Tiger claw case: ದೂರು ಕರೆಗಳ ಸುರಿಮಳೆ!
Team Udayavani, Oct 28, 2023, 12:50 AM IST
ಉಡುಪಿ: ರಾಜ್ಯದಲ್ಲಿ ವನ್ಯಜೀವಿ ಕಾಯ್ದೆ ಉಲ್ಲಂಘನೆ ಸಂಬಂಧಿಸಿ ಹುಲಿ ಉಗುರು ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಜಿಲ್ಲೆಯಲ್ಲಿ ದೂರು ಕರೆಗಳ ಸಂಖ್ಯೆ ಹೆಚ್ಚಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳಿಂದ ತಿಳಿದು ಬಂದಿದೆ.
ವ್ಯಕ್ತಿಯ ಕೊರಳಿನ ಸರದಲ್ಲಿ ಹುಲಿ ಉಗುರು ಇದೆ. ಮನೆಯಲ್ಲಿ ಜಿಂಕೆ ಕೊಂಬು ಇರಿಸಿಕೊಂಡಿದ್ದಾರೆ ಸೇರಿದಂತೆ ಹಲವು ದೂರು ಕರೆಗಳು ಇಲಾಖೆಗೆ ಬರುತ್ತಿವೆ. ಲಿಖೀತವಾಗಿ ಯಾರು ದೂರು ಸಲ್ಲಿಸಿಲ್ಲ. ದೂರವಾಣಿ ಮೂಲಕ ಬಂದಿರುವ ದೂರುಗಳನ್ನು ಪರಿಶೀಲಿಸುತ್ತಿದ್ದೇವೆ. ಸದ್ಯಕ್ಕೆ ವನ್ಯಜೀವಿ ಕಾಯ್ದೆ ಉಲ್ಲಂಘನೆ ಸಂಬಂಧಿಸಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅರಣ್ಯ ಇಲಾಖೆಯ ಕುಂದಾಪುರ ಉಪ ವಿಭಾಗದ ಡಿಎಫ್ಒ ಉದಯ ನಾಯ್ಕ ತಿಳಿಸಿದ್ದಾರೆ.
ದೂರು ನೀಡುವ ಸಾರ್ವಜನಿಕರು ಅಧಿಕಾರಿಗಳ ಮೊಬೈಲ್ ಸಂಖ್ಯೆಗೆ ಕರೆ ಮಾಡದೆ ಅರಣ್ಯ ಇಲಾಖೆ ದೂರು ವಿಭಾಗ 1926ಕ್ಕೆ ದೂರು ನೀಡಬೇಕು. ಅಲ್ಲಿಗೆ ನೀಡಿದ ದೂರು ಅಧಿಕೃತವಾಗಿ ದಾಖಲಾಗುತ್ತದೆ. ಈ ಮೂಲಕ ತನಿಖೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸರಕಾರದಿಂದ ಹೊಸ ಮಾರ್ಗಸೂಚಿ ಸಾಧ್ಯತೆ
ಈಗಾಗಲೇ ಮನೆಗಳಲ್ಲಿ ನವಿಲು ಗರಿ ಹೊಂದಿರುವುದು, ಹುಲಿ ಉಗುರು ಸಹಿತ ಮೊದಲಾದ ಪುರಾತನ ಪಳಿಯುಳಿಕೆ ಇದ್ದರೆ ಏನು ಮಾಡಬೇಕು ಎಂಬ ಪ್ರಶ್ನೆಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ. ಹುಲಿ ಉಗುರು, ನವಿಲು ಗರಿ, ಚರ್ಮ, ಕೊಂಬು ಇಟ್ಟುಕೊಳ್ಳುವುದು ವನ್ಯಜೀವಿ ಕಾಯ್ದೆ ಉಲ್ಲಂಘನೆಯಾಗಲಿದೆ.
ರಾಜ್ಯ ಸರಕಾರ ಈ ಬಗ್ಗೆ ಗೊಂದಲ ನಿವಾರಿಸಲು ಸಮಿತಿಯೊಂದನ್ನು ರಚಿಸಿದ್ದು, ಈ ಸಮಿತಿ ನಿರ್ಣಯ ತೆಗೆದುಕೊಂಡು ಇನ್ನೆರಡು ದಿನಗಳಲ್ಲಿ ಹೊಸ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಮೂಲಗಳಿಂದ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