“ಸಾವಿರ ವೃಕ್ಷ’ ಅಭಿಯಾನಕ್ಕೆ ಸಾಲುಮರದ ತಿಮ್ಮಕ್ಕ ಚಾಲನೆ

ಉಡುಪಿಯಲ್ಲಿ ತಿಮ್ಮಕ್ಕ ಜತೆ ವಿದ್ಯಾರ್ಥಿಗಳ ಸಂಭ್ರಮ

Team Udayavani, Sep 17, 2019, 5:17 AM IST

160919ASTRO01

ಉಡುಪಿ: ಉಡುಪಿ ಯಲ್ಲಿ ಸೋಮವಾರ ಯುವಕರು, ಹಿರಿಯರು, ಕಿರಿಯರು, ವಿದ್ಯಾರ್ಥಿಗಳಿಗೆ ವಿಶಿಷ್ಟ ರೀತಿಯ ಸಂಭ್ರಮ. ಇದಕ್ಕೆ ಕಾರಣರಾದವರು ಶತಾಯುಷಿ ಸಾಲು ಮರದ ತಿಮ್ಮಕ್ಕ. ಉಡುಪಿ ಬಡಗಬೆಟ್ಟು ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ ಲಿ. ಆಯೋಜಿಸಿದ್ದ “ಶತಮಾನ ಕಂಡ ಸಂಸ್ಥೆಯೊಂದಿಗೆ ಶತಾಯುಷಿ ತಿಮ್ಮಕ್ಕ’ ಕಾರ್ಯಕ್ರಮದಲ್ಲಿ ತಿಮ್ಮಕ್ಕ ಅವರು ಸಾವಿರ ವೃಕ್ಷ ಬೆಳೆಸುವ ಅಭಿಯಾನಕ್ಕೆ ಚಾಲನೆ ನೀಡಿ ಉಡುಪಿ ಜನರೊಂದಿಗೆ ಕೆಲವು ಹೊತ್ತು ಕಳೆದರು.

ಕ್ರಿಶ್ಚಿಯನ್‌ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಸಾಲುಮರದ ತಿಮ್ಮಕ್ಕ ಅವರಿಂದ ಸಸಿಗಳನ್ನು ಸ್ವೀಕರಿಸಿ ಅವರ ಕಾಲಿಗೆರಗಿ ಆಶೀರ್ವಾದ ಪಡೆದು ಖುಷಿಪಟ್ಟರು. ಉಡುಪಿಯ ಅನೇಕ ಮಂದಿ ಹಿರಿಯ ನಾಗರಿಕರು, ಯುವಕರು ತಿಮ್ಮಕ್ಕ ಅವರಿಂದ ಗಿಡ ಪಡೆಯಲು ಮುಗಿಬಿದ್ದರು. ಎಲ್ಲರಿಗೂ ಲವಲವಿಕೆಯಿಂದಲೇ ಗಿಡ ವಿತರಿಸಿದ ತಿಮ್ಮಕ್ಕ ಸಸಿಗಳನ್ನು ಮಕ್ಕಳಂತೆ ಪೋಷಿಸುವಂತೆ ಸಲಹೆ ನೀಡಿದರು.

ವಿಕೋಪ ಎಚ್ಚರಿಕೆ ಇರಲಿ
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಉಡುಪಿ ಎಡಿಸಿ ಬಿ. ಸದಾಶಿವ ಪ್ರಭು ಅವರು ಮಾತನಾಡಿ “ಪ್ರಾಕೃತಿಕ ಅಸಮತೋಲನ, ದುರಂತಗಳು ನಡೆಯುತ್ತಲೇ ಇವೆ. ಜನರು ಈ ಬಗ್ಗೆ ಹೆಚ್ಚು ಜಾಗೃತರಾಗಬೇಕು. ಪರಿಸರವನ್ನು ಉಳಿಸಲು ಎಚ್ಚೆತ್ತುಕೊಳ್ಳಬೇಕು. ಇಂಥ ಕೆಲಸಗಳು ಕೇವಲ ಸರಕಾರ ಗಳಿಂದ ಮಾತ್ರವೇ ಸಾಧ್ಯವಾಗದು. ಇದಕ್ಕೆ ನಾಗರಿಕರೂ ಕೂಡ ಕೈ ಜೋಡಿಸಬೇಕು. ಆಗ ಮಾತ್ರವೇ ಮುಂದೆ ನಡೆಯಬಹುದಾದ ಪ್ರಾಕೃತಿಕ ದುರಂತಗಳನ್ನು ತಪ್ಪಿಸಬಹುದಾಗಿದೆ’ ಎಂದು ಹೇಳಿದರು.

