ಕುಂದಾಪುರ: ಮರಳಿ ಬಿಗಿದ ಮರಳು ಉರುಳು

ಮರಳುಗಾರಿಕೆ ಸ್ಥಗಿತ; 8 ಮೆ.ಟನ್‌ ಮಾತ್ರ ಬಾಕಿ; 22 ಬ್ಲಾಕ್‌ಗಳಿಗೆ ಇನ್ನೂ ಸಿಗದ ಅನುಮತಿ

Team Udayavani, Jan 21, 2020, 7:44 AM IST

sad-40

ಕುಂದಾಪುರ: ಕಾರ್ಮಿಕರು ಕೃಷಿ ಚಟುವಟಿಕೆಗೆ ತೆರಳಿದ ಕಾರಣ ಕುಂದಾಪುರದ ಸಿಹಿನೀರ ಮರಳುಗಾರಿಕೆ ಸ್ಥಗಿತವಾಗಿದ್ದು, ಮತ್ತೆ ಮರಳಿನ ಉರುಳು ಬಾಧಿಸತೊಡಗಿದೆ.
ಕುಂದಾಪುರ, ಬ್ರಹ್ಮಾವರ, ಉಡುಪಿ, ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ 24 ಮರಳು ಅಡ್ಡೆಗಳಿದ್ದರೂ 2 ಅಡ್ಡೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಇದರಿಂದ ಮರಳು ಅಭಾವ ಸೃಷ್ಟಿಯಾಗಿದೆ.

ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅನುಮತಿ ನೀಡಲು ಗುರುತಿಸಲಾದ 24 ಬ್ಲಾಕ್‌ಗಳಿವೆ. ಹಾಲಾಡಿ ಹೊಳೆ, ವಾರಾಹಿ ನದಿ, ಸೀತಾ ನದಿ, ಮಡಿಸಾಲು ಹೊಳೆ, ಶಾಂಭವಿ ನದಿ, ದುರ್ಗಾ ಹೊಳೆ, ಸುಧಾ ಹೊಳೆ, ಗುಂಡಾಳ ಹೊಳೆ, ತೀಥೊìಟ್ಟು ಹೊಳೆಯಲ್ಲಿ ಒಟ್ಟು 43.3 ಹೆಕ್ಟೇರ್‌ ವಿಸ್ತೀರ್ಣದಲ್ಲಿ 1.99 ಲಕ್ಷ ಮೆ.ಟನ್‌ ಮರಳು ನಿಕ್ಷೇಪ ಇದೆ.

ಮೀಸಲಾತಿ
ಮರಳುಗಾರಿಕೆ ಟೆಂಡರ್‌ ವಹಿಸಲು ಮೀಸಲಾತಿಯನ್ನು ಕೂಡ ನಿಗದಿಗೊಳಿಸ ಲಾಗಿದೆ. ಜಿಲ್ಲೆಯಲ್ಲಿ ಮರಳಿನ ದೊಡ್ಡ ಬ್ಲಾಕ್‌ ಎಂದರೆ ಬಳ್ಕೂರು. ಇಲ್ಲಿ 33,116 ಮೆಟ್ರಿಕ್‌ ಟನ್‌ ಮರಳು ತೆಗೆಯಬಹುದು. ಹಾಲಾಡಿ, ಹೆಂಗವಳ್ಳಿ, ಕುಳ್ಳುಂಜೆಯಲ್ಲಿ 24,701 ಮೆಟ್ರಿಕ್‌ ಟನ್‌, ಅಂಪಾರಿನ ಎರಡು ಬ್ಲಾಕ್‌ಗಳಲ್ಲಿ 36,870 ಮೆಟ್ರಿಕ್‌ ಟನ್‌, ಕುಳ್ಳುಂಜೆಯಲ್ಲಿ 13,044 ಮೆಟ್ರಿಕ್‌ ಟನ್‌, ಬ್ರಹ್ಮಾವರದ ಹೊಸೂರಿನಲ್ಲಿ 10,436 ಮೆಟ್ರಿಕ್‌ ಟನ್‌ ತೆಗೆಯಬಹುದು. ಆದರೆ ಕಂಡೂÉರು, ಬಳ್ಕೂರು, ಹಿರಿಯಡ್ಕದಲ್ಲಿ ಬಜೆ ಡ್ಯಾಮಿನ ಮರಳು, ಬ್ರಹ್ಮಾವರ ಧಕ್ಕೆ ಬಿಟ್ಟರೆ ಬೇರೆಲ್ಲೂ ಏಲಂ ಪ್ರಕ್ರಿಯೆ ನಡೆದಿಲ್ಲ. ಅಧಿಸೂಚನೆಯಾಗಿದ್ದರೂ ಟೆಂಡರ್‌ ಕರೆದಿಲ್ಲ.

