ಸಕಾಲ ಸೇವೆ, ಯೋಜನೆ ಹೊರಗೆ ವಿತರಿಸಿದರೆ ಮೊಕದ್ದಮೆ: ಎಡಿಸಿ


Team Udayavani, Sep 19, 2019, 5:56 AM IST

1809UDU19

ಉಡುಪಿ: ಸಾರ್ವಜನಿಕರಿಗೆ ಸಕಾಲದಲ್ಲಿ ಯೋಜನೆಯಲ್ಲಿ ಅಳವಡಿಸಿರುವ ಸೇವೆಗಳನ್ನು ಸಕಾಲ ತಂತ್ರಾಂಶದ ಮೂಲಕವೇ ಸ್ವೀಕರಿಸಿ, ಸೇವೆಗಳನ್ನು ಒದಗಿಸಬೇಕು. ಸಕಾಲ ತಂತ್ರಾಂಶವನ್ನು ಬೈಪಾಸ್‌ ಮಾಡಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಕಾಲ ಸೇವೆಗಳ ಅಧಿನಿಯಮದ ಸಮರ್ಪಕ ಅನುಷ್ಠಾನದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸರಕಾರವು ಸಾರ್ವಜನಿಕರಿಗೆ ಶೀಘ್ರದಲ್ಲಿ ಅಗತ್ಯ ಸೇವೆಗಳು ದೊರೆಯುವ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಿಂದ ಪಡೆಯುವ ದಾಖಲೆಗಳಿಗೆ ಅಧಿಕೃತ ಮಾನ್ಯತೆ ಸಹ ಇರುವುದರಿಂದ, ಸಾರ್ವಜನಿಕರಿಗೆ ಸಕಾಲ ತಂತ್ರಾಂಶದ ಮೂಲಕವೇ ನಿಗದಿಪಡಿಸಿರುವ ಸೇವೆಗಳನ್ನು ಒಗದಿಸಬೇಕು. ನಿಗದಿಪಡಿಸಿದ ಸೇವೆಗಳನ್ನು ಸಕಾಲ ತಂತ್ರಾಂಶದ ಮೂಲಕ ನೀಡದೇ ಬೈಪಾಸ್‌ ಮಾಡುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವುದಾಗಿ ಅವರು ತಿಳಿಸಿದರು.

ಸಕಾಲ ವ್ಯಾಪ್ತಿಯಲ್ಲಿ ಬಹುತೇಕ ಎಲ್ಲಾ ಇಲಾಖೆಗಳ ಸೇವೆಗಳು ಲಭ್ಯವಿದ್ದು, ಸಕಾಲ ತಂತ್ರಾಂಶದ ಮೂಲಕ ಈ ಸೇವೆಗಳನ್ನು ಒದಗಿಸದೇ ಇದ್ದಲ್ಲಿ ಅಂತಹ ಇಲಾಖೆಯ ಪ್ರಗತಿ ಶೂನ್ಯ ದಾಖಲಾಗಲಿದ್ದು, ಆಗಸ್ಟ್‌ ತಿಂಗಳಲ್ಲಿ ಜಿಲ್ಲೆಯ 98 ಗ್ರಾ.ಪಂ.ಗಳು ಸಕಾಲ ತಂತ್ರಾಂಶದ ಮೂಲಕ ಯಾವುದೇ ಸೇವೆ ನೀಡದ ಕಾರಣ ಶೂನ್ಯ ಪ್ರಗತಿಯಾಗಿದ್ದು, ಅಂತಹ ಪಂಚಾಯತ್‌ಗಳಿಗೆ ನೋಟೀಸ್‌ ನೀಡಲಾಗಿದೆ.

ರಾಜ್ಯ ಮಟ್ಟದಲ್ಲಿ ಯಾವುದೇ ಯೋಜನೆಯ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ, ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದೆ. ಆದರೆ ಸಕಾಲ ಅರ್ಜಿ ಪ್ರಗತಿಯಲ್ಲಿ ಕೆಲವು ತಿಂಗಳಿಂದ ಅಗ್ರಸ್ಥಾನ ಪಡೆಯುವಲ್ಲಿ ವಿಫ‌ಲವಾಗಿದೆ.

ರಾಜ್ಯದ ಸಕಾಲ ಮಿಶನ್‌ ಅಧಿಕಾರಿಗಳು ರಾಜ್ಯದ್ಯಾಂತ ಎಲ್ಲ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅವರು ಭೇಟಿ ನೀಡಿ ಪರಿಶೀಲನೆ ನಡೆಸುವ ವೇಳೆ, ಯಾವುದೇ ಇಲಾಖೆಯಲ್ಲಿ ಸಕಾಲ ಸೇವೆಯನ್ನು ಒದಗಿಸುವಲ್ಲಿ ಲೋಪ ಕಂಡುಬರಬಾರದು ಎಂದು ಎಡಿಸಿ ಹೇಳಿದರು. ಸಭೆಯಲ್ಲಿ ಜಿಲ್ಲೆಯ ಎಲ್ಲ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.