೇಕು.

ದೋಣಿ ಇದ್ದರೆ ಬದುಕು
ಮಳೆಗಾಲದ ದಿನಗಳನ್ನು ಆತಂಕದಿಂದ ಕಳೆಯುತ್ತಿದ್ದು, ಸೌರ್ಪಣಿಕಾ ನದಿ ಮುನಿಸಿಕೊಂಡಾಗ ಮನೆಯೊಳಗೆ ನೀರು ತುಂಬಿರುತ್ತದೆ. ಮಳೆಗಾಲದಲ್ಲಿ ತುಂಬಿ ಹರಿಯುವ ನದಿಯನ್ನು ಭೇದಿಸಿಕೊಂಡು ತಾವೇ ಮುಂದಾಗಿ ದೋಣಿ ಬಳಸಿಕೊಂಡು ತಮ್ಮ ಕಾಯಕಗಳಿಗೆ ತೆರಳಬೇಕು.

ಮೊದಲು ಮರವಂತೆ ವರಹಾ ಸ್ವಾಮಿ ದೇವಸ್ಥಾನದ ಹತೀರ ಪಡುಕೋಣೆಗೆ ಹೋಗಲು ದೋಣಿ ವ್ಯವಸ್ಥೆ ಮಾಡಲಾಗಿತ್ತು, ಇದರಲ್ಲಿಯೇ ಜನ ಕರು ವಿಗೂ ಪಯಣ ಮಾಡುತ್ತಿದರು. ಇದೀಗ ಅಲ್ಲಿ ಸೇತುವೆ ನಿರ್ಮಾಣವಾಗಿದ್ದರಿಂದ ದೋಣಿ ವ್ಯವಸ್ಥೆಯನ್ನು ನಿಲ್ಲಿಸಿದ್ದು, ತಮ್ಮ ಮನೆಗಳ ದೋಣಿಯೇ ಗತಿಯಾಗಿದೆ.

ಸಂಕಷ್ಟದಲ್ಲಿ ವಿದ್ಯಾರ್ಥಿಗಳು
ಕುರುವಿನಿಂದ 20 ಮಕ್ಕಳು ನಾಡ ಕೋಟೆಗುಡ್ಡೆ ಹಾಗೂ ಇತರೆ ಶಾಲೆಗಳಿಗೆ ಹೋಗಿ ಬರಲು ದೋಣಿಯೇ ಆಸರೆಯಾಗಿದೆ. ನೀರಿನ ಅಬ್ಬರದ ನಡುವೆ ನದಿ ದಾಟುವಾಗ ಎದೆ ಝಲ್ಲೆನ್ನುತ್ತದೆ.

ಮಳೆಗಾಲದಲ್ಲಿ ಪ್ರತಿ ದಿನ ಬೆಳಗ್ಗೆ, ಸಂಜೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಲು ಸಾಹಸ ಮಾಡಬೇಕಾದ ಪರಿಸ್ಥಿತಿ.

ಕೃಷಿ ಚಟುವಟಿಕೆಗೆ ತೊಂದರೆ
ನದಿ ತುಂಬಿ ಹರಿಯುತ್ತಿರುವುದರಿಂದ ಜನತೆ ಕೃಷಿ ಉಪಕರಣಗಳನ್ನು ತರಲು ಹಾಗೂ ಬೆಳೆದ ಬೆಳೆಗಳನ್ನು ನಗರಕ್ಕೆ ಮಾರುಕಟ್ಟೆಗೆ ಸಾಗಿಸುವ ಸಂದರ್ಭ ಇವರ ಸ್ಥಿತಿ ತೀರಾ ಕಷ್ಟದ್ದು. ಮಳೆಗಾಲದಲ್ಲಿ ನೀರಿನ ಸೆಳೆತ ಅಧಿಕವಿದ್ದು. ಇಲ್ಲಿಂದ ವರಹಾ ದೇವಸ್ಥಾನದ ತೀರದ ವರೆಗೆ ಹೋಗಲು ಅಸಾಧ್ಯ.

ಮರವಂತೆ ಕೇಶವ ಬಬ್ಬೊàರ್ಯ ದೇವಸ್ಥಾನದ ಮೂಲಕ ಸುತ್ತು ಬಳಸಿ ಕಾಲು ದಾರಿಯಲ್ಲಿ ಕ್ರಮಿಸಿದಲ್ಲಿ ಮಾತ್ರ ಬೇಕಾದ ವಸ್ತುಗಳನ್ನು ತರಲು ಹೋಗಬಹುದಾಗಿದೆ.

ಕರುವಿನ ಜನರ ನೆಮ್ಮದಿಯ ಓಡಾಟಕ್ಕೆ ಸಂಬಂಧಪಟ್ಟ ಇಲಾಖೆ, ಜನಪ್ರತಿನಿಧಿಗಳು ಇನ್ನಾದರೂ ಸೇತುವೆ ಭಾಗ್ಯ ದೊರಕಿಸುತ್ತಾರೆಯೇ ಕಾದು ನೊಡಬೇಕಿದೆ..

ಬೇಡಿಕೆಗೆ ಸ್ಪಂದಿಸಿ
ಮಳೆಗಾಲದಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ನದಿ ದಾಟುವುದು ದುಸ್ಸಾಹಸ ಮಾಡಿದಂತೆ, ಮಳೆಗಾಲದಲ್ಲಿ ಆತಂಕದಿಂದಲ್ಲೇ ದಿನಗಳನ್ನು ದೂಡುವಂತಾಗಿದೆ. ಜನಪ್ರತಿನಿಧಿಗಳು ಸಮಸ್ಯೆಗಳನ್ನು ಅರಿತು ನಮ್ಮ ಬೇಡಿಕೆಗೆ ಸ್ಪಂದಿಸಲಿ.
ರಾಮಚಂದ್ರ ಹೆಬ್ಟಾರ್‌,
ಕುರು ನಿವಾಸಿ

ಬೇಡಿಕೆ ಪರಿಗಣಿಸಲಾಗಿದೆ
ಕುರು ಪ್ರದೇಶದ ಜನರ ಸಮಸ್ಯೆಗಳ ಕುರಿತು ತಿಳಿದಿದ್ದೇನೆ. ಸೇತುವೆ ನಿರ್ಮಾಣವನ್ನು ಆದ್ಯತೆಯ ಮೇರೆಗೆ ಪರಿಗಣಿಸುತ್ತೇನೆ.
-ಬಿ.ಎಂ. ಸುಕುಮಾರ್‌ ಶೆಟ್ಟಿ,
ಬೈಂದೂರು ಶಾಸಕರು

-ಕೃಷ್ಣ ಬಿಜೂರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.