Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

ತೆಂಕನಿಡಿಯೂರು ಗ್ರಾಮದ ಪುರಾತನ ಅತೀ ದೊಡ್ಡ ಕೆರೆ ; ತುಂಬಿದೆ ಭಾರಿ ಪ್ರಮಾಣದ ಹೂಳು -ಕೆಸರು

Team Udayavani, May 26, 2024, 7:50 AM IST

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

ಮಲ್ಪೆ: ಒಂದು ಕಾಲದಲ್ಲಿ ಗ್ರಾಮದ ನೂರಾರು ಎಕ್ರೆ ಕೃಷಿ ಭೂಮಿಗೆ ನೀರುಣಿಸುತ್ತಿದ್ದ ತೊಟ್ಟಂ ಕುಮೆ ಕೆರೆ ಇಂದು ಕೆಸರಿನೊಂದಿಗೆ ಹೂಳು ತುಂಬಿಕೊಂಡು ತನ್ನ ನೈಜ್ಯ ಸೌಂದರ್ಯವನ್ನು ಕಳೆದುಕೊಂಡಿದೆ.

ತೆಂಕನಿಡಿಯೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೊಟ್ಟಂ ಬಳಿಯ ಈ ಕುಮೆ ಕೆರೆ ಸುಮಾರು 2 ಎಕ್ರೆ ಅಧಿಕ ವಿಸ್ತೀರ್ಣ ಹೊಂದಿದ್ದು ಅತೀ ದೊಡ್ಡ ಕೆರೆ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿತ್ತು. ಆದರೆ ಇದೀಗ ಒತ್ತುವರಿಯಾಗಿ ಒಂದೂವರೆ ಎಕ್ರೆಯಷ್ಟು ಮಾತ್ರ ಉಳಿದಿದೆ.

ಭಾರಿ ಪ್ರಮಾಣದ ಹೂಳು
ಕೆರೆಯಲ್ಲಿ ತುಂಬಿರುವ ಭಾರಿ ಪ್ರಮಾಣದ ಹೂಳಿನಿಂದಾಗಿ ನೀರಿನ ಒರತೆಯೇ ಇಲ್ಲವಾಗಿದೆ. ಹಿಂದೆ ಮೇ ಕೊನೆಯ ವರೆಗೂ ಈ ಕೆರೆಯಲ್ಲಿ ನೀರು ತುಂಬಿಕೊಂಡಿರುತ್ತಿತ್ತಲ್ಲದೆ ಸುತ್ತಮುತ್ತಲಿನ ರೈತರು ಇದೇ ಕೆರೆಯ ನೀರನ್ನು ಉಪಯೋಗಿಸಿ ಹಿಂಗಾರು ಬೆಳೆ ಬೆಳೆಯುತ್ತಿದ್ದರು. ಒಂದು ವೇಳೆ ಕೆರೆಯಲ್ಲಿ ಹೂಳು ತೆಗೆದರೆ ಶಾಶ್ವತ ನೀರು ಸಿಗುವುದರಲ್ಲಿ ಸಂಶಯವೇ ಇಲ್ಲ , ಈ ಹಿನ್ನೆಲೆಯಲ್ಲಿ ಪುರಾತನ ಕೆರೆಯನ್ನು ಉಳಿಸುವಂತೆ ಈ ಭಾಗದ ನಾಗರಿಕರು ಒತ್ತಾಯಿಸಿದ್ದಾರೆ.

ಮೀನು ಹಿಡಿಯುವ ಸಂಪ್ರದಾಯ
ಪ್ರತಿ ಸೌರಮಾನ ಯುಗಾದಿಯಂದು ಜಾತಿ ಮತ ಭೇದವಿಲ್ಲದೆ ಊರಿನವರೆಲ್ಲ ಸೇರಿ ಈ ಕೆರೆಯಲ್ಲಿ ಬಲೆ ಹಾಕಿ ಮೀನು ಹಿಡಿದು ಸಂಭ್ರಮಿಸುವ ಸಂಪ್ರದಾಯ ನಡೆಯುತ್ತಿತ್ತು. ಇತ್ತೀಚಿನ ಕೆಲವೊಂದು ವರ್ಷಗಳಲ್ಲಿ ಕೆರೆಯಲ್ಲಿ ಆ ವೇಳೆ ನೀರಿನ ಪ್ರಮಾಣ ಕಡಿಮೆಯಾಗಿ ಕೆಸರು ತುಂಬಿಕೊಂಡು ಮೀನಿನ ಸಂತತಿಯೇ ಇಲ್ಲದಂತಾಗಿದೆ. ಮೀನು ಹಿಡಿಯುವ ಸಂಪ್ರದಾಯವೂ ನಿಂತು ಹೋಗಿದೆ ಎನ್ನಲಾಗಿದೆ.

