“ಮರೆಗುಳಿತನಕ್ಕೆ ಸಕಾಲಿಕ ಚಿಕಿತ್ಸೆ’


Team Udayavani, Sep 22, 2018, 7:00 AM IST

2109gk1.jpg

ಉಡುಪಿ: ದೊಡ್ಡಣಗುಡ್ಡೆಯ ಡಾ| ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಮಾಹೆ ವಿವಿಯ ಆಕ್ಯುಪೇಶನಲ್‌ ತೆರಪಿ ವಿಭಾಗ ಮತ್ತು ಹಿರಿಯ ನಾಗರಿಕರ ವೇದಿಕೆಯ ಆಶ್ರಯದಲ್ಲಿ ವಿಶ್ವ ಮರೆ ಗುಳಿತನ ದಿನಾಚರಣೆ ಕಮಲಾ ಎ. ಬಾಳಿಗಾ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. 

ಕಾರ್ಯಕ್ರಮವನ್ನು ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಸಿ. ಎಸ್‌. ರಾವ್‌ ಉದ್ಘಾಟಿಸಿ, ಮಾತನಾಡಿ, ಮರೆಗುಳಿತನದಿಂದ ರೋಗಿಗಿಂತ ಅಧಿಕ ಬಾಧೆ ಪಡುವವರು ರೋಗಿಯ ಸಂಬಂಧಿಕರು. ಏಕೆಂದರೆ ಅವರಿಗೆ ಆ ಸಮಸ್ಯೆಯ ಅರಿವು ಇರುವುದಿಲ್ಲ. ಮರೆಗುಳಿತನ ಸಮಸ್ಯೆಯ ಸ್ವಭಾವ ಕಂಡಾಗ ತತ್‌ಕ್ಷಣ ಅವರಿಗೆ ಚಿಕಿತ್ಸೆ ಕೊಡಿಸಿದಲ್ಲಿ ಅನುಕೂಲಕರ. ಮುಂದೆ ಸಮಸ್ಯೆಯ ಪ್ರಮಾಣವನ್ನು ಕಡಿಮೆ ಮಾಡಬಹುದು ಎಂದರು. 

ಅಧ್ಯಕ್ಷತೆ ವಹಿಸಿದ್ದ ಡಾ| ಪಿ. ವಿ ಭಂಡಾರಿ, ಮರೆಗುಳಿತನದ ಕುರಿತು ಜನರಿಗೆ ಅರಿವು ಮೂಡಿಸುವುದು ಅವಶ್ಯವಾಗಿದೆ. ಕೆಲವರು ಮರೆತವರಂತೆ ನಟಿಸುತ್ತಾರೆ ಎಂದೆಣಿಸುತ್ತದೆ. ಆದರೆ ಅದು ಅವರ ಸಮಸ್ಯೆಯಾಗಿರಬಹುದು. ಇದಕ್ಕೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಬೇಕಾಗುತ್ತದೆ. ಕಾಯಿಲೆಯ ಲಕ್ಷಣಗಳು ಕಂಡು ಬಂದಾಗಲೇ ಚಿಕಿತ್ಸೆ ನೀಡಿದಲ್ಲಿ ನರಕೋಶಗಳು ಸಾಯುವುದನ್ನು ತಡೆಯಬಹುದು. 60 ವರ್ಷದ ಮೇಲೆ ಸಾಕಷ್ಟು ಲವಲವಿಕೆಯಿಂದ ಇರುವಂತೆ ನೋಡಿಕೊಳ್ಳಬೇಕು. ರಕ್ತದೊತ್ತಡ, ಸಕ್ಕರೆ ಕಾಯಿಲೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಎಂದರು. 

ಡಾ|ಪಿ.ವಿ. ಭಂಡಾರಿ, ವಿರೂಪಾಕ್ಷ ದೇವರಮನೆ ಮತ್ತು ಡಾ| ಕೆ.ಎಸ್‌. ಲತಾ ಅವರಿಂದ ಮಾಹಿತಿ ಕಾರ್ಯಕ್ರಮ ನಡೆಯಿತು. ಮನೋ ವೈದ್ಯ ಡಾ| ದೀಪಕ ಮಲ್ಯ, ಹಿರಿಯ ನಾಗರಿಕ ವೇದಿಕೆಯ ಉಪಾಧ್ಯಕ್ಷ ವಿಶ್ವನಾಥ ಹೆಗ್ಡೆ, ಕೆಎಂಸಿಯ ನೇತ್ರ ತಜ್ಞೆ ಲಾವಣ್ಯ ಜಿ. ರಾವ್‌ ಉಪಸ್ಥಿತರಿದ್ದರು. ಸೌಜನ್ಯ ಶೆಟ್ಟಿ ಪ್ರಾಸ್ತಾವಿಸಿದರು. ನಾಗರಾಜ್‌ ಸ್ವಾಗತಿಸಿ, ವೀಣಾ ಮತ್ತು ರಮಣಿ ನಿರೂಪಿಸಿ, ಮುಝಾಮಿ ವಂದಿಸಿದರು. 

ಮರೆಗುಳಿತನಕ್ಕೆ ಪ್ರಮುಖ ಕಾರಣಗಳು
ಮರೆಗುಳಿತನ ಎನ್ನುವುದು 50 ವರ್ಷದ ಬಳಿಕ ಸಾಮಾನ್ಯ. ಈ ಕಾಯಿಲೆಗೆ ಪ್ರಮುಖ ಕಾರಣ ಎಂದರೆ, ಪಾರ್ಶ್ವವಾಯು ಆದಾಗ, ಮೆದುಳಿಗೆ ಸೋಂಕು ತಗುಲಿದಾಗ, ಪಾರ್ಕಿನ್‌ಸನ್‌ ಕಾಯಿಲೆಯಿಂದ ಬರುವ ಸಾಧ್ಯತೆ ಇದೆ. ಇದರ ಪರಿಣಾಮ ಕೆಲವರು ಡಿಪ್ರಶನ್‌, ಗೊಂದಲಕ್ಕೊಳಗಾಗುವುದು, ನಡವಳಿಕೆಯಲ್ಲಿ ಬದಲಾವಣೆ ಕಂಡುಬರುವ ಸಮಸ್ಯೆಗಳು ಬರುತ್ತದೆ. ಈ ಕಾಯಿಲೆಗೆ ಸೂಕ್ತ ಚಿಕಿತ್ಸೆ ಇಲ್ಲದ್ದಿದ್ದರೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವುದರಿಂದ ಸಮಸ್ಯೆಯ ತೀವ್ರತೆಯನ್ನು ಕಡಿಮೆ ಮಾಡಬಹುದು.
– ಡಾ| ಭಂಡಾರಿ

ಕಾರ್ಯಕ್ರಮವನ್ನು ಸಿ. ಎಸ್‌. ರಾವ್‌ ಉದ್ಘಾಟಿಸಿದರು.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.