ಬಿಗಡಾಯಿಸಿದ ಸಮಸ್ಯೆ
ಸರಕಾರಿ ಕಾಮಗಾರಿಗಳಿಗೆ ಬಜೆ ಡ್ಯಾಮಿನ ಮರಳು, ಹಿನ್ನೀರಿನ ಮರಳು ಬಳಸಲಾಗುತ್ತದೆಯಾದರೂ ಮನೆಯಂತಹ ಕಾಮಗಾರಿಗಳಿಗೆ ನಾನ್‌ ಸಿಆರ್‌ಝೆಡ್‌ ಪ್ರದೇಶದ ಸಿಹಿನೀರ ಮರಳಿಗೆ ಹೆಚ್ಚು ಬೇಡಿಕೆಯಿದೆ. ಕಂಡೂರು, ಬಳ್ಕೂರಿನಲ್ಲಿ ಮಾತ್ರ ಇದು ಲಭ್ಯ. ಮರಳು ತೆಗೆಯುವ ಕಾರ್ಮಿಕರು ಕೃಷಿ ಚಟುವಟಿಕೆಗೆ ತೆರಳಿದ್ದಾರೆ ಎಂಬ ಕಾರಣ ನೀಡಲಾಗುತ್ತಿದೆ. ತೂಗುವ ಯಂತ್ರ ಅಳವಡಿಸಿಲ್ಲ ಎಂದು ಈ ಹಿಂದೆ ಜಿಲ್ಲಾಡಳಿತ ಮರಳುಗಾರಿಕೆ ಸ್ಥಗಿತಗೊಳಿಸಿತ್ತು.

ಆ್ಯಪ್‌ಗೆ ಬೇಡಿಕೆ
ದ.ಕ. ಮತ್ತು ಹಿರಿಯಡ್ಕದಲ್ಲಿ ಆ್ಯಪ್‌ ಮೂಲಕ ಮರಳು ನೀಡುತ್ತಿದ್ದು, ಕುಂದಾಪುರದಲ್ಲಿ ಮಾತ್ರ ಕೌಂಟರ್‌ಗೆ ತೆರಳಿ ಬುಕ್ಕಿಂಗ್‌ ಮಾಡುವ ಕ್ರಮ ಇದೆ. ಪಾರದರ್ಶಕ ವ್ಯವಸ್ಥೆ ಕಾಪಾಡಲು ಇಲ್ಲೂ ಆ್ಯಪ್‌ ಮೂಲಕ ವಿತರಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಬೇಡಿಕೆ ಸಲ್ಲಿಸಲಾಗಿದೆ.

ಅರ್ಹರೇ ಇಲ್ಲ!
ಮರಳು ಗುತ್ತಿಗೆಗೆ ಸರಕಾರ ನಿಗದಿಪಡಿಸಿದ ನಿಯಮಗಳ ಪ್ರಕಾರ ಅರ್ಹ ಗುತ್ತಿಗೆದಾರರೇ ಇಲ್ಲ ! ಎರಡು ಬಾರಿ ಟೆಂಡರ್‌ ಕರೆಯ ಲಾಗಿದ್ದರೂ ಇಬ್ಬರು ಮಾತ್ರ ಗುತ್ತಿಗೆ ಪಡೆದಿದ್ದಾರೆ. ಎರಡು ಬಾರಿ ಟೆಂಡರ್‌ ಕರೆದರೂ ಎರಡು ಕಡೆಗೆ ಮಾತ್ರ ಟೆಂಡರ್‌ ಆಗಿದೆ. ಇತರೆಡೆಗೆ ಅರ್ಹ ಗುತ್ತಿಗೆದಾರರು ಬಿಡ್‌ ಮಾಡಿಲ್ಲ. ಆದ್ದರಿಂದ ಟೆಂಡರ್‌ ನಿಯಮ ಸಡಿಲಿಸಲು ಸರಕಾರಕ್ಕೆ ಅನುಮತಿಗಾಗಿ ಬರೆಯಲಾಗಿದೆ. ನಿಯಮ ಸಡಿಲಿಕೆಯಾಗಿ ಬಂದ ಬಳಿಕ ಟೆಂಡರ್‌ ಕರೆಯಲಾಗುವುದು.
ಜಿ. ಜಗದೀಶ್‌, ಜಿಲ್ಲಾಧಿಕಾರಿ, ಉಡುಪಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.