ಅಭಿವೃದ್ಧಿಗೆ ಆಗ್ರಹ
ಸುಮಾರು 15 ವರ್ಷಗಳ ಹಿಂದೆ ಈ ಕೆರೆಯ ಹೂಳನ್ನು ತೆಗೆಯಲಾಗಿತ್ತು. ಅಲ್ಲಿಂದ ಇಂದಿನವರೆಗೂ ಇಲ್ಲಿ ಯಾವ ಕಾಮಗಾರಿಯೂ ನಡೆಯದ ಕಾರಣ ಪಾಳು ಬಿದ್ದಿದೆ. ಈಗಾಗಲೇ ಕೆರೆಯ ಅಭಿವೃದ್ಧಿಗೆ ಹಲವಾರು ಗ್ರಾಮಸ್ಥರು ಸಂಬಂಧಪಟ್ಟ ಇಲಾಖೆಗೆ, ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಕೂಡ ಸರಕಾರ ಮಾತ್ರ ಯಾವುದೇ ಕ್ರಮ ತೆಗೆದುಕೊಂಡಿಲ್ಲ . ಗ್ರಾಮ ಪಂಚಾಯತ್‌ ಕೆರೆಯ ಉಳಿವಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಮುಂದಿನ ವರ್ಷ ಆರಂಭಕ್ಕೆ ಮನವಿ
ಕಾಮಗಾರಿ ಆರಂಭಿಸಲು ಇಲಾಖೆ ಮುಂದಾಗಿ ದ್ದರೂ, ಈ ಬಾರಿ ಮಳೆ ವಿಳಂಬವಾಗಿದ್ದರಿಂದ ಕೆರೆ ನೀರನ್ನು ಬೇರೆ ಕಡೆಗೆ ಡೈವರ್ಟ್‌ ಮಾಡಿದರೆ ಸಮಸ್ಯೆಯಾಗಬಹುದೆಂದು ತೆಂಕನಿಡಿಯೂರು ಗ್ರಾ. ಪಂ. ಆಡಳಿತ ಕಾಮಗಾರಿಯನ್ನು ಮುಂದಿನ ವರ್ಷ ಆರಂಭಿಸುವಂತೆ ಮನವಿ ಮಾಡಿದೆ. 4 ಕೋ. ರೂ. ವೆಚ್ಚದ ಈ ಯೋಜನೆಯಲ್ಲಿ ಹೂಳೆತ್ತುವಿಕೆ, ಕೆರೆಯ ಸುತ್ತಲೂ ದಂಡೆ ರಚನೆ, ವಾಕಿಂಗ್‌ಟ್ರ್ಯಾಕ್ ಮಾಡಲಾಗುತ್ತದೆ.
-ಅರುಣ್‌ ಭಂಡಾರಿ, ಎ.ಇ.ಇ.,
ಸಣ್ಣ ನೀರಾವರಿ ಇಲಾಖೆ, ಉಡುಪಿ

ಕೆರೆ ಅಭಿವೃದ್ಧಿಗೆ ಸಹಕಾರ
ಕೆರೆಯ ಹೂಳು ತೆಗೆದು ಸುತ್ತ ತಡೆಗೋಡೆ ನಿರ್ಮಿಸಿ ಮೇಲೆ ದಂಡೆ ಹಾಕಿ ಸುತ್ತಲೂ ಇಂಟರ್‌ಲಾಕ್‌ ಅಳವಡಿಸಿ ವಾಕಿಂಗ್ ಟ್ರ್ಯಾಕ್ ಮಾಡಿದರೆ ವಾಯು ವಿಹಾರಕ್ಕೆ ಯೋಗ್ಯವಾಗಿದೆ. ಜತೆಗೆ ಪ್ರಕೃತಿ ಪ್ರಿಯರ ನೆಚ್ಚಿನ ತಾಣವಾಗಬಹುದು, ಅಂತರ್ಜಲ ಸಂರಕ್ಷಣೆಗೂ ಸಹಕಾರಿಯಾದಂತಾಗುತ್ತದೆ. ಈ ಬಗ್ಗೆ ಈಗಾಗಲೇ ಗಣೇಶೋತ್ಸವ ಸಮಿತಿಯ ವತಿಯಿಂದ ಎಲ್ಲ ಇಲಾಖೆಗೆ ಮನವಿ ಮಾಡಿ ಆಗ್ರಹಿಸಲಾಗಿದೆ.
– ಪ್ರಶಾಂತ್‌ ಕೆ. ಸಾಲ್ಯಾನ್‌, ಅಧ್ಯಕ್ಷರು,
ಸಾರ್ವಜನಿಕ ಗಣೇಶೋತ್ಸವ ಸಮಿತಿ, ತೊಟ್ಟಂ

-ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.