Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ
ತೆಂಕನಿಡಿಯೂರು ಗ್ರಾಮದ ಪುರಾತನ ಅತೀ ದೊಡ್ಡ ಕೆರೆ ; ತುಂಬಿದೆ ಭಾರಿ ಪ್ರಮಾಣದ ಹೂಳು -ಕೆಸರು
Team Udayavani, May 26, 2024, 7:50 AM IST
ಮಲ್ಪೆ: ಒಂದು ಕಾಲದಲ್ಲಿ ಗ್ರಾಮದ ನೂರಾರು ಎಕ್ರೆ ಕೃಷಿ ಭೂಮಿಗೆ ನೀರುಣಿಸುತ್ತಿದ್ದ ತೊಟ್ಟಂ ಕುಮೆ ಕೆರೆ ಇಂದು ಕೆಸರಿನೊಂದಿಗೆ ಹೂಳು ತುಂಬಿಕೊಂಡು ತನ್ನ ನೈಜ್ಯ ಸೌಂದರ್ಯವನ್ನು ಕಳೆದುಕೊಂಡಿದೆ.
ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಟ್ಟಂ ಬಳಿಯ ಈ ಕುಮೆ ಕೆರೆ ಸುಮಾರು 2 ಎಕ್ರೆ ಅಧಿಕ ವಿಸ್ತೀರ್ಣ ಹೊಂದಿದ್ದು ಅತೀ ದೊಡ್ಡ ಕೆರೆ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿತ್ತು. ಆದರೆ ಇದೀಗ ಒತ್ತುವರಿಯಾಗಿ ಒಂದೂವರೆ ಎಕ್ರೆಯಷ್ಟು ಮಾತ್ರ ಉಳಿದಿದೆ.
ಭಾರಿ ಪ್ರಮಾಣದ ಹೂಳು
ಕೆರೆಯಲ್ಲಿ ತುಂಬಿರುವ ಭಾರಿ ಪ್ರಮಾಣದ ಹೂಳಿನಿಂದಾಗಿ ನೀರಿನ ಒರತೆಯೇ ಇಲ್ಲವಾಗಿದೆ. ಹಿಂದೆ ಮೇ ಕೊನೆಯ ವರೆಗೂ ಈ ಕೆರೆಯಲ್ಲಿ ನೀರು ತುಂಬಿಕೊಂಡಿರುತ್ತಿತ್ತಲ್ಲದೆ ಸುತ್ತಮುತ್ತಲಿನ ರೈತರು ಇದೇ ಕೆರೆಯ ನೀರನ್ನು ಉಪಯೋಗಿಸಿ ಹಿಂಗಾರು ಬೆಳೆ ಬೆಳೆಯುತ್ತಿದ್ದರು. ಒಂದು ವೇಳೆ ಕೆರೆಯಲ್ಲಿ ಹೂಳು ತೆಗೆದರೆ ಶಾಶ್ವತ ನೀರು ಸಿಗುವುದರಲ್ಲಿ ಸಂಶಯವೇ ಇಲ್ಲ , ಈ ಹಿನ್ನೆಲೆಯಲ್ಲಿ ಪುರಾತನ ಕೆರೆಯನ್ನು ಉಳಿಸುವಂತೆ ಈ ಭಾಗದ ನಾಗರಿಕರು ಒತ್ತಾಯಿಸಿದ್ದಾರೆ.
ಮೀನು ಹಿಡಿಯುವ ಸಂಪ್ರದಾಯ
ಪ್ರತಿ ಸೌರಮಾನ ಯುಗಾದಿಯಂದು ಜಾತಿ ಮತ ಭೇದವಿಲ್ಲದೆ ಊರಿನವರೆಲ್ಲ ಸೇರಿ ಈ ಕೆರೆಯಲ್ಲಿ ಬಲೆ ಹಾಕಿ ಮೀನು ಹಿಡಿದು ಸಂಭ್ರಮಿಸುವ ಸಂಪ್ರದಾಯ ನಡೆಯುತ್ತಿತ್ತು. ಇತ್ತೀಚಿನ ಕೆಲವೊಂದು ವರ್ಷಗಳಲ್ಲಿ ಕೆರೆಯಲ್ಲಿ ಆ ವೇಳೆ ನೀರಿನ ಪ್ರಮಾಣ ಕಡಿಮೆಯಾಗಿ ಕೆಸರು ತುಂಬಿಕೊಂಡು ಮೀನಿನ ಸಂತತಿಯೇ ಇಲ್ಲದಂತಾಗಿದೆ. ಮೀನು ಹಿಡಿಯುವ ಸಂಪ್ರದಾಯವೂ ನಿಂತು ಹೋಗಿದೆ ಎನ್ನಲಾಗಿದೆ.