ತಿಮ್ಮಕ್ಕ ಅವರನ್ನು ಬಡಗಬೆಟ್ಟು ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ ವತಿಯಿಂದ ಸಮ್ಮಾನಿಸಿ 25,000 ರೂ. ನಗದು ನೀಡಿ ಪುರಸ್ಕರಿಸಲಾಯಿತು. ಪೊಲೀಸ್‌ ವೃತ್ತ ನಿರೀಕ್ಷಕ ಮಂಜುನಾಥ್‌ ಅವರು ಇಲಾಖೆಯ ವತಿಯಿಂದ ಸಮ್ಮಾನಿಸಿದರು. ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಚಂದ್ರಪ್ರತಿಮಾ, ಸೊಸೈಟಿಯ ಅಧ್ಯಕ್ಷ ಸಂಜೀವ ಕಾಂಚನ್‌, ಉಪಾಧ್ಯಕ್ಷ ಎಲ್‌.ಉಮಾನಾಥ್‌, ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಶತಮಾನೋತ್ಸವ ಸಮಿತಿಯ ಸಂಚಾಲಕ ಪುರುಷೋತ್ತಮ ಪಿ. ಶೆಟ್ಟಿ ಉಪಸ್ಥಿತರಿದ್ದರು. ಅವಿನಾಶ್‌ ಕಾಮತ್‌ ಕಾರ್ಯಕ್ರಮ ನಿರ್ವಹಿಸಿದರು. ಜಾನಪದ, ಪ್ರಾಚ್ಯ ಸಂಶೋಧಕ ಎಸ್‌.ಎ. ಕೃಷ್ಣಯ್ಯ ಅವರು ಮರಗಳ ಮಹತ್ವವನ್ನು ವಿವರಿಸಿದರು.

ದೀಪ ಬೆಳಗಿ
ಗಮನ ಸೆಳೆದ ತಿಮ್ಮಕ್ಕ
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸುವಾಗ ಆರತಿ, ಪ್ರಾರ್ಥನೆ ಮಾಡುವ ಮೂಲಕ ತಿಮ್ಮಕ್ಕ ಗಮನ ಸೆಳೆದರು. ಇದು ಅಲ್ಲಿ ಒಂದು ಕ್ಷಣ ಮೌನ ವಾತಾವರಣ ನಿರ್ಮಿಸಿತು. ಸೊಸೈಟಿ ಕಚೇರಿಯೊಳಗೆ ತೆರಳಿದ ತಿಮ್ಮಕ್ಕ ಅವರಿಗೆ “ಸೊಸೈಟಿಗೆ 100 ವರ್ಷಗಳಾಗಿವೆ’ ಎಂದು ಸೊಸೈಟಿಯವರು ತಿಳಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ತಿಮ್ಮಕ್ಕ “ಅದು ನನಗಿಂತ ಚಿಕ್ಕದು. ನನಗೆ 108 ಆಯಿತು’ ಎಂದರು !.

ಎಲ್ಲ ವಾರ್ಡ್‌ಗಳಲ್ಲಿ
ಗಿಡ ನೆಡಲಾಗುವುದು
“ಉಡುಪಿಯ ಈ ಹಿಂದಿನ ಜಿಲ್ಲಾಧಿಕಾರಿಯವರ ಸೂಚನೆಯಂತೆ ಈ ವರ್ಷ ನಗರಸಭೆ ಎಲ್ಲ ವಾರ್ಡ್‌ಗಳಲ್ಲಿ ಗಿಡ ನೆಡುವ ಸಾಂಕೇತಿಕ ಕಾರ್ಯಕ್ರಮ ನಡೆಸಲಾಗಿದೆ. ಮುಂದಿನ ವರ್ಷ ಎಲ್ಲ ವಾರ್ಡ್‌ಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ನಗರಸಭೆ ವತಿಯಿಂದ ಅರಣ್ಯ ಇಲಾಖೆಯ ಸಹಕಾರದಲ್ಲಿ ಗಿಡಮರಗಳನ್ನು ಬೆಳೆಸಲಾಗುವುದು’ ಎಂದು ನಗರಸಭೆ ಆಯುಕ್ತ ಆನಂದ ಸಿ.ಕಲ್ಲೋಳಿಕರ್‌ ತಿಳಿಸಿದರು.

ತಿಮ್ಮಕ್ಕನಂಥವರು ಹುಟ್ಟಿಲ್ಲ
ತಿಮ್ಮಕ್ಕನವರೊಂದಿಗೆ 18 ವರ್ಷಗಳಿಂದ ರಾಜ್ಯ, ದೇಶದ ಮೂಲೆ ಮೂಲೆಗಳಿಗೆ ಸುತ್ತುತ್ತಿದ್ದೇನೆ. ತಿಮ್ಮಕ್ಕನವರಂಥ ಪ್ರತಿಫ‌ಲಾಪೇಕ್ಷೆ ರಹಿತ, ನಿಷ್ಕಲ್ಮಶ ಮನಸ್ಸು ಇರುವವರು ಈ ಭೂಮಿಯಲ್ಲಿಲ್ಲ. ಅವರಂಥವರು ಮತ್ತೆ ಹುಟ್ಟಿ ಬರಲು ಶತಮಾನಗಳೇ ಬೇಕಾಗಬಹುದು. ತಿಮ್ಮಕ್ಕನವರ ಪ್ರೇರಣೆಯಿಂದ ಪ್ರತಿಯೋರ್ವರು ವರ್ಷಕ್ಕೆ ಕನಿಷ್ಠ 10 ಗಿಡಗಳನ್ನಾದರೂ ಬೆಳೆಸಬೇಕು. ಪ್ಲಾಸ್ಟಿಕ್‌ ತ್ಯಜಿಸಬೇಕು.
– ಉಮೇಶ್‌,ಸಾಲುಮರದ ತಿಮ್ಮಕ್ಕನವರ ದತ್ತುಪುತ್ರ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.