ಅಭಿವೃದ್ಧಿಗೆ ಆಗ್ರಹ
ಸುಮಾರು 15 ವರ್ಷಗಳ ಹಿಂದೆ ಈ ಕೆರೆಯ ಹೂಳನ್ನು ತೆಗೆಯಲಾಗಿತ್ತು. ಅಲ್ಲಿಂದ ಇಂದಿನವರೆಗೂ ಇಲ್ಲಿ ಯಾವ ಕಾಮಗಾರಿಯೂ ನಡೆಯದ ಕಾರಣ ಪಾಳು ಬಿದ್ದಿದೆ. ಈಗಾಗಲೇ ಕೆರೆಯ ಅಭಿವೃದ್ಧಿಗೆ ಹಲವಾರು ಗ್ರಾಮಸ್ಥರು ಸಂಬಂಧಪಟ್ಟ ಇಲಾಖೆಗೆ, ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಕೂಡ ಸರಕಾರ ಮಾತ್ರ ಯಾವುದೇ ಕ್ರಮ ತೆಗೆದುಕೊಂಡಿಲ್ಲ . ಗ್ರಾಮ ಪಂಚಾಯತ್ ಕೆರೆಯ ಉಳಿವಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಮುಂದಿನ ವರ್ಷ ಆರಂಭಕ್ಕೆ ಮನವಿ
ಕಾಮಗಾರಿ ಆರಂಭಿಸಲು ಇಲಾಖೆ ಮುಂದಾಗಿ ದ್ದರೂ, ಈ ಬಾರಿ ಮಳೆ ವಿಳಂಬವಾಗಿದ್ದರಿಂದ ಕೆರೆ ನೀರನ್ನು ಬೇರೆ ಕಡೆಗೆ ಡೈವರ್ಟ್ ಮಾಡಿದರೆ ಸಮಸ್ಯೆಯಾಗಬಹುದೆಂದು ತೆಂಕನಿಡಿಯೂರು ಗ್ರಾ. ಪಂ. ಆಡಳಿತ ಕಾಮಗಾರಿಯನ್ನು ಮುಂದಿನ ವರ್ಷ ಆರಂಭಿಸುವಂತೆ ಮನವಿ ಮಾಡಿದೆ. 4 ಕೋ. ರೂ. ವೆಚ್ಚದ ಈ ಯೋಜನೆಯಲ್ಲಿ ಹೂಳೆತ್ತುವಿಕೆ, ಕೆರೆಯ ಸುತ್ತಲೂ ದಂಡೆ ರಚನೆ, ವಾಕಿಂಗ್ಟ್ರ್ಯಾಕ್ ಮಾಡಲಾಗುತ್ತದೆ.
-ಅರುಣ್ ಭಂಡಾರಿ, ಎ.ಇ.ಇ.,
ಸಣ್ಣ ನೀರಾವರಿ ಇಲಾಖೆ, ಉಡುಪಿ
ಕೆರೆ ಅಭಿವೃದ್ಧಿಗೆ ಸಹಕಾರ
ಕೆರೆಯ ಹೂಳು ತೆಗೆದು ಸುತ್ತ ತಡೆಗೋಡೆ ನಿರ್ಮಿಸಿ ಮೇಲೆ ದಂಡೆ ಹಾಕಿ ಸುತ್ತಲೂ ಇಂಟರ್ಲಾಕ್ ಅಳವಡಿಸಿ ವಾಕಿಂಗ್ ಟ್ರ್ಯಾಕ್ ಮಾಡಿದರೆ ವಾಯು ವಿಹಾರಕ್ಕೆ ಯೋಗ್ಯವಾಗಿದೆ. ಜತೆಗೆ ಪ್ರಕೃತಿ ಪ್ರಿಯರ ನೆಚ್ಚಿನ ತಾಣವಾಗಬಹುದು, ಅಂತರ್ಜಲ ಸಂರಕ್ಷಣೆಗೂ ಸಹಕಾರಿಯಾದಂತಾಗುತ್ತದೆ. ಈ ಬಗ್ಗೆ ಈಗಾಗಲೇ ಗಣೇಶೋತ್ಸವ ಸಮಿತಿಯ ವತಿಯಿಂದ ಎಲ್ಲ ಇಲಾಖೆಗೆ ಮನವಿ ಮಾಡಿ ಆಗ್ರಹಿಸಲಾಗಿದೆ.
– ಪ್ರಶಾಂತ್ ಕೆ. ಸಾಲ್ಯಾನ್, ಅಧ್ಯಕ್ಷರು,
ಸಾರ್ವಜನಿಕ ಗಣೇಶೋತ್ಸವ ಸಮಿತಿ, ತೊಟ್ಟಂ
-ನಟರಾಜ್ ಮಲ್ಪೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ
Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು
PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ
Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು
Kapu ಮೂಳೂರು: ಲಾರಿಯಿಂದ ಬಿದ್ದು ಗಾಯ
MUST WATCH
ಹೊಸ ಸೇರ್ಪಡೆ
IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ
Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು
ಕಾಂಚನ್ಜುಂಗಾ ಎಕ್ಸ್ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ
Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ
ